ಹುದ್ದೆ ಖಾಲಿ ಖಾಲಿ; ನ್ಯಾಯ ವಿಳಂಬ


Team Udayavani, Nov 27, 2017, 6:00 AM IST

High-court-Karnataka.jpg

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿನ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ನೇಮಕ ಹಾಗೂ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಮತ್ತು ಕೇಂದ್ರ ಸರ್ಕಾರದ ನಡುವೆ ಸೃಷ್ಟಿಯಾಗಿರುವ ತಿಕ್ಕಾಟದ ಪರಿಣಾಮದಿಂದಾಗಿ ಲಕ್ಷಾಂತರ ಕೇಸುಗಳ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿದೆ.

ರಾಜ್ಯ ಹೈಕೋರ್ಟ್‌ನಲ್ಲೂ ಖಾಲಿಯಾದ ನ್ಯಾಯಮೂರ್ತಿಗಳ ಸ್ಥಾನಕ್ಕೆ ನೇಮಕ ಪ್ರಕ್ರಿಯೆ ನಡೆಯದಿರುವುದರಿಂದ ಮುಖ್ಯನ್ಯಾಯಮೂರ್ತಿ ಹುದ್ದೆಯೂ ಸೇರಿ ಒಟ್ಟು 37 ನ್ಯಾಯಮೂರ್ತಿಗಳ ಸ್ಥಾನ ಖಾಲಿ ಉಳಿದುಕೊಂಡಿವೆ. ಅಂದರೆ, ಶೇ. 50 ಕ್ಕಿಂತಲೂ ಹೆಚ್ಚು ಹುದ್ದೆಗಳು ಭರ್ತಿಯಾಗದೇ ಉಳಿದಿವೆ. ಹಾಲಿ 25 ನ್ಯಾಯಮೂರ್ತಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ ಬೆಂಗಳೂರು ಪೀಠದಲ್ಲಿ 17 ಮಂದಿ ನ್ಯಾಯಮೂರ್ತಿಗಳು, ಧಾರವಾಡದಲ್ಲಿ ಐದು ಹಾಗೂ ಕಲಬುರಗಿಯಲ್ಲಿ ಮೂರು ಪೀಠಗಳು ಮಾತ್ರ ಕಾರ್ಯನಿರ್ವಹಣೆಯಲ್ಲಿವೆ.

ಹೈಕೋರ್ಟ್‌ನಲ್ಲಿ ಒಟ್ಟು  ಮಂಜೂರಾದ ನ್ಯಾಯಮೂರ್ತಿಗಳ ಹುದ್ದೆ 62, ಇದರಲ್ಲಿ ಬೆಂಗಳೂರು ಪ್ರಧಾನ ಪೀಠದಲ್ಲಿ 42, ಧಾರವಾಡ ಹಾಗೂ  ಕಲಬುರಗಿಯಲ್ಲಿ ತಲಾ 10 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸಬೇಕು. ಆದರೆ, ಖಾಲಿ ಹುದ್ದೆಗಳ ನೇಮಕ  ಮಾಡದೇ ಇರುವುದರಿಂದ  ಹಾಲಿ 25 ನ್ಯಾಯಮೂರ್ತಿಗಳು ಮಾತ್ರ ಕಾರ್ಯ
ನಿರ್ವಹಿಸುತ್ತಿದ್ದಾರೆ.2008ರಲ್ಲಿ ಅಸ್ಥಿತ್ವಕ್ಕೆ ಬಂದ ಎರಡೂ ಸಂಚಾರಿ ಪೀಠಗಳಲ್ಲಿ ತಲಾ 10 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾದರೂ, ಇದುವರೆಗೂ ಒಮ್ಮೆಯೂ ಹತ್ತು ನ್ಯಾಯಮೂರ್ತಿಗಳ ಸ್ಥಾನ ಭರ್ತಿಯಾಗಿಲ್ಲ. 

ನ್ಯಾಯಮೂರ್ತಿಗಳ ನೇಮಕ ವಿಳಂಬದಿಂದ ಲಕ್ಷಾಂತರ ಕೇಸುಗಳು ವಿಚಾರಣೆಯಲ್ಲಿ ಬಾಕಿ ಉಳಿದುಕೊಂಡಿವೆ.
ಖಾಲಿಯಿರುವ ನ್ಯಾಯಮೂರ್ತಿಗಳ ನೇಮಕಾತಿ ಮಾಡುವಂತೆ ಬೆಂಗಳೂರು ವಕೀಲರ ಸಂಘದಿಂದ ಕೊಲಿಜಿಯಂ ಹಾಗು  ಸುಪ್ರೀಂಕೋರ್ಟ್‌ಗೆ ಪತ್ರ ಬರೆಯಲಾಗಿದೆ. ನ್ಯಾಯಮೂರ್ತಿಗಳ ಹುದ್ದೆ ಭರ್ತಿಯಾಗದಿರುದರಿಂದ ಸ್ವತ: ಹಾಲಿ ನ್ಯಾಯಮೂರ್ತಿಗಳೇ ಕೇಸುಗಳ ವಿಚಾರಣೆ ವೇಳೆ ಹಲವು ಬಾರಿ ಅಸಮಾಧಾನವ್ಯಕ್ತಪಡಿಸಿದ ನಿದರ್ಶನಗಳಿವೆ.

ಎರಡೂವರೆ ಲಕ್ಷಕ್ಕಿಂತ  ಅಧಿಕ ಕೇಸುಗಳು ಬಾಕಿ !
ಇನ್ನು ರಾಜ್ಯ ಹೈಕೋರ್ಟ್‌ನ ಮೂರು ಪೀಠಗಳಲ್ಲಿ ಕ್ರಿಮಿನಲ್‌ ಹಾಗೂ ಸಿವಿಲ್‌ ಕೇಸುಗಳು ಸೇರಿದಂತೆ ಒಟ್ಟು 2.5ಲಕ್ಷಕ್ಕಿಂತ ಅಧಿಕ ಕೇಸುಗಳು ಇತ್ಯರ್ಥವಾಗದೇ ಬಾಕಿ ಉಳಿದುಕೊಂಡಿವೆ. ಈ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆಯೂ ಹೆಚ್ಚಿದೆ. ಪರಿಣಾಮ ಹಾಲಿ ಕಾರ್ಯನಿರ್ವಹಿಸುತ್ತಿರುವ 25 ನ್ಯಾಯಮೂರ್ತಿಗಳ ಮೇಲೆ ಕಾರ್ಯಭಾರ ಹೆಚ್ಚಾಗುತ್ತಿದೆ. ನಿಗದಿತ ಸಮಯದಲ್ಲಿ ಖಾಲಿಯಿರುವ ನ್ಯಾಯಮೂರ್ತಿಗಳ ಸ್ಥಾನವನ್ನು ಭರ್ತಿ ಮಾಡದಿರುವುದರಿಂದ ಕೇಸುಗಳು ಇತ್ಯರ್ಥವಾಗಲು ವರ್ಷಾನುಗಟ್ಟಲೇ ಕಾಯಬೇಕಾಗಿದೆ. ಅಲ್ಲದೆ ಕಕ್ಷಿದಾರರಿಗೂ ತೊಂದರೆಯುಂಟಾಗುತ್ತಿದೆ ಎಂದು ಹೈಕೋರ್ಟ್‌ ಹಿರಿಯ ವಕೀಲರೊಬ್ಬರು ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಕೇಂದ್ರ ಹಾಗೂ ಕೊಲಿಜಿಯಂ ನಡುವಣ ತಿಕ್ಕಾಟವೇನು?
ನ್ಯಾಯಮೂರ್ತಿಗಳ ನೇಮಕ, ವರ್ಗಾವಣೆ ಅಧಿಕಾರವನ್ನು ಕೇಂದ್ರಸರ್ಕಾರ ತನ್ನ ಬಿಗಿಮುಷ್ಟಿಯಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದೆ. ಹೀಗಾಗಿ ಕೊಲಿಜಿಯಂಗೆ ಪರ್ಯಾಯವಾಗಿ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ( ಎನ್‌ಜೆಎಸಿ) ತಿದ್ದುಪಡಿ ಮಸೂದೆಯನ್ನು 2014ರಲ್ಲಿ ಉಭಯ ಸದನಗಳಲ್ಲಿ ಮಂಡಿಸಿ ಬಹುಮತದೊಂದಿಗೆ ಕಾಯಿದೆ ಜಾರಿಗೊಳಿಸಿತ್ತು.

ಈ ಮಧ್ಯೆ ಎನ್‌ಜೆಎಸಿ ಕಾಯಿದೆಯನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯನ್ನು ಮಾನ್ಯ ಮಾಡಿದ ಅಂದಿನ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಜೆ.ಎಸ್‌ ಖೇಹರ್‌ ನೇತೃತ್ವದ ಪೂರ್ಣ ಪೀಠ, ಎನ್‌ಜೆಎಸಿ ಕಾಯಿದೆ ಅಸಂವಿಧಾನಿಕ ಎಂದು ಅಭಿಪ್ರಾಯಪಟ್ಟು ಕಾಯಿದೆ ರದ್ದುಗೊಳಿಸಿ 2015ರ ಅಕ್ಟೋಬರ್‌ನಲ್ಲಿ ತೀರ್ಪು ನೀಡಿತ್ತು. ಈ ವೇಳೆ ಅಗತ್ಯವಿದ್ದರೆ ಕೇಂದ್ರಸರ್ಕಾರ ನ್ಯಾಯಮೂರ್ತಿಗಳ ನೇಮಕಾತಿಗೆ ಮಾರ್ಗಸೂಚಿ ರಚಿಸಿಕೊಳ್ಳಬಹುದು ಎಂದಿತ್ತು.

ಈ ಹಿನ್ನೆಲೆಯಲ್ಲಿ ಕೇಂದ್ರಸರ್ಕಾರ ಹೈಕೋರ್ಟ್‌ ನ್ಯಾಯಮೂರ್ತಿಗಳ ನೇಮಕಾತಿಗೂ ಮುನ್ನ ( ನೇಮಕವಾಗಲಿರುವವರ) ಹಿನ್ನೆಲೆ, ಅವರಿಂದ ರಾಷ್ಟ್ರೀಯ ಭದ್ರತೆಗೆ ಹಾನಿಯಾಗಲಿದೆಯೇ? ದೇಶಕ್ಕೆ ತೊಂದರೆಯಿದೆಯೇ? ನೇಮಕಾತಿ ವಿಚಾರದಲ್ಲಿ ಸರ್ಕಾರದ ತೀರ್ಮಾನವೇ ಅಂತಿಮ ತೀರ್ಮಾನ ಎಂಬಿತ್ಯಾದಿ ನಿಯಮಗಳನ್ನು ಸುಪ್ರೀಂಕೋರ್ಟ್‌ ಮುಂದಿಟ್ಟಿತ್ತು. ಆದರೆ , ನಿಯಮಗಳು ನ್ಯಾಯಾಂಗದೊಳಗಿನ ಹಸ್ತಕ್ಷೇಪಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಸುಪ್ರೀಂಕೋರ್ಟ್‌ ಒಪ್ಪುತ್ತಿಲ್ಲ. ಇದೇ ವಿಚಾರಕ್ಕೆ ನ್ಯಾಯಮೂರ್ತಿಗಳ ನೇಮಕಾತಿ ನೆನೆಗುದಿಗೆ ಬಿದ್ದಿದೆ ಎಂದು ವಕೀಲರೊಬ್ಬರು ಅಭಿಪ್ರಾಯಪಡುತ್ತಾರೆ.

ಎರಡು ಪ್ರತ್ಯೇಕ ಪಿಐಎಲ್‌!
ಮತ್ತೂಂದೆಡೆ ಹೈಕೋರ್ಟ್‌ನಲ್ಲಿ ಖಾಲಿಯಿರುವ ನ್ಯಾಯಮೂರ್ತಿಗಳ ಹುದ್ದೆಗಳನ್ನು ಶೀಘ್ರಭರ್ತಿ ಮಾಡಲು ಕೇಂದ್ರಸರ್ಕಾರಕ್ಕೆ  ನಿರ್ದೇಶಿಸುವಂತೆ ಕೋರಿ ನಿವೃತ್ತ ನ್ಯಾಯಮೂರ್ತಿ ಎ.ಎನ್‌ ವೇಣುಗೋಪಾಲಗೌಡ,ವಕೀಲರಾದ ಎಸ್‌.ಬಸವರಾಜ್‌, ಬಿ ಎಂ ಆರುಣ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅದೇ ರೀತಿ ವಕೀಲರಾದ ಜಿ.ಎನ್‌ ಮೋಹನ್‌ ಕುಮಾರ್‌  ಹಾಗೂ ಜಯಂತ್‌ ಕೃಷ್ಣ ಬಿ.ಎನ್‌ ಕೂಡ ಪ್ರತ್ಯೇಕ ಪಿಐಎಲ್‌ ಸಲ್ಲಿಸಿದ್ದು ಎರಡೂ ಅರ್ಜಿಗಳು ವಿಚಾರಣಾ ಹಂತದಲ್ಲಿವೆ.

ಹೈಕೋರ್ಟ್‌ನಲ್ಲಿ ಖಾಲಿಯಿರುವ ನ್ಯಾಯಮೂರ್ತಿಗಳ ಸ್ಥಾನಗಳನ್ನು ಶೀಘ್ರ ಭರ್ತಿ ಮಾಡುವಂತೆ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ, ಕೇಂದ್ರಕಾನೂನು ಸಚಿವರು , ಕೊಲಿಜಿಯಂಗೆ ಸಂಘದ ನಿರ್ಣಯದ ಪತ್ರ  ಕಳುಹಿಸಿಕೊಡಲಾಗಿದೆ.ಶೀಘ್ರದಲ್ಲಿಯೇ ನ್ಯಾಯಮೂರ್ತಿಗಳನ್ನು ನೇಮಕ  ಮಾಡದೇ ಇದ್ದರೂ ಉಪವಾಸ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದೂ ತಿಳಿಸಲಾಗಿದೆ. ಇನ್ನೂ ಪ್ರತಿಕ್ರಿಯೆ ಬಂದಿಲ್ಲ.
ಎಚ್‌.ಸಿ ಶಿವರಾಮು,ಅಧ್ಯಕ್ಷರು, ಬೆಂಗಳೂರು ವಕೀಲರ ಸಂಘ

– ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

leopard

Mulky: ಮತ್ತೆ ಚಿರತೆ ಸಂಚಾರ ಪತ್ತೆ

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

red-Corner

Kumbale: ಕೊಲ್ಲಿಗೆ ಪರಾರಿಯಾದ 6 ಮಂದಿ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌

Election: ನೆಲದವರೆಗೂ ಬಗ್ಗಿದ್ದೇನೆ, ತಾಳ್ಮೆಗೂ ಮಿತಿ ಇದೆ: ಕುಮಾರಸ್ವಾಮಿ

Election: ನೆಲದವರೆಗೂ ಬಗ್ಗಿದ್ದೇನೆ, ತಾಳ್ಮೆಗೂ ಮಿತಿ ಇದೆ: ಕುಮಾರಸ್ವಾಮಿ

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

Election: ನೆಲದವರೆಗೂ ಬಗ್ಗಿದ್ದೇನೆ, ತಾಳ್ಮೆಗೂ ಮಿತಿ ಇದೆ: ಕುಮಾರಸ್ವಾಮಿ

Election: ನೆಲದವರೆಗೂ ಬಗ್ಗಿದ್ದೇನೆ, ತಾಳ್ಮೆಗೂ ಮಿತಿ ಇದೆ: ಕುಮಾರಸ್ವಾಮಿ

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

leopard

Mulky: ಮತ್ತೆ ಚಿರತೆ ಸಂಚಾರ ಪತ್ತೆ

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

Priyank Kharge: ನಿಪುಣ ಕರ್ನಾಟಕ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ

red-Corner

Kumbale: ಕೊಲ್ಲಿಗೆ ಪರಾರಿಯಾದ 6 ಮಂದಿ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.