ಭಾರದ ಹೆಜ್ಜೆಯಿಟ್ಟ ಅಭಿಮಾನಿ ಬಳಗ
Team Udayavani, Nov 26, 2018, 12:28 PM IST
ಬೆಂಗಳೂರು: ಬಾನ ಭಾಸ್ಕರ ಉದಯಿಸುವ ಮುನ್ನವೇ ಅಲ್ಲಿ ನೀರವ ಮೌನ ಆವರಿಸಿತ್ತು. ಸೂರ್ಯನ ಹೊಂಗಿರಣ ಸೂಸುವ ಮೊದಲೇ ಪಾರ್ಥಿವ ಶರೀರ ಮನೆ ಬಿಟ್ಟು ಸಾಗಿತ್ತು. ಹೀಗಾಗಿ ಸಾವಿರಾರು ಅಭಿಮಾನಿಗಳಿಗೆ ಆ ನಿವಾಸದ ಮುಂದೆ ಅಂತಿಮ ದರ್ಶನದ ಭಾಗ್ಯ ಸಿಗಲಿಲ್ಲ.
“ಮಂಡ್ಯದ ಗಂಡು’ ಅಂಬರೀಶ್ ಅವರ ಜೆ.ಪಿ.ನಗರ ನಿವಾಸದ ಮುಂದೆ ಭಾನುವಾರ ಮುಂಜಾನೆ ನೆರೆದಿದ್ದ ಅಸಂಖ್ಯ ಅಭಿಮಾನಿಗಳು, ನಿರಾಸೆಯಿಂದ ಕಣ್ಣೀರಿಡುತ್ತಲೇ ಕಂಠೀರವ ಕ್ರೀಡಾಂಗಣದತ್ತ ಸಾಗಿದರು. ಅಂಬರೀಶ್ ವಿಧಿವಶರಾದ ಸುದ್ದಿ ತಿಳಿದು ಕನಕಪುರ, ಮಂಡ್ಯ, ಮಳವಳ್ಳಿ, ರಾಮನಗರ, ಮೈಸೂರು, ರಾಯಚೂರು ಸೇರಿದಂತೆ ರಾಜ್ಯದ ನಾನಾ ಮೂಲೆಗಳಿಂದ ಅಭಿಮಾನಿ ಬಳಗ ಭಾನುವಾರ ಬೆಳಗ್ಗೆ ಜೆ.ಪಿ.ನಗರದ ನಿವಾಸಕ್ಕೆ ದೌಡಾಯಿಸಿತ್ತು.
ಕಟೌಟ್ಗಾಗಿ ಸುತ್ತಾಟ: ಕೆಲವು ಆಟೋ ಅಭಿಮಾನಿಗಳು ಅಂಬರೀಶ್ ಅವರ ಕಟೌಟ್ಗಾಗಿ ಜಯನಗರದ ನಿವಾಸದಲ್ಲಿ ಹುಡುಕಾಟ ನಡೆಸಿದ್ದರು. ಬೆಳಗ್ಗೆ ಮಾರೇನಹಳ್ಳಿ ಸಿಗ್ನಲ್ ಸಮೀಪದ ಆದರ್ಶ ಪ್ಯಾಲೆಸ್ ಪಕ್ಕದಲ್ಲಿರುವ ಅವರ ನಿವಾಸಕ್ಕೆ ಆಟೋದಲ್ಲಿ ಬಂದ ಅಭಿಮಾನಿಗಳು, ಕಟೌಟ್ಗಾಗಿ ಹುಡುಕಾಡಿದರು.
ಬೆಳಗ್ಗೆಯಿಂದಲೇ ಜಯನಗರ, ಜೆಪಿ ನಗರ ತುಂಬೆಲ್ಲಾ ಸುತ್ತಾಟ ನಡೆಸಿದ್ದೀವಿ.ಎಲ್ಲಿಯೂ ಅಣ್ಣನ ಬ್ಯಾನರ್ ಇಲ್ಲವೇ ಕಟೌಟ್ ಮಾಡಿಕೊಡುವವರು ಬಾಗಿಲು ತೆರೆದಿಲ್ಲ. ಹೀಗಾಗಿ, ಅಣ್ಣನ ಮನೆಯಲ್ಲೇ ಹಳೆಯ ಬ್ಯಾನರ್ ಬಂದೆವು. ಆದರೆ ಒಂದೂ ಬ್ಯಾನರ್ ಸಿಗಲಿಲ್ಲ ಎಂದು ಹೇಳುತ್ತಲೇ ಆಟೋ ಚಾಲಕ ಗೌಡ ಅತ್ತರು.
ಊರಿಗೆ ತೆರಳಿದ ಕೆಲಸಗಾರರು: ಜೆ.ಪಿ. ನಗರದ ಹಳೆ ಮನೆ ಜಾಗದಲ್ಲಿ ಅಂಬರೀಶ್ ಅವರು ಹೊಸ ಮನೆ ನಿರ್ಮಾಣ ಕಾರ್ಯ ಆರಂಭಿಸಿದ್ದರು. ಕಟ್ಟಡ ನಿರ್ಮಾಣ ಕಾರ್ಯ ಕೂಡ ಅಂತಿಮ ಹಂತಕ್ಕೆ ತಲುಪಿದ್ದು, ಜನವರಿ ಅಥವಾ ಫೆಬ್ರುವರಿಯಲ್ಲಿ ಪೂರ್ಣಗೊಳ್ಳುವ ನೀರಿಕ್ಷೆ ಇತ್ತು.
ಆದರೆ ಅಂಬರೀಶ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಉತ್ತರ ಪ್ರದೇಶ ಮತ್ತು ತಮಿಳುನಾಡು ಮೂಲದ ಮೂಲದ ಕೂಲಿ ಕಾರ್ಮಿಕರು ಭಾನುವಾರ ತಮ್ಮ ಪರಿಕರಗಳೊಂದಿಗೆ ಊರಿಗೆ ತೆರಳಿದರು. ಅಂಬರೀಶ್ ಅಣ್ಣನವರ ನಿಧನದ ಹಿನ್ನೆಲೆಯಲ್ಲಿ ಕಟ್ಟಡ ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ. 15 ದಿನಗಳ ನಂತರ ಮತ್ತೆ ಕೆಲಸ ಆರಂಭಿಸುವುದಾಗಿ ಉತ್ತರ ಪ್ರದೇಶ ಮೂಲದ ಕಾರ್ಮಿಕ ಅನಿಲ್ “ಉದಯವಾಣಿ’ಗೆ ತಿಳಿಸಿದರು.
ಈಗ ಯಾರಣ್ಣ ಬೈಯ್ಯೋರು?: ಅಣ್ಣ ನಮ್ಮ ಕಣ್ಣಾಗಿದ್ದ, ಮಂಡ್ಯದ ಕಳಸದಂತ್ತಿದ್ದ. ಅಕ್ಕರೆಯಿಂದ ನಮ್ಮನ್ನ ಬೈಯುತ್ತಿದ್ದ. ಈಗ ಯಾರಣ್ಣ ನಮ್ಮನ್ನು ಬೈಯ್ಯೋರು? ಮಂಡ್ಯದ ಜನರು ಅನಾಥರಾಗಿ ಹೋದೆವು ಎಂದು ಮಳವಳ್ಳಿಯಿಂದ ಬೈಕ್ನಲ್ಲಿ ಬಂದಿದ್ದ ಬಸವರಾಜು ಅವರು ಅಂಬರೀಶ್ ಅವರ ನಿವಾಸದ ಮುಂದೆ ಬಿಕ್ಕಿ ಬಿಕ್ಕಿ ಅತ್ತರು. ಅಣ್ಣನನ್ನು ಆತನ ಹೊಸ ಮನೆ ಮುಂದೆ ನೋಡಬೇಕು ಎಂಬ ಆಸೆಯಿಂದ ಬಂದೆ.
ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಬೈಕ್ ಏರಿದೆ.ಆದರೆ ನಮ್ಮಣ್ಣನೇ ಇಲ್ಲಿಲ್ಲ ಎಂದು ಕಣ್ಣೀರಿಡುತ್ತಲೇ ಕಂಠೀರವ ಕ್ರೀಡಾಂಗಣದತ್ತ ಮುಖ ಮಾಡಿದರು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಕಾರು, ಆಟೋ, ಬೈಕ್ನಲ್ಲಿ ಅಭಿಮಾನಿಗಳು ಅವರ ನಿವಾಸದತ್ತ ದೌಡಾಯಿಸುತ್ತಲೇ ಇದ್ದರು. ಕೆಲವರು ಹೊಸ ಮನೆ ಇರಿಸಲಾಗಿದ್ದ ಭಾವಚಿತ್ರಕ್ಕೆ ಕೈ ಮುಗಿದು ಹೊರ ಬಂದರೆ, ಇನ್ನು ಕೆಲವರು ಅಂಬರೀಶ್ ಅವರು ಇತ್ತೀಚೆಗೆ ವಾಸವಿದ್ದ ಜಯನಗರ ನಿವಾಸದ ಮುಂದೆ ನಿಂತು ಕಣ್ಣೀರಿಟ್ಟರು.
ಅಂಬರೀಶ್ ಅವರು ಗುರುವಾರ ಜೆ.ಪಿ.ನಗರದ ನಿವಾಸಕ್ಕೆ ಭೇಟಿ ನೀಡಿದ್ದರು. ಕಟ್ಟಡದ ಒಳಗೆ ನಡೆಯುತ್ತಿದ ಕೆಲಸವನ್ನು ವೀಕ್ಷಿಸಿ, ಕೆಲಸ ಯಾವಾಗ ಮುಗಿಯುತ್ತೆ ಎಂದು ಕೇಳಿ, ಜನವರಿಯೊಳಗೆ ಮುಗಿಸುವಂತೆ ಇಂಜಿನಿಯರಿಂಗ್ ಕಾರ್ಮಿಕರಿಗೆ ತಿಳಿಸಿ ಹೋಗಿದ್ದರು.
-ರಾಹುಲ್, ಕಾವಲುಗಾರ
* ದೇವೇಶ್ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.