ಸರ್ಕಾರಿ ಆಸ್ಪತ್ರೆಗಳ ಸಿಬ್ಬಂದಿಗೆ ಪಿಎಫ್, ಇಎಸ್‌ಐ ವಂಚನೆ ಆರೋಪ


Team Udayavani, Mar 14, 2017, 12:49 PM IST

rti.jpg

ಬೆಂಗಳೂರು: ನಗರದ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಭದ್ರತಾ ಸಿಬ್ಬಂದಿ, ಸ್ವತ್ಛತಾ ಸಿಬ್ಬಂದಿಗೆ ಗುತ್ತಿಗೆದಾರರು ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಹಾಗೂ ಕಾರ್ಮಿಕರ ರಾಜ್ಯ ವಿಮೆ (ಇಎಸ್‌ಐ) ವಂಚಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿವೆ. ಈ ಕುರಿತು ಮಾಹಿತಿ ನೀಡುವಂತೆ ಮಾಹಿತಿ ಹಕ್ಕಿನಡಿಯಲ್ಲಿ 6 ತಿಂಗಳ ಹಿಂದೆ ಸಲ್ಲಿಸಲಾದ ಅರ್ಜಿಗೆ ಆರೋಗ್ಯ ಇಲಾಖೆ ಉತ್ತರಿಸದೇ ಇರುವುದು ಆರೋಪಕ್ಕೆ ಪುಷ್ಟಿ ನೀಡಿದೆ. 

ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಮತ್ತು ಅದರ ಅಧೀನದ ಆಸ್ಪತ್ರೆಗಳಲ್ಲಿ ಭದ್ರತಾ ಮತ್ತು ಸ್ವತ್ಛತಾ ಸಿಬ್ಬಂದಿ ಸೇರಿ ವಿವಿಧ ಸಿಬ್ಬಂದಿಯನ್ನು ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗಿದೆ. ಅವರಿಗೆ ಇಪಿಎಫ್, ಇಎಸ್‌ಐ ಸೌಲಭ್ಯಗಳ ನೀಡಲಾಗಿಲ್ಲ ಎಂಬ ದೂರುಗಳಿವೆ.

ಸಿಬ್ಬಂದಿ ಹಾಗೂ ಅವರ ಖಾತೆಗೆ ಜಮೆಯಾಗಿರುವ ಇಎಸ್‌ಐ ಮತ್ತು ಇಪಿಎಫ್ ವಿವರ ಕೋರಿ ಆರ್‌ಟಿಐ ಕಾರ್ಯಕರ್ತ ಮಾಗಿ ಉಮೇಶ್‌ ಎಂಬುವವರು ಅಡಿ ಆರು ತಿಂಗಳ ಹಿಂದೆ ಅರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದು, ಅಧಿಕಾರಿಗಳು ಸಮರ್ಪಕ ಉತ್ತರ ನೀಡದೆ, ಇದೊಂದು ಗೌಪ್ಯತೆ ವಿಚಾರ ಎಂದು ಸಬೂಬು ಹೇಳಿ ಮಾಹಿತಿ ನಿರಾಕರಿಸಿದ್ದಾರೆ ಎನ್ನಲಾಗಿದೆ. 

ಒಂದೂವರೆ ಸಾವಿರ ಸಿಬ್ಬಂದಿಗೆ ವಂಚನೆ!?: ವಿಕ್ಟೋರಿಯಾ, ಮಿಂಟೋ, ವಾಣಿ ವಿಲಾಸ, ಟ್ರಾಮಾಕೇರ್‌ ಮತ್ತು ತುರ್ತು ನಿರ್ವಹಣಾ ಘಟಕ, ಬೋರಿಂಗ್‌, ಲೇಡಿ ಕರ್ಜನ್‌ ಆಸ್ಪತ್ರೆಗಳು ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಸುಮಾರು 1500 ಸಿಬ್ಬಂದಿ ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರೆಲ್ಲರಿಗೂ ವಂಚನೆಯಾಗಿರುವ ಸಾಧ್ಯತೆಯಿದೆ ಎಂದು ಮಾಗಿ ಉಮೇಶ್‌ ಆರೋಪಿಸಿದ್ದಾರೆ. 

ಸ್ವತ್ಛತಾ ಸಿಬ್ಬಂದಿ ವೇತನ ಕೇವಲ 5-6 ಸಾವಿರ ಮಾತ್ರ!: ಕಳೆದ ಆಗಸ್ಟ್‌ನಲ್ಲಿ ಸರ್ಕಾರ ಪೌರಕಾರ್ಮಿಕರ ವೇತನವನ್ನು 14 ಸಾವಿರಕ್ಕೆ ಹೆಚ್ಚಿಸಿದೆ. ಆದರೆ, ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಅದರ ಅಧೀನದ ಆಸ್ಪತ್ರೆಗಳ ಸ್ವತ್ಛತಾ ಸಿಬ್ಬಂದಿಗೆ ಗುತ್ತಿಗೆದಾರರು ಇನ್ನೂ ಐದಾರು ಸಾವಿರ ರೂ. ವೇತನ ನೀಡುತ್ತಿದ್ದಾರೆ. 

ಸಿಬ್ಬಂದಿಗೆ ದೊರೆಯಬೇಕಾದ ಸೌಲಭ್ಯಗಳು ಗೌಪ್ಯತೆ ಹೇಗಾಗುತ್ತದೆ. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಅಮಾಯಕ ಸಿಬ್ಬಂದಿಯನ್ನು ವಂಚಿಸುತ್ತಿದ್ದಾರೆ. ಹೀಗಾಗಿ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದೇನೆ.
-ಮಾಗಿ ಉಮೇಶ್‌, ಆರ್‌ಟಿಐ ಕಾರ್ಯಕರ್ತ

ಆರೋಪಗಳು ಹಾಗೂ ಮಾಹಿತಿ ಹಕ್ಕಿನಡಿ ಮಾಹಿತಿ ನೀಡದಿರುವುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. 
-ಡಾ. ಸಚ್ಚಿದಾನಂದ, ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಡೀನ್‌

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.