ಮತ್ತೆ ನಡೆಯಲಿದೆ “ಸೀಮಾತೀತ ಸಾಹಿತ್ಯ ಪರ್ಬ’


Team Udayavani, Mar 13, 2020, 11:40 AM IST

ಮತ್ತೆ ನಡೆಯಲಿದೆ “ಸೀಮಾತೀತ ಸಾಹಿತ್ಯ ಪರ್ಬ’

ಬೆಂಗಳೂರು: ಜಾತಿ, ವರ್ಣ, ಜನಾಂಗ, ಭಾಷೆ, ಗಡಿ, ಪ್ರಾದೇಶಿಕತೆಗಳನ್ನು ಮೀರಿ ಚಿಂತಿಸುವ “ಸೀಮಾತೀತ ಸಾಹಿತ್ಯ ಪರ್ಬ’ಹಮ್ಮಿಕೊಳ್ಳುವ ಬಗ್ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಆಲೋಚನೆ ನಡೆಸಿದೆ.

ಈ ಹಿಂದೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಡಾ.ಅರವಿಂದ ಮಾಲಗತ್ತಿ ಅವರು “ಸೀಮಾತೀತ ಸಾಹಿತ್ಯ ಪರ್ಬ’ಎಂಬ ವಿಭಿನ್ನರೂಪದ ಕಾರ್ಯಕ್ರಮ ರೂಪಿಸಿದ್ದರು. ಜತೆಗೆ, ಈ ಸಾಹಿತ್ಯ ಹಬ್ಬವನ್ನು ಹಮ್ಮಿಕೊಳ್ಳಲು ಮುಂದಾಗಿದ್ದರು.

ಆ ಹಿನ್ನೆಲೆಯಲ್ಲಿ ರಾಜ್ಯವಷ್ಟೇ ಅಲ್ಲ, ಹೊರ ರಾಜ್ಯಗಳ ಸಂಶೋಧಕರು, ವಿದ್ವಾಂಸರು, ಅಧ್ಯಾಪಕರು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 500 ಮಂದಿ ಸಾಹಿತ್ಯ ಹಬ್ಬದಲ್ಲಿ ಭಾಗವಹಿಸುವ ಸಲುವಾಗಿಯೇ ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದರು. ಆದರೆ, ಸರ್ಕಾರ ಬದಲಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಅರವಿಂದ ಮಾಲಗತ್ತಿ ಅವರು ದಿಢೀರ್‌ ಆಗಿ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆ ಕಾರಣಕ್ಕಾಗಿಯೇ ರವೀಂದ್ರ ಕಲಾಕ್ಷೇತ್ರದಲ್ಲಿ (ಈ ಹಿಂದೆ ಆಗಸ್ಟ್‌ 1 ರಿಂದ 3ವರೆಗೆ) ನಡೆಯಬೇಕಾಗಿದ್ದ “ಸೀಮಾತೀತ ಸಾಹಿತ್ಯ ಪರ್ಬ’ ಸ್ಥಗಿತಗೊಂಡಿತ್ತು.

ಸಂಶೋಧನಾ ದೃಷ್ಟಿಯಿಂದ ಇದೊಂದು ಉತ್ತಮ ಕಾರ್ಯಕ್ರಮವಾಗಿದೆ. ಆ ಹಿನ್ನೆಲೆಯಲ್ಲಿಯೇ “ಸೀಮಾತೀತ ಸಾಹಿತ್ಯ ಪರ್ಬ’ ಸೇರಿದಂತೆ ಈ ಹಿಂದಿನ ಅಕಾಡೆಮಿಯ ಸದಸ್ಯರು ರೂಪಿಸಿದ ಇನ್ನೂ ಕೆಲವು ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವ ಕುರಿತಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಲ್ಲಿ ಚರ್ಚೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

“ಸೀಮಾತೀತ ಸಾಹಿತ್ಯ ಪರ್ಬ’ ಹಮ್ಮಿಕೊಳ್ಳುವ ಬಗ್ಗೆ ಚಿಂತನೆ ಇದೆ. ಆದರೆ, ನಾನೊಬ್ಬನೆ ಎಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಆ ಹಿನ್ನೆಲೆಯಲ್ಲಿಯೇ ಅಕಾಡೆಮಿಯ ಎಲ್ಲಾ ಸದಸ್ಯರೊಂದಿಗೆ ಚರ್ಚಿಸಿ ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ್‌ ಅವರು “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಇದು ಭಿನ್ನವಾದ ಸಾಹಿತ್ಯ ಸಮ್ಮೇಳನ :  ಸಂಶೋಧನಾ ಕ್ಷೇತ್ರಕ್ಕೆ ಭದ್ರ ಬುನಾದಿಯನ್ನು ಹಾಕುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಜತೆಗೆ, ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರೀತಿಯಲ್ಲಿ ಭಿನ್ನವಾದ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಉದ್ದೇಶವನ್ನು ಹೊಂದಲಾಗಿತ್ತು. ಸಂಶೋಧನಾ ಕ್ಷೇತ್ರದ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವ ಆಶಯ ಇದರಲ್ಲಿತ್ತು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಅರವಿಂದ ಮಾಲಗತ್ತಿ ಹೇಳಿದ್ದಾರೆ. “ಸೀಮಾತೀತ ಸಾಹಿತ್ಯ ಪರ್ಬ’ಕ್ಕಾಗಿಯೇ ಅಕಾಡೆಮಿ ವತಿಯಿಂದ ಸುಮಾರು 30 ಲಕ್ಷ ರೂ.ಅನುದಾನ ಮೀಸಲಿಡಲಾಗಿತ್ತು. ಕೇರಳ, ಮದ್ರಾಸ್‌, ಮುಂಬೈ, ಹೈದ್ರಾಬಾದ್‌ ಸೇರಿದಂತೆ ದೇಶದ ಹಲವು ಕಡೆಗಳಿಂದ ಸಂಶೋಧಕರು ಕೂಡ ಹೆಸರನ್ನು ನೋಂದಾಯಿಸಿ ಕೊಂಡಿದ್ದರು. ವಿವಿಧ ರಾಜ್ಯಗಳ ಸಾಹಿತಿಗಳು, ಸಂಶೋಧಕರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಒಂದೇ ವೇದಿಕೆಗೆ ತಂದು ಭಿನ್ನವಾದಂತಹ ಸಾಹಿತ್ಯ ಸಮ್ಮೇಳನ ನಡೆಸುವ ಆಲೋಚನೆ ನಮ್ಮದಾಗಿತ್ತು ಎಂದು ಅವರು ತಿಳಿಸಿದ್ದಾರೆ.

ತುಳುವಿನ ಪರ್ಬ ಶಬ್ಧ ಪ್ರಚಲಿತಕ್ಕೆ ಬರಬೇಕು :  “ಪರ್ಬ’ಎಂಬ ಶಬ್ಧವನ್ನು ಸಮ್ಮೇಳನದ ಶೀರ್ಷಿಕೆಗೆ ಬಳಕೆ ಮಾಡಲಾಗಿದೆ. ತುಳು ಭಾಷೆಯಲ್ಲಿ “ಪರ್ಬ’ ಎಂದರೆ ಹಬ್ಬ ಎಂಬರ್ಥ ಬರುತ್ತದೆ. ನಮ್ಮ ಸಾಂಸ್ಕೃತಿಕ ಬೇರುಗಳು ಸ್ಥಳೀಯ ಭಾಷೆಯೊಂದಿಗೆ ಹೆಚ್ಚು ಸಂಬಂಧವನ್ನು ಹೊಂದಿವೆ. ನಾವು ಸ್ಥಳೀಯ ಭಾಷೆಗಳ ಜತೆಗೆ ಮೇಲೇಳಬೇಕು. ಆಗ ದೇಶಿಯತೆ ಎಂಬುವುದು ಪ್ರಬುದ್ಧತೆಗೆ ತಲುಪುತ್ತದೆ. ದೇಶಿಯ ಭಾಷೆಗಳ ಜತೆಗೆ ಒಡನಾಡಬೇಕು ಎಂಬ ಆಶಯ ಕೂಡ ಇದರಲ್ಲಿದೆ. ಇಂಗ್ಲಿಷ್‌, ಸಂಸ್ಕೃತ, ಹಿಂದಿ ಪದಗಳನ್ನು ಧಾರಾಳವಾಗಿ ಕನ್ನಡಕ್ಕೆ ಸ್ವೀಕರಿಸುತ್ತೇವೆ. ನಮ್ಮದೇ ಪ್ರಾದೇಶಿಕ ಭಾಷೆಗಳಿಂದ ಏಕೆ ಸ್ವೀಕರಿಸಬಾರದು ಎಂಬ ಕಾರಣಕ್ಕೆ ಈ “ಪರ್ಬ’ ಪದವನ್ನು ಬಳಸಿಕೊಳ್ಳಲಾಗಿತ್ತು ಎಂದು ಅರವಿಂದ ಮಾಲಗತ್ತಿ ತಿಳಿಸಿದರು.

ಅಕಾಡೆಮಿ ಈ ಹಿಂದೆ ರೂಪಿಸಿದ್ದ “ಸೀಮಾತೀತ ಸಾಹಿತ್ಯ ಪರ್ಬ’ ಅತ್ಯುತ್ತಮ ಕಾರ್ಯಕ್ರಮವಾಗಿದೆ. ಸಂಶೋಧನಾ ಕ್ಷೇತ್ರಕ್ಕೆ ಅನುಕೂಲವಾಗುವ ಆ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತಂತೆ ಚಿಂತನೆ ನಡೆದಿದೆ. ಈ ಬಗ್ಗೆ ಅಕಾಡೆಮಿ ಸದಸ್ಯರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. –ಡಾ.ಬಿ.ವಿ.ವಸಂತಕುಮಾರ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.