ಗ್ರಾಮ ಪಂಚಾಯ್ತಿ ಮಟ್ಟದಲ್ಲಿ “ಶಿಕ್ಷಣ ಪಡೆ ರಚನೆ’

ಹೊರಗುಳಿದ ಮಕ್ಕಳ ಶಾಲೆಗೆ ಕರೆತರಲು ಅನುಕೂಲ /ಗ್ರಾಮೀಣ ಭಾಗದ ಶೈಕ್ಷಣಿಕ ಪ್ರಗತಿಗೆ ಪೂರಕ

Team Udayavani, Sep 14, 2020, 12:01 PM IST

ಗ್ರಾಮ ಪಂಚಾಯ್ತಿ ಮಟ್ಟದಲ್ಲಿ “ಶಿಕ್ಷಣ ಪಡೆ ರಚನೆ’

ಸಾಂದರ್ಭಿಕ ಚಿತ್ರ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ್ತಿ ರಾಜ್‌ ಇಲಾಖೆ ಇದೀಗ ಶಿಕ್ಷಣ ಇಲಾಖೆ ಜತೆ ಕೈಜೋಡಿಸಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವುದು ಹಾಗೂ “ವಿದ್ಯಾಗಮ ಯೋಜನೆ’ ಯಶಸ್ವಿ ಸೇರಿದಂತೆ ಇನ್ನಿತರ ಶಿಕ್ಷಣ ಕಾರ್ಯಗಳ ಯಶಸ್ವಿ ಸಂಬಂಧ ಗ್ರಾಪಂ ಮಟ್ಟದಲ್ಲಿ “ಗ್ರಾಮ ಪಂಚಾಯ್ತಿ ಶಿಕ್ಷಣ ಪಡೆ ರಚನೆ’ಗೆ ಮುಂದಾಗಿದೆ.

ಆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಪಂನ ಸುಮಾರು 93 ಗ್ರಾಪಂಗಳಲ್ಲಿ ಶೀಘ್ರದಲ್ಲೇ ಗ್ರಾಪಂ ಶಿಕ್ಷಣ ಪಡೆ ರಚನೆ ಆಗಿ ಕಾರ್ಯರೂಪಕ್ಕೆ ಬರಲಿದೆ. ಗ್ರಾಪಂನ ಆಡಳಿತಾಧಿಕಾರಿ ಅಥವಾ ಅಧ್ಯಕ್ಷರು ಈ ಪಡೆಗೆ ಅಧ್ಯಕ್ಷರಾಗಿರುತ್ತಾರೆ. ಹಾಗೆಯೇ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಕಿರಿಯ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿಸಮಿತಿ ಅಧ್ಯಕ್ಷರು ಸದಸ್ಯರಾಗಿರುತ್ತಾರೆ. ಇದರಜತೆಗೆ ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು,ಶಿಕ್ಷಣ ಸಂಯೋಜಕರು, ಸಮೂಹ ಸಂಪನ್ಮೂಲಕೇಂದ್ರದ ಸಂಪನ್ಮೂಲ ವ್ಯಕ್ತಿಗಳು, ಅಂಗನವಾಡಿಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು,ನಿವೃತ್ತ ಶಿಕ್ಷಕರು, ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿಗಳೂ ಈ ಪಡೆಯ ಸದಸ್ಯರಾಗಿರುತ್ತಾರೆ. ಅಲ್ಲದೆಗ್ರಾಪಂ ಪಿಡಿಒಗಳು ಸದಸ್ಯ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

3 ತಿಂಗಳಿಗೊಮ್ಮೆ ಸಭೆ ಸೇರಬೇಕು: ಹೀಗೆ ರಚನೆಯಾದ ಗ್ರಾಪಂ ಶಿಕ್ಷಣ ಪಡೆಗೆ ಕೆಲವೊಂದು ಕಾರ್ಯ ಯೋಜನೆ ನೀಡಲಾಗಿದೆ. 2012ರ ಶಿಕ್ಷಣ ನಿಯಮದಂತೆ ಗ್ರಾಪಂಗಳು ಗ್ರಾಮ ಶಿಕ್ಷಣ ರಿಜಿಸ್ಟರ್‌ ನಿರ್ವಹಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಶಾಲೆಗಳು ತೆರೆಯಲು ಆಗದೇ ಇರುವುದರಿಂದ ಶಿಕ್ಷಣ ಇಲಾಖೆ ಮಕ್ಕಳ ಅನುಕೂಲಕ್ಕಾಗಿ ಈಗಾಗಲೇ “ವಿದ್ಯಾಗಮ’ ಯೋಜನೆ ಜಾರಿಗೆ ತಂದಿದ್ದು ಅದರ ಯಶಸ್ವಿಗೆಶ್ರಮಿಸುವುದು. ಜತೆಗೆ ಮಕ್ಕಳ ಕಲಿಕೆಗೆ ತೊಂದರೆ ಆಗದ ರೀತಿಯಲ್ಲಿ ಸೂಕ್ತ ಕಲಿಕಾ ಕೇಂದ್ರ ತೆರೆಯುವುದು. ಗ್ರಾಮಗಳಲ್ಲಿ ವಾಸವಿದ್ದು ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳನ್ನು ಶಾಲೆಯಲ್ಲಿ ಉಳಿಯುವಂತೆ ಮಾಡುವುದು ಗ್ರಾಪಂ ಶಿಕ್ಷಣ ಪಡೆಯ ಕಾರ್ಯವಾಗಿದೆ.

ಅಲ್ಲದೆ ಬಯಲು ಶೌಚ ಮುಕ್ತ ಗ್ರಾಮ ಮಾದರಿಯಲ್ಲಿ ಪ್ರತಿ ಗ್ರಾಮವು ಶೇ.100 ದಾಖಲಾತಿ ಮತ್ತು ಹಾಜರಾತಿ ಹೊಂದಿರುವ ಗ್ರಾಮ ಘೋಷಣೆ ಮಾಡುವುದು. ಮಕ್ಕಳ ಶಾಲಾ ಪ್ರವೇಶ ಖಾತರಿ ಪಡಿಸುವುದು ಸೇರಿದಂತೆ ಸುಮಾರು ಹದಿನೈದು ಜವಾಬ್ದಾರಿಗಳನ್ನು ನೀಡಲಾಗಿದೆ. ಜತೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರಿ ಪ್ರಗತಿ ಪರಿಶೀಲಿಸಲೂ ಸೂಚಿಸಲಾಗಿದೆ.

ರಾಜ್ಯ ಉಚ್ಚ ನ್ಯಾಯಾಲಯದ ಈ ಹಿಂದಿನ ಆದೇಶದಂತೆ ಗ್ರಾಪಂ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಮಾಡಬೇಕಾಗಿದೆ. ಆ ಹಿನ್ನೆಲೆಯಲ್ಲಿ ಈ ಪಡೆ ರಚನೆಗೆ ಶಿಕ್ಷಣ ಇಲಾಖೆ ಜತೆಗೂಡಿ ಗ್ರಾಮೀಣ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಮುಂದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ ಮಡಸೂರು ಗ್ರಾಪಂ ಪಿಡಿಒ ಶಶಿಕಿರಣ್‌ ಹೇಳಿದ್ದಾರೆ.

ಕ್ರಮಗಳ ಬಗ್ಗೆ ಪರಿಶೀಲನೆ :  ಹೈಕೋರ್ಟ್‌ ಆದೇಶದಂತೆ ಗ್ರಾಪಂನ ಶಾಲೆ ಯಿಂದಹೊರಗುಳಿದ ಮಕ್ಕಳ ಸಮೀಕ್ಷೆ ಮಾಡ ಬೇಕಾಗಿದೆ. ಆ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರ ಗುಳಿದ ಮಕ್ಕಳ ಸಮೀಕ್ಷೆ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ಮಾಡಲು ಗ್ರಾಪಂ ಮಟ್ಟದಲ್ಲಿ ಗ್ರಾಮ  ಪಂಚಾಯ್ತಿ ಶಿಕ್ಷಣ ಪಡೆ ರಚಿಸಲಾಗುವುದು ಎಂದು ಬೆಂಗಳೂರು ನಗರ ಜಿಪಂ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಗ್ರಾಪಂ ಮಟ್ಟದಲ್ಲಿ ಗ್ರಾಮ ಪಂಚಾಯ್ತಿ ಶಿಕ್ಷಣ ಪಡೆ ರಚನೆ ಆಗುವುದರಿಂದ ಮಕ್ಕಳ ಕಲಿಕೆಗೆ ಮತ್ತಷ್ಟು ಅನುಕೂಲವಾಗಲಿದೆ. ಅಲ್ಲದೆ ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಂಖ್ಯೆಯನ್ನು ಶೂನ್ಯಗೊಳಿಸಲು ಕ್ರಮ ಕೈಗೊಳ್ಳಬಹುದಾಗಿದೆ. ರಾಜೇಶ್‌ ಪಿಡಿಒ, ರಾಜಾನುಕುಂಟೆ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.