ದುರ್ನಡತೆಗೆ ಬಾಲ್ಯದಲ್ಲೇ ಕಡಿವಾಣ ಹಾಕಿ
Team Udayavani, Jan 14, 2018, 11:42 AM IST
ಕೆ.ಆರ್.ಪುರ: ಪ್ರಸ್ತುತ ಸಂದರ್ಭದಲ್ಲಿ ಮಕ್ಕಳಿಗೆ ಪ್ರೀತಿ, ಸಹಬಾಳ್ವೆ ರೀತಿಯ ಮೌಲ್ಯಗಳನ್ನು ಕಲಿಸಿಕೊಡುವ ಅಗತ್ಯವಿದೆ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ಸಲಹೆ ನೀಡಿದರು.
ಇಲ್ಲಿನ ಅಮರ ಜ್ಯೋತಿ ಇಂಗ್ಲೀಷ್ ಶಾಲೆಯ 34ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಇತ್ತೀಚಿಗೆ ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಆಸ್ತಿ, ಹಣದಾಸೆಗೆ ತನ್ನ ಅಜ್ಜ, ಅಜ್ಜಿಯನ್ನೇ ಕೊಂದಿದ್ದಾನೆ.
ಹಣದಾಸೆ ಬಂದಾಗ ಸಂಬಂಧಿಕರೆಂದೂ ನೋಡದೆ ಕೊಲ್ಲಲು ಮುಂದಾಗುವ ಇಂದಿನ ಯುವ ಪೀಳಿಗೆಯ ಮನಸ್ಥಿತಿ ನೋಡಿದರೆ ಆತಂಕವಾಗುತ್ತದೆ. ಇಂಥ ಪ್ರವೃತ್ತಿ, ದುರ್ನಡತೆಗೆ ಬಾಲ್ಯದಲ್ಲೇ ಕಡಿವಾಣ ಹಾಕುವ ಜವಾಬ್ದಾರಿ ಪೋಷಕರ ಮೇಲಿದೆ ಎಂದರು.
ಈ ನಿಟ್ಟಿನಲ್ಲಿ ಪೋಷಕರು ಮಕ್ಕಳ ಜತೆ ಹೆಚ್ಚು ಸಮಯ ಕಳೆಯಬೇಕು. ಅವರು ತಪ್ಪು ಮಾಡಿದಾಗ ಆ ಕ್ಷಣವೇ ತಿದ್ದುವ ಕೆಲಸ ಮಾಡಬೇಕು. ಸಂಬಂಧಗಳ ಬೆಲೆ ತಿಳಿಸುಕೊಡುವ ಜತೆಗೆ ಜೀವನ ಮೌಲ್ಯಗಳನ್ನು ಅವರಲ್ಲಿ ಬೆಳೆಸಬೇಕು. ಒಂದೊಮ್ಮೆ ಪೋಷಕರು ತಮ್ಮ ಮಕ್ಕಳ ತಪ್ಪನ್ನು ಸಮರ್ಥಿಸಿಕೊಂಡರೆ, ಅದೇ ಮಕ್ಕಳು ಮುಂದೆ ಅವರಿಗೇ ವೈರಿಗಳಾಗುತ್ತಾರೆ ಎಂದು ಎಚ್ಚರಿಸಿದರು.
ಶಾಸಕ ಬಿ.ಎ.ಬಸವರಾಜ್ ಮಾತನಾಡಿದರು. ಇದೆ ವೇಳೆ ಶಾಲೆಯ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಮತ್ತು ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪಾಲಿಕೆ ಸದಸ್ಯ ಶ್ರೀಕಾಂತ್, ಕಾರ್ಯದರ್ಶಿ ಮೋಹನ್, ಪ್ರಿನ್ಸಿಪಾಲ್ ಸಾಯಿ ಕುಮಾರಿ ಹಾಗೂ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.