ಮತದಾರರ ಜಾಗೃತಿಗೆ ವಿಶೇಷ ಅಂಚೆ ಲಕೋಟೆ, ಚೀಟಿ


Team Udayavani, Apr 14, 2019, 3:32 AM IST

anchwe

ಬೆಂಗಳೂರು: ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಚುನಾವಣಾ ಆಯೋಗವು ಅಂಚೆ ಇಲಾಖೆಯ ಸಹಯೋಗದೊಂದಿಗೆ ವಿಶೇಷ ಅಂಚೆ ಲಕೋಟೆ ಹಾಗೂ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದೆ.

ವಾರ್ತಾ ಸೌಧದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಹಾಗೂ ಕರ್ನಾಟಕದ ಚೀಫ್ ಪೋಸ್ಟ್‌ ಮಾಸ್ಟರ್‌ ಜನರಲ್‌ ಚಾರ್ಲ್ಸ್‌ ಲೋಬೋ ಜಂಟಿಯಾಗಿ ಈ ವಿಶೇಷ ಅಂಚೆ ಚೀಟಿ ಹಾಗೂ ಲಕೋಟೆಯನ್ನು ಬಿಡುಗಡೆಗೊಳಿಸಿದರು.

ಈ ವಿಶೇಷ ಲಕೋಟೆಗಳನ್ನು 2019ರ ಲೋಕಸಭಾ ಚುನಾವಣೆಯ ಲಾಂಛನ ಹಾಗೂ “ದೇಶದ ಮಹಾ ಉತ್ಸವ’ ಶೀರ್ಷಿಕೆಯೊಂದಿಗೆ ವಿನ್ಯಾಸಗೊಳಿಸಲಾಗಿದೆ. ಇವುಗಳನ್ನು ಮತದಾರರಿಗೆ ಇವಿಎಂ ಮತ್ತು ವಿವಿಪ್ಯಾಟ್‌ಗಳ ಕುರಿತು ಮಾಹಿತಿ ನೀಡುವಂತೆ ರಚಿಸಲಾಗಿದೆ.

ಮತದಾರರು ಹೇಗೆ ಮತ ಚಲಾಯಿಸಬೇಕು ಎಂಬ ವಿವರಗಳು ಅಂಚೆ ಲಕೋಟೆ ಮೇಲಿದೆ. ಮತದಾನದ ವಿವಿಧ ಪ್ರಕ್ರಿಯೆಗಳು ಸೇರಿದಂತೆ ಇವಿಎಂ ಮತ್ತು ವಿವಿಪ್ಯಾಟ್‌ ಮೂಲಕ ಮತ ಚಲಾವಣೆ ವಿಧಾನದ ಕುರಿತ ಸಚಿತ್ರ ವಿವರಗಳನ್ನು ಮುದ್ರಿಸಲಾಗಿದೆ.

ವಿಶೇಷ ಲಕೋಟೆಯು ವಿಕಲಚೇತನ ಮತದಾರರಿಗೆ ಚುನಾವಣಾ ಆಯೋಗ ಮತದಾನದ ದಿನ ಒದಗಿಸಿರುವ ಸೌಲಭ್ಯಗಳ ಕರಿತು ಮಾಹಿತಿ ನೀಡಲಾಗಿದೆ. ಇದೇ ವೇಳೆ ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಆಯೋಗ ನಿರ್ಮಿಸಿರುವ ವಿಡಿಯೋ ಸಹ ಬಿಡುಗಡೆಗೊಳಿಸಲಾಯಿತು.

ಜೊತೆಗೆ ಕನ್ನಡ ಚಿತ್ರರಂಗದ ನಿರ್ದೇಶಕ ಶ್ರೀ ಭಗವಾನ್‌ ಅವರು ಮತದಾನದ ಜಾಗೃತಿ ಬಗ್ಗೆ ರಚಿಸಿರುವ ಕಿರುಚಿತ್ರಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಜೊತೆಗೆ ದೃಷ್ಠಿದೋಷ ಮತದಾರರಲ್ಲಿ ಜಾಗೃತಿ ಮೂಡಿಸಲು ಬ್ರೈಲ್‌ ಲಿಪಿಯ ಅಂಚೆ ಕಾರ್ಡ್‌ಗಳನ್ನು ಬಿಡುಗಡೆಗೊಳಿಸಿ ಚೀಫ್ ಪೋಸ್ಟ್‌ಮಾಸ್ಟರ್‌ ಜನರಲ್‌ ಅವರಿಗೆ ಹಸ್ತಾಂತರಿಸಲಾಯಿತು.

ಅಂಚೆ ಇಲಾಖೆ “ವಿಶೇಷ ಸೇವೆ’: ಮತದಾರರಲ್ಲಿ ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಕೈಗೊಳ್ಳುತ್ತಿರುವ ವಿಶೇಷ ಪ್ರಯತ್ನಗಳಿಗೆ ಅಂಚೆ ಇಲಾಖೆ ಸಾಥ್‌ ನೀಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕದ ಚೀಫ್ ಪೋಸ್ಟ್‌ಮಾಸ್ಟರ್‌ ಜನರಲ್‌ ಚಾರ್ಲ್ಸ್‌ ಲೋಬೋ, ಮುಖ್ಯವಾಗಿ ಸೇವಾ ಮತದಾರರಿಗೆ ಸೌಲಭ್ಯ ಒದಗಿಸಲು ಚನಾವಣಾ ಆಯೋಗದ ಜೊತೆಗೆ ಅಂಚೆ ಇಲಾಖೆ ಕೈಜೋಡಿಸಿದೆ ಎಂದರು.

ದೇಶದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ಮತದಾರರಿಗೆ ಎಲೆಕ್ಟ್ರಾನಿಕ್‌ ಬ್ಯಾಲೆಟ್‌ಗಳನ್ನು ಪೂರೈಸಲು ಅಂಚೆ ಇಲಾಖೆ ವಿಶೇಷ ಪ್ರಯತ್ನ ಮಾಡಿದೆ. ಸಿಆರ್‌ಪಿಎಫ್, ಸಿಐಎಸ್‌ಎಫ್ ಸಿಬ್ಬಂದಿ ನಿಯೋಜನೆಗೊಂಡಿರುವ ವಿಮಾನ ನಿಲ್ದಾಣ ಮತ್ತಿತರ ಕಡೆ ಅಂಚೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತೆರಳಿ ಅವರಿಗೆ ಎಲೆಕ್ಟ್ರಾನಿಕ್‌ ಬ್ಯಾಲೆಟ್‌ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ.

ಅದರಂತೆ ಏ.11 ಮತ್ತು 12ರಂದು ಸುಮಾರು 525 ಮಂದಿ ಸೇವಾ ಮತದಾರರು ಮತ್ತು ಏ.13ರಂದು ಸಾವಿರಕ್ಕೂ ಹೆಚ್ಚು ಸೇವಾ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇವರು ರವಾನಿಸುವ ಎಲೆಕ್ಟ್ರಾನಿಕ್‌ ಅಂಚೆ ಮತಪತ್ರಗಳಿಗೆ ಅಂಚೆ ಶುಲ್ಕದ ವಿನಾಯಿತಿ ನೀಡಲಾಗಿದೆ ಎಂದರು.

ಅದೇ ರೀತಿ ಅಂಚೆ ಕಚೇರಿಗಳಲ್ಲಿರುವ “ಕ್ಲಿಯರೆನ್ಸ್‌ ಫ್ರಾಂಕಿಂಗ್‌ ಮಷೀನ್‌’ಗಳಲ್ಲಿ ಮತದಾನದ ದಿನದವರೆಗೆ “ಯಾವೊಬ್ಬ ಮತದಾರ ಮತದಾನದಿಂದ ದೂರ ಉಳಿಯಬಾರದು’ ಎಂಬ ಸಂದೇಶ ಅಳವಡಿಸಲಾಗುವುದು ಎಂದು ಲೋಬೋ ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.