ಕನಕ ಗೋಪುರ ವಿವಾದ ಬಗೆಹರಿಸಿದ್ದ ಶ್ರೀಗಳು


Team Udayavani, Dec 30, 2019, 3:11 AM IST

kanaka

ಬೆಂಗಳೂರು: ರಾಜ್ಯಾದ್ಯಂತ ಚರ್ಚೆಯಾಗಿ ವಿವಾದದ ಸ್ವರೂಪ ಪಡೆದು “ಸಂಘರ್ಷ ಯಾತ್ರೆ’ಗೆ ಕಾರಣವಾಗಿದ್ದ ಉಡುಪಿ ಕನಕ ಗೋಪುರ ವಿಚಾರ ಮಾತುಕತೆಯ ಮೂಲಕ ಬಗೆಹರಿಸಿದ್ದು ವಿಶ್ವೇಶತೀರ್ಥ ಶ್ರೀ ಪಾದರು.

ಉಡುಪಿ ಶ್ರೀ ಕೃಷ್ಣ ದೇಗುಲ ಹೊರಭಾಗದಲ್ಲಿ ಪುರಸಭೆ ಜಾಗದಲ್ಲಿದ್ದ ಕನಕ ಗೋಪುರ ಶಿಥಿಲವಾಗಿದ್ದ ಕಾರಣ ತೆರವುಗೊಳಿಸಲಾಯಿತು. ಆದರೆ, ಅದು ವಿವಾದದ ಸ್ವರೂಪ ಪಡೆದಾಗ ಹೋರಾಟಗಾರರನ್ನು ಕರೆಸಿ ಮಾತನಾಡಿ ಕನಕ ಪ್ರತಿಮೆ ಸಹಿತ ಗೋಪುರ ನಿರ್ಮಾಣ ಮಾಡಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಣೆಯಾಗುವಂತೆ ಮಾಡಿ ಹೋರಾಟಗಾರ ಪ್ರೀತಿಗೆ ಪಾತ್ರರಾಗಿದ್ದರು.

ಕನಕ ಗೋಪುರ ವಿಚಾರ ಜಾತಿ ಸಂಘರ್ಷ ಪಡೆಯುವ ಲಕ್ಷಣಗಳು ಇದ್ದ ಸೂಕ್ಷ್ಮ ಸಂದರ್ಭ ಅರಿತ ಶ್ರೀಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯಾರಿಗೂ ನೋವಾಗದಂತೆ ಸರ್ವಸಮ್ಮತ ಸೂತ್ರ ಕಂಡು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ಸಂಘರ್ಷ ಯಾತ್ರೆ, ಉಡುಪಿ ಚಲೋ ಹೋರಾಟಗಳಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ವಾತಾವರಣ ನಿರ್ಮಾಣವಾದಾಗ ತಾವೇ ಖುದ್ದಾಗಿ ಹೋರಾಟಗಾರರ ಜತೆ ಮಾತನಾಡಲು ಮುಂದಾಗಿ ಮನವೊಲಿಸಿದ್ದರು.

ಕನಕ ಗೋಪುರ ತೆರವು ವಿಚಾರದಲ್ಲಿ ಸಂಘರ್ಷ ಯಾತ್ರೆ ಧಾರವಾಡ, ಶಿವಮೊಗ್ಗ, ಹೆಬ್ರಿ ಮೂಲಕ ಉಡುಪಿಗೆ ತಲುಪಿತ್ತು. ಉಡುಪಿಯ ಮೈದಾನದಲ್ಲಿ ಸಂಘರ್ಷ ಯಾತ್ರೆ ಸಭೆ ಸೇರಿದಾಗ ಜಿಲ್ಲಾಡಳಿತ ಮೊದಲು ಹೋರಾಟಗರರ ಜತೆ ಮಾತುಕತೆಗೆ ಮುಂದಾಗಿತ್ತು. ಖುದ್ದು ಪೇಜಾವರ ಶ್ರೀಗಳು ನಾನೇ ಹೋರಾಟಗಾರರ ಜತೆ ಮಾತನಾಡುತ್ತೇನೆಂದು ವಿನಯತೆ ತೋರಿದ್ದರು. ಆದರೆ, ಕಾರಣಾಂತರಗಳಿಂದ ಹೋರಾಟಗಾರರು ಶ್ರೀಗಳ ಜತೆ ಮಾತುಕತೆಗೆ ನಿರಾಕರಿಸಿದರು.

ಆದರೆ, ಆ ನಂತರದ ಬೆಳವಣಿಗೆಯಲ್ಲಿ ಶ್ರೀಗಳು ಹೋರಾಟಗಾರರ ಜತೆ ಮುಖಾಮುಖೀ ಚರ್ಚಿಸಿ ಕನಕ ಗೋಪುರ ನಿರ್ಮಾಣಕ್ಕೆ ಮುಂದಾಳತ್ವ ವಹಿಸಿ ಪ್ರತಿಮೆ ಸಹಿತ ಗೋಪುರ ನಿರ್ಮಾಣ ಮಾಡಿ ಹೋರಾಟಗಾರರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾದರು. 2004 ರಲ್ಲಿ ಆರಂಭವಾದ ಕನಕ ಗೋಪುರ ವಿವಾದ ಉಡುಪಿಯ ಸಂಘರ್ಷ ಯಾತ್ರೆಯ ನಂತರ ಬೆಂಗಳೂರಿನ ಅರಮನೆ ಮೈದಾನದಲ್ಲೂ ದೊಡ್ಡ ಸಮಾವೇಶ ನಡೆದು ಆಗ ಮುಖ್ಯಮಂತ್ರಿಯಾಗಿದ್ದ ಧರ್ಮಸಿಂಗ್‌ ಅವರಿಗೆ ಮನವಿ ಸಲ್ಲಿಸಲಾಗಿತ್ತು.

ಎಚ್‌.ವಿಶ್ವನಾಥ್‌, ಎಚ್‌.ಎಂ.ರೇವಣ್ಣ ಅವರು ಹೋರಾಟದ ಜತೆಗೂಡಿದ್ದರು. ಆ ಸಂದರ್ಭದಲ್ಲಿ ಅಮೆರಿಕದಲ್ಲಿ ಅಕ್ಕ ಸಮ್ಮೇಳನಕ್ಕೆ ಹೋಗಿದ್ದ ಸಿದ್ದರಾಮಯ್ಯ ಅವರೂ ಹೋರಾಟಗಾರರ ಜತೆ ಮಾತನಾಡಿ ಸೌಹಾರ್ಧತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ವಿವಾದ ಅಥವಾ ಸಂಘರ್ಷಕ್ಕೆ ಅವಕಾಶ ಮಾಡಿಕೊಡಬಾರದು. ಶ್ರೀಗಳ ಜತೆ ಕುಳಿತು ಚರ್ಚಿಸಿ ಎಂದು ಸೂಚನೆ ನೀಡಿದ್ದರು. ಕೆ.ಎಸ್‌. ಈಶ್ವರಪ್ಪ ಅವರು ಸಹ ಶ್ರೀಗಳ ಜತೆ ಮಾತುಕತೆ ನಡೆಸಿದ್ದರು.

ವಿನಯಪೂರ್ವಕ ಮಾತು: ಕನಕ ಗೋಪುರ ಹೋರಾಟದ ಮುಂಚೂಣಿಯಲ್ಲಿದ್ದ ಧಾರವಾಡದ ಬಸವರಾಜ ದೇವರು ಅವರೇ ಹೇಳುವಂತೆ, ನಾವು ಮೊದಲಿಗೆ ಶ್ರೀಗಳ ಜತೆ ಮಾತುಕತೆಗೆ ನಿರಾಕರಿಸಿದರೂ ಅವರು ಬೇಸರಪಟ್ಟುಕೊಳ್ಳದೆ ಮತ್ತೆ ಮಾತುಕತೆಗೆ ಆಹ್ವಾನಿಸಿ ಕನಕಗೋಪುರ ನಿರ್ಮಿಸಿದರು. ಕನಕನ ಕಿಂಡಿಗೆ ನವಗ್ರಹ ಕಿಂಡಿ, ಕನಕ ಗೋಪುರಕ್ಕೆ ರಾಜಗೋಪುರ ಎಂದು ಹೆಸರು ಇದ್ದದ್ದನ್ನು ಮತ್ತೆ ಕನಕನ ಕಿಂಡಿ, ಕನಕ ಗೋಪುರ ಎಂದು ಹೆಸರು ಮುಂದುವರಿಯುವಂತೆ ಮಾಡಿದರು.

ತೆರದ ಮನಸ್ಸಿನಿಂದ ಸಮಾಧಾನದಿಂದ ಆಲಿಸಿದ್ದರು. ಕನಕದಾಸರು ಹೊರಗೆ ಪ್ರತಿಮೆಯಾಗಿ ಮಾತ್ರ ನಿಲ್ಲುವಂತಾಗಬಾರದು. ಶ್ರೀ ಕೃಷ್ಣ ದೇಗುಲದ ಒಳಗೆ ಕನಕದಾಸರಿಗೆ ಮಾನ್ಯತೆ ಸಿಗಬೇಕು ಎಂಬುದು ನಮ್ಮ ಬೇಡಿಕೆಯಿತ್ತು. ಅದರ ಬಗ್ಗೆ ಶ್ರೀಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಕನಕದಾಸರ ಬಗ್ಗೆ ಅಧ್ಯಯನ ಮಾಡಿದ್ದ ಅವರು ಅಪಾರ ಗೌರವ ಹೊಂದಿದ್ದರು ಎಂದು ಸ್ಮರಿಸುತ್ತಾರೆ.

ವಿಶ್ವೇಶತೀರ್ಥರು ಯಾವುದೇ ವಿಚಾರ ಇರಲಿ ತಾಳ್ಮೆ ಸಮಾಧಾನದಿಂದ ಕೇಳುತ್ತಿದ್ದರು. ಯಾವ ರೀತಿ ಪರಿಹಾರ ಸಾಧ್ಯ ಎಂಬುದರ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತಿದ್ದರು. ಒಂದೊಮ್ಮೆ ಒಪ್ಪದಿದ್ದರೆ ನೀವೇ ಪರಿಹಾರ ಸೂಚಿಸಿ ನ್ಯಾಯಸಮ್ಮತವಾದರೆ ನಾನು ಒಪ್ಪುತ್ತೇನೆ ಎಂದು ಹೇಳುತ್ತಿದ್ದರು. ಅಷ್ಟು ದೊಡ್ಡ ಗುಣ ಅವರಲ್ಲಿ ಇತ್ತು ಎಂದು ಹೇಳುತ್ತಾರೆ.

ಮನಸ್ಸಿದ್ದರೆ ಮಾರ್ಗ ಪ್ರತಿಪಾದಕರು: ಮಡೆಸ್ನಾನ ವಿಚಾರ ವಿವಾದದ ಸ್ವರೂಪ ಪಡೆದಾಗಲೂ ಮಡೆಸ್ನಾನ ಬದಲು ಎಡೆಸ್ನಾನ ಪದ್ಧತಿ ಜಾರಿಗೊಳಿಸಿ ಹೋರಾಟಗಾರರ ಮನವೊಲಿಕೆಗೆ ಮುಂದಾಗಿದ್ದರು. ಯಾವುದೇ ಸಮಸ್ಯೆಗೂ ಪರಿಹಾರ ಇದ್ದೇ ಇದೆ. ಆದರೆ, ಪರಸ್ಪರ ನಿಷ್ಕಲ್ಮಷ ಮನಸ್ಸಿನಿಂದ ಕುಳಿತು ಮಾತನಾಡಬೇಕು ಎಂಬುದನ್ನು ಪ್ರತಿಪಾದನೆ ಮಾಡುತ್ತಿದ್ದರು.

ಆಸ್ಪೃಶ್ಯತೆ ವಿರುದ್ಧ ಹೋರಾಟ, ಶ್ರೀ ಮಠದಲ್ಲಿ ಇಫ್ತಾರ್‌ ಕೂಟ, ದಲಿತರ ಕೇರಿ ಪ್ರವೇಶ, ನಕ್ಸಲ್‌ ಪ್ರದೇಶದಲ್ಲಿ ಆರೋಗ್ಯ ಶಿಬಿರ ಆಯೋಜಿಸಿದ್ದರು. ಇದೇ ಕಾರಣಕ್ಕೆ ವಿಶ್ವೇಶತೀರ್ಥ ಶ್ರೀಪಾದರು ಸಾಮಾಜಿಕ. ಧಾರ್ಮಿಕ, ರಾಜಕೀಯ, ಬೌದ್ಧಿಕ ಕ್ಷೇತ್ರ ಸೇರಿದಂತೆ ಎಲ್ಲ ವರ್ಗದವರ ಪ್ರೀತಿಗೆ ಪಾತ್ರರಾಗಿದ್ದರು. ಸರಳ ಸಜ್ಜನಿಕೆಯೇ ಭಕ್ತ ಸಮೂಹವನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿತ್ತು.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

17

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.