ಧೇಯಕ ಅನುಮೋದನೆಗೆ ಸಹಿ ಸಂಗ್ರಹ ಅಭಿಯಾನ
Team Udayavani, Oct 4, 2017, 11:43 AM IST
ಬೆಂಗಳೂರು: “ಕರ್ನಾಟಕ ಭೂ ಸುಧಾರಣೆಗಳ ವಿಧೇಯಕ-2016′ ವಿಧೇಯಕ ಅನುನೋದಿಸುವಂತೆ ರಾಷ್ಟ್ರಪತಿಗಳನ್ನು ಕೋರಿ ಹಮ್ ಗೋರ್ ಕಟಮಾಳ್ಳೋ ಲಂಬಾಣಿ ಸಂಘಟನೆ ಆರಂಭಿಸಿರುವ ಸಹಿಸಂಗ್ರಹ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹಾಗೂ ಲಂಬಾಣಿ ಸಮುದಾಯದ ಮುಖಂಡರು ಸಹಿಹಾಕುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿ, ಆದಷ್ಟು ಶೀಘ್ರವಾಗಿ ಈ ಮಸೂದೆ ಜಾರಿಯಾಗಬೇಕು, ಇದರಿಂದ ಲಂಬಾಣಿ ಹಾಗೂ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಂದಾಯ ಗ್ರಾಮಗಳಾಗಿ ಪರಿಗಣಿತವಾಗದೇ, ಮೂಲಸೌಕರ್ಯಗಳಿಂದ ವಂಚಿತವಾಗಿರುವ ತಾಂಡಾ, ಹಾಡಿ ಸೇರಿದಂತೆ ಮತ್ತಿತರ ಕಡೆ ವಾಸಿಸುವ ಲಂಬಾಣಿ ಸೇರಿದಂತೆ ಶೋಷಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದು ಹಾಗೂ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕರ್ನಾಟಕ ಭೂ ಸುಧಾರಣೆ ವಿಧೇಯಕ -2016ರನ್ನು ರಾಜ್ಯಸರ್ಕಾರ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಿಕೊಟ್ಟಿದೆ.
ಈ ನಿಟ್ಟಿನಲ್ಲಿ ಮಸೂದೆ ಅನುಮೋದಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ನೀಡಲು ಹಮ್ ಗೋರ್ ಕಟಮಾಳ್ಳೋ ಲಂಬಾಣಿ ಸಂಘಟನೆ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು, ಅಕ್ಟೋಬರ್ 10ರವರೆಗೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ಕಚೇರಿಗಳ ಮುಂದೆ ಸಹಿಸಂಗ್ರಹ ಮಾಡಲಾಗುವುದು ಎಂದು ಸಂಘಟನೆಯ ಈರಪ್ಪನಾಯ್ಕ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.