ವಿಮಾನ ನಿಲ್ದಾಣದಲ್ಲಿ ಸ್ಮಾರ್ಟ್ ಸೆಕ್ಯೂರಿಟಿ ಲೇನ್
Team Udayavani, Oct 9, 2018, 12:19 PM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ “ಸ್ಮಾರ್ಟ್ ಸೆಕ್ಯುರಿಟಿ ಲೇನ್’ ಮತ್ತು “ಸ್ವಯಂಚಾಲಿತ ಟ್ರೇ ರಿಟ್ರೈವಲ್ ವ್ಯವಸ್ಥೆ’ (ಎಟಿಆರ್ಎಸ್) ಪರಿಚಯಿಸಲಾಗಿದೆ.
ಈ ವಿನೂತನ ವ್ಯವಸ್ಥೆಯಿಂದ ಪ್ರಯಾಣಿಕರ ಭದ್ರತಾ ತಪಾಸಣಾ ಸಮಯ ಸಾಕಷ್ಟು ಉಳಿತಾಯ ಆಗಲಿದೆ. ಜತೆಗೆ ಏಕಕಾಲದಲ್ಲಿ ಇಡೀ ಕುಟುಂಬದ ತಪಾಸಣೆ ಒಮ್ಮೆಲೆ ನಡೆಸಲು ಅನುಕೂಲ ಆಗಲಿದೆ. ಮಾನವ ಹಸ್ತಕ್ಷೇಪವೂ ತಗ್ಗಲಿದ್ದು, ಇದರಿಂದ ಕಾರ್ಯಕ್ಷಮತೆ ಮತ್ತಷ್ಟು ಸುಧಾರಣೆ ಆಗಲಿದೆ. ಈ ಸಂಬಂಧ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್) ತಂತ್ರಜ್ಞಾನ ಅಭಿವೃದ್ಧಿ ಸಂಸ್ಥೆ ಎಲ್-3 ಮೆಕ್ಡೊನಾಲ್ಡ್ ಹಂಫ್ರಿ (ಆಟೋಮೇಷನ್) ಇಂಡಿಯಾ ಪ್ರç.ಲಿ., ಜತೆ ಒಡಂಬಡಿಕೆ ಮಾಡಿಕೊಂಡಿದೆ.
ಈ ಮೊದಲು ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಭದ್ರತಾ ತಪಾಸಣೆ ನಡೆಯುತ್ತಿತ್ತು. ಈಗ ಒಟ್ಟಿಗೆ ಅಲ್ಪಾವಧಿಯಲ್ಲಿ ಈ ಪ್ರಕ್ರಿಯೆ ನಡೆಸಬಹುದು. ಭಾರತದಲ್ಲಿ ಮೊದಲ ಬಾರಿಗೆ ಇಂತಹ ವ್ಯವಸ್ಥೆ ಹೊಂದಿದ ಹೆಗ್ಗಳಿಕೆಗೆ ಬೆಂಗಳೂರು ವಿಮಾನ ನಿಲ್ದಾಣ ಪಾತ್ರವಾಗಿದೆ. 2017ರ ಆರಂಭದಲ್ಲಿ ಇದನ್ನು ಪರೀಕ್ಷಾರ್ಥ ಪರಿಚಯಿಸಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಒಡಂಬಡಿಕೆಗೆ ಸಹಿ ಹಾಕಲಾಗಿದೆ.
ಪ್ರಸ್ತುತ ಈ ಸೇವೆ ಕೆಲವು ಭಾಗಗಳಿಗೆ ಸೀಮಿತವಾಗಿದೆ. ಸಂಪೂರ್ಣವಾಗಿ ಈ ವ್ಯವಸ್ಥೆ ವಿಸ್ತರಣೆಯಾದರೆ, ತಪಾಸಣೆ ಸಾಮರ್ಥ್ಯ ಶೇ.50ರಷ್ಟು ವೃದ್ಧಿಸಲಿದೆ. ಒಟ್ಟಾರೆ ಕಾರ್ಯಾಚರಣೆ ಕಾರ್ಯಕ್ಷಮತೆ ಸುಧಾರಣೆ ಜತೆಗೆ ಸುರಕ್ಷತೆ ಮತ್ತು ಭದ್ರತೆ ಹೆಚ್ಚಲಿದೆ. ಹಾಗೂ ಪ್ರಯಾಣಿಕರ ದಟ್ಟಣೆ ಉಂಟಾಗುವುದಿಲ್ಲ. ಈ ಸ್ವಯಂಚಾಲಿತ ವ್ಯವಸ್ಥೆ ಅಳವಡಿಸುವ ಕಾರ್ಯ ಹಂತ-ಹಂತವಾಗಿ ನಡೆಯಲಿದ್ದು, 2019ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಬಿಐಎಎಲ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಾವೆದ್ ಮಲಿಕ್ ತಿಳಿಸಿದ್ದಾರೆ.
ಅನುಮಾನ ಬಂದರೆ ಅಧಿಕಾರಿಗಳ ತಪಾಸಣೆ: ಅನುಮಾನಾಸ್ಪದ ವಸ್ತುಗಳನ್ನು ಟಚ್ಸ್ಕ್ರೀನ್ನಲ್ಲಿ ಗುರುತು ಮಾಡಿ, ತ್ವರಿತವಾಗಿ ಪತ್ತೆಹಚ್ಚಲಿಕ್ಕೂ ಈ ವ್ಯವಸ್ಥೆ ನೆರವಾಗಲಿದೆ. ತಪಾಸಣೆಗೆ ಲಗೇಜುಗಳನ್ನು ಸಾಗಿಸುವ ಟ್ರೇಗಳ ಫೋಟೋ ಮತ್ತು ಎಕ್ಸ್ರೇ ಇಮೇಜ್ಗಳನ್ನು ಸೆರೆಹಿಡಿಯಲಾಗುತ್ತದೆ. ಅನುಮಾನಾಸ್ಪದವಾಗಿ ಕಂಡುಬರುವ ವಸ್ತುಗಳನ್ನು ಟಚ್ಸ್ಕ್ರೀನ್ನಲ್ಲಿ ಗುರುತು ಮಾಡಲಾಗುತ್ತದೆ. ಹೀಗೆ ಗುರುತು ಮಾಡಿದ ಚಿತ್ರಗಳು ಭೌತಿಕ ಪರೀಕ್ಷೆ ನಡೆಸುವ ಅಧಿಕಾರಿಗಳಿಗೆ ರವಾನೆ ಆಗುತ್ತದೆ. ಅಲ್ಲಿ ಅವರು ಈ ವಸ್ತುಗಳನ್ನು ಸುಲಭವಾಗಿ ಪತ್ತೆಹಚ್ಚಿ, ಅಗತ್ಯಬಿದ್ದರೆ ಪ್ರತ್ಯೇಕಿಸಬಹುದು ಎಂದು ಬಿಐಎಎಲ್ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.