ವಿದ್ಯುತ್‌ ಹೊರೆ ಇಳಿಕೆಗೆ “ಸ್ಮಾರ್ಟ್‌’ ಐಡಿಯಾ


Team Udayavani, Aug 18, 2018, 2:35 PM IST

vidyt-hore.jpg

ಬೆಂಗಳೂರು: “ಪೀಕ್‌ ಅವರ್‌’ನಲ್ಲಿ ಉಂಟಾಗುವ ವಿದ್ಯುತ್‌ ಹೊರೆಯನ್ನು ನಿಭಾಯಿಸಲು “ಸ್ಮಾರ್ಟ್‌ ಐಡಿಯಾ’ ಮಾಡಿರುವ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ), ಈ ನಿಗದಿತ ಅವಧಿಯಲ್ಲಿ ಬಳಸುವ ವಿದ್ಯುತ್‌ಗೆ ಹೆಚ್ಚುವರಿ ದರ ವಿಧಿಸಲು ಚಿಂತನೆ ನಡೆಸಿದೆ. ಇದಕ್ಕಾಗಿ ಸುಧಾರಿತ ಸ್ಮಾರ್ಟ್‌ ಮೀಟರ್‌ ಅಳವಡಿಸಲು ಉದ್ದೇಶಿಸಿದೆ.

ಇದು ವಿದ್ಯುತ್‌ ಲೋಡ್‌ ನಿರ್ವಹಣಾ ವ್ಯವಸ್ಥೆಯನ್ನು ಒಳಗೊಂಡಿದ್ದು, “ಪೀಕ್‌ ಅವರ್‌’ನಲ್ಲಿ (ಹೆಚ್ಚು ಲೋಡ್‌ ಇರುವ ಅವಧಿ) ಬಳಸುವ ವಿದ್ಯುತ್‌ ಬಗ್ಗೆ ಗ್ರಾಹಕರಿಗೆ ಮುನ್ಸೂಚನೆ ನೀಡಲಿದೆ. ನಂತರ ಆ ಅವಧಿಯಲ್ಲಿ ಬಳಸುವ ವಿದ್ಯುತ್‌ ಅನ್ನು ಲೆಕ್ಕಹಾಕಿ, ಹೆಚ್ಚುವರಿ ದರ ವಿಧಿಸಲಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಈ ಪ್ರಯೋಗ ನಡೆಯುತ್ತಿದೆ. ಪೀಕ್‌ ಅವರ್‌ನಲ್ಲಿ ವಿದ್ಯುತ್‌ ದರ ಹೆಚ್ಚಾಗುವುದರಿಂದ  ಈ ಅವಧಿಯಲ್ಲಿ ಬಳಕೆಯ ಆಯ್ಕೆ ಗ್ರಾಹಕರಿಗೆ ಬಿಟ್ಟದ್ದು.

ಈ ಮೂಲಕ ಸಾರ್ವಜನಿಕ ಸಹಭಾಗಿತ್ವದಲ್ಲಿ ಯಾವುದೇ ಹೆಚ್ಚುವರಿ ವಿದ್ಯುತ್‌ ಖರೀದಿ ಮತ್ತು ಅದರ ಪೂರೈಕೆಗೆ ತಗಲುವ ವೆಚ್ಚವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸುವ ವಿನೂತನ ಪ್ರಯೋಗಕ್ಕೆ ಬೆಸ್ಕಾಂ ಮುಂದಾಗಿದ್ದು, ನಗರ ಮತ್ತು ಗ್ರಾಮಾಂತರಕ್ಕೆ ಹೊಂದಿಕೊಂಡ ಚಂದಾಪುರ ಉಪವಿಭಾಗದಲ್ಲಿ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗುತ್ತಿದೆ. 

ಉದಾಹರಣೆಗೆ ಬೆಂಗಳೂರಿನಲ್ಲಿ “ಪೀಕ್‌ ಅವರ್‌’ನಲ್ಲಿ ವಿದ್ಯುತ್‌ ಬೇಡಿಕೆ 3,700 ಮೆ.ವಾ. ಇರುತ್ತದೆ. ಬೇಸಿಗೆಯಲ್ಲಿ ಅದು ಏಕಾಏಕಿ 4 ಸಾವಿರ ಮೆ.ವಾ. ತಲುಪಬಹುದು. ಆಗ ಹೆಚ್ಚುವರಿ ವಿದ್ಯುತ್‌ ಅನ್ನು ಸರಿದೂಗಿಸಲು ಖರೀದಿ ಮಾಡಬೇಕು. ಅದರ ಪೂರೈಕೆಗೆ ಮೂಲಸೌಕರ್ಯ ವೆಚ್ಚ ಬೇರೆ.

ಆದರೆ ಸ್ಮಾರ್ಟ್‌ ಮೀಟರ್‌ ಮೂಲಕ ಗ್ರಾಹಕರಿಗೆ ಮುನ್ಸೂಚನೆ ನೀಡಿದಾಗ, ಬಳಕೆ ಕಡಿಮೆ ಮಾಡುವ ಸಾಧ್ಯತೆ ಇದೆ. ಎಷ್ಟು ಹೊರೆ ತಗ್ಗಿಸಬಹುದು ಎಂಬುದು ಗ್ರಾಹಕರ ಸಹಭಾಗಿತ್ವವನ್ನು ಅವಲಂಬಿಸಿದೆ. ಅಂದಾಜಿನ ಪ್ರಕಾರ ಶೇ. 25-30ರಷ್ಟು ಹೊರೆ ನೀಗಿಸಬಹುದು ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸುತ್ತಾರೆ. 

ಕೇವಲ ಲೋಡ್‌ ಮ್ಯಾನೇಜ್‌ಮೆಂಟ್‌ ಅಲ್ಲ; ಕುಳಿತಲ್ಲಿಂದಲೇ ವಿದ್ಯುತ್‌ ಕಳ್ಳತನ, ವಿದ್ಯುತ್‌ ಲೆಕ್ಕಪರಿಶೋಧನೆ, ಬಿಲ್‌ ಪಾವತಿ ಮಾಡದ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತ, ಮರುಸಂಪರ್ಕ ಕಲ್ಪಿಸುವುದು, ದರ ಮುನ್ಸೂಚನೆ, ಪ್ರಿಪೇಯ್ಡ, ನೆಟ್‌ ಮೀಟರಿಂಗ್‌ ಸೇರಿದಂತೆ ಏಳರಿಂದ ಎಂಟು ಸೌಲಭ್ಯಗಳನ್ನು ಈ ಸ್ಮಾರ್ಟ್‌ ಮೀಟರ್‌ ಒಳಗೊಂಡಿದೆ.

ಏಕಕಾಲದಲ್ಲಿ ಈ ಎಲ್ಲವನ್ನೂ ನಿರ್ವಹಣೆ ಮಾಡುವ ಸಾಮರ್ಥ್ಯವೂ ಈ ವ್ಯವಸ್ಥೆಗೆ ಇದ್ದು, ಐಐಟಿ ವಾರಣಾಸಿಯ ಬನಾರಸ್‌ ವಿಶ್ವವಿದ್ಯಾಲಯ ಇದನ್ನು ಅಭಿವೃದ್ಧಿಪಡಿಸಿದ್ದು, ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ 2.35 ಕೋಟಿ ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಬೆಸ್ಕಾಂನ ಸ್ಮಾರ್ಟ್‌ಗ್ರಿಡ್‌ ಮತ್ತು ವಿದ್ಯುತ್‌ ಚಾಲಿತ ವಾಹನ ಉಪ ಪ್ರಧಾನ ವ್ಯವಸ್ಥಾಪಕ ಶ್ರೀನಾಥ್‌ ತಿಳಿಸಿದರು. 

ವಸತಿ, ವಾಣಿಜ್ಯ ಮತ್ತು ಕೈಗಾರಿಕೆಗಳು ಇರುವ ಚಂದಾಪುರದ 1,200 ವಿದ್ಯುತ್‌ ಸಂಪರ್ಕಗಳಿಗೆ ಮತ್ತು 43 ಟ್ರಾನ್ಸ್‌ಫಾರ್ಮರ್‌ಗಳಿಗೆ ಈ ಸ್ಮಾರ್ಟ್‌ ಮಿಟರ್‌ ಅಳವಡಿಸಲಾಗುತ್ತಿದೆ. ಈ ಪೈಕಿ ಈಗಾಗಲೇ 500 ಮನೆಗಳು ಮತ್ತು 11 ಟ್ರಾನ್ಸ್‌ಫಾರ್ಮರ್‌ಗಳಿಗೆ ಅಳವಡಿಕೆ ಮಾಡಲಾಗಿದೆ. ಸೆಪ್ಟೆಂಬರ್‌ ಅಂತ್ಯಕ್ಕೆ ಇದು ಪ್ರಯೋಗಕ್ಕೆ ಸಿದ್ಧಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು. 

“ಪೀಕ್‌ ಅವರ್‌’ನಲ್ಲಿ ಹೆಚ್ಚುವರಿ ದರ ಎಷ್ಟಿರಬೇಕು ಎಂಬುದರ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಪ್ರಯೋಗ ಯಶಸ್ವಿಯಾದ ನಂತರ ದರ ನಿಗದಿಪಡಿಸಿ, ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದೂ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. 

ಕಾರ್ಯವಿಧಾನ ಹೀಗೆ: ಉದ್ದೇಶಿತ ಸ್ಮಾರ್ಟ್‌ ಮೀಟರ್‌ನಿಂದ ಸಂವಹನ ಜಾಲ (ಕಮ್ಯುನಿಕೇಷನ್‌ ನೆಟ್‌ವರ್ಕ್‌)ಕ್ಕೆ ದತ್ತಾಂಶಗಳು ರವಾನೆ ಆಗುತ್ತವೆ. ಅದನ್ನು ವಿಶ್ಲೇಷಣೆ ಮಾಡಿ, ನಿಯಂತ್ರಣ ಕೊಠಡಿಗೆ ವರ್ಗಾಯಿಸಲಾಗುತ್ತದೆ. ಅಲ್ಲಿ ಪ್ರತಿಯೊಬ್ಬ ಗ್ರಾಹಕರ ಪ್ರತ್ಯೇಕ ಮಾಹಿತಿ ಲಭ್ಯವಾಗುತ್ತದೆ.

ನಗರದಲ್ಲಿ ಸುಮಾರು 28 ಲಕ್ಷ ಗ್ರಾಹಕರಿದ್ದಾರೆ. ಎಲ್ಲ ಕಡೆ ಏಕಕಾಲದಲ್ಲಿ ಜಾರಿ ಕಷ್ಟ. ಹಾಗಾಗಿ, ಪ್ರಯೋಗ ಯಶಸ್ವಿಯಾದ ನಂತರ ಒಂದು ವಿಭಾಗವನ್ನು ಆಯ್ಕೆ ಮಾಡಿ, ಅಲ್ಲಿ ಜಾರಿಗೊಳಿಸಲಾಗುವುದು. ಆಮೇಲೆ ವಿವಿಧೆಡೆ ವಿಸ್ತರಿಸಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು. 

ಈ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಗ್ರಾಹಕರು ಯಾವುದೇ ಹಣ ಪಾವತಿಸಬೇಕಿಲ್ಲ. ಬದಲಿಗೆ ಬೆಸ್ಕಾಂ, ಮೀಟರ್‌ಗಳ ಕಾರ್ಯವೈಖರಿ ಸಮರ್ಪಕವಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಂಡ ನಂತರ ಗುತ್ತಿಗೆ ಪಡೆದ ಕಂಪೆನಿಗೆ ಹಣ ನೀಡುತ್ತದೆ ಎಂದೂ ಅವರು ಸ್ಪಷ್ಟಪಡಿಸಿದರು. 

ಮೀಟರ್‌ ಅಳವಡಿಕೆಗೆ ಅಪಸ್ವರ: ಈ ಹಿಂದೆ ನಗರದಲ್ಲಿ ಹಲವು ಬಾರಿಗೆ “ಸ್ಮಾರ್ಟ್‌ ಮೀಟರ್‌’ ಸ್ವರ ಕೇಳಿಬಂದಿದೆ. ಮೂರು ವರ್ಷಗಳ ಹಿಂದೆ ಇಂದಿರಾನಗರದಲ್ಲಿ ಪ್ರಾಯೋಗಿಕವಾಗಿ ಸ್ಮಾರ್ಟ್‌ ಮೀಟರ್‌ ಅಳವಡಿಸುವುದಾಗಿ ಹೇಳಲಾಗಿತ್ತು. ಆದರೆ, ಗ್ರಾಹಕರಿಂದ ಇದಕ್ಕೆ ವಿರೋಧ ಮತ್ತು ತಾಂತ್ರಿಕ ಕಾರಣಗಳಿಂದ ಕೈಬಿಡಲಾಗಿತ್ತು. ಈ ಮಧ್ಯೆ ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿತ್ತು. 

ಸ್ಮಾರ್ಟ್‌ ಮೀಟರ್‌ ಕಡ್ಡಾಯ!: ಕೇಂದ್ರದ “ಉದಯ’ ಯೋಜನೆ ಅಡಿ ಯಾವುದೇ ಗ್ರಾಹಕರು ಮಾಸಿಕ 200 ಮೆ.ವಾ.ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡುತ್ತಿದ್ದರೆ, ಅಂತಹ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.