ಗನ್‌ಮ್ಯಾನ್‌ ರಿವಾಲ್ವರ್‌ ಕದ್ದವರ ಸೆರೆ


Team Udayavani, Mar 24, 2017, 12:25 PM IST

gun-accused.jpg

ಬೆಂಗಳೂರು: ಇತ್ತೀಚೆಗೆ ದೇವನಹಳ್ಳಿ ಶಾಸಕ ಪಿಳ್ಳ ಮುನಿಸ್ವಾಮಪ್ಪ ಅವರ ಅಂಗರಕ್ಷಕ ನರಸಿಂಹಮೂರ್ತಿ ಎಂಬುವರ ಸರ್ವೀಸ್‌ ರಿವಾಲ್ವಾರ್‌ ಕಳವು ಮಾಡಿ ದುಷ್ಕರ್ಮಿಗಳಿಗೆ ಮಾರಾಟ ಮಾಡಲು ಯತ್ನಿಸಿದ್ದ ಮಂಗಳೂರು ಮೂಲದ ಇಬ್ಬರು ಕುಖ್ಯಾತ ದರೋಡೆಕೋರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಸೂರತ್ಕಲ್‌ ನಿವಾಸಿ ಧನುಷ್‌(19), ವಿಜಯ್‌ ಅಲಿಯಾಸ್‌ ಆಂಜನೇಯ (21) ಬಂಧಿತರು. ಆರೋಪಿಗಳಿಂದ ಒಂದು ಪಿಸ್ತೂಲ್‌, 16 ಮೊಬೈಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರ ವಿರುದ್ಧವೂ ಮಂಗಳೂರಿನ ವಿವಿಧ ಠಾಣೆಗಳಲ್ಲಿ ದರೋಡೆ ಪ್ರಕರಣಗಳಿವೆ ಎಂದು ನಗರ ಪೊಲೀಸ್‌ ಆಯುಕ್ತ ಪ್ರವೀಸ್‌ ಸೂದ್‌ ತಿಳಿಸಿದ್ದಾರೆ.

ಜಾಲಿರೈಡ್‌ಗೆ ಬಂದಿದ್ದರು: ಧನುಷ್‌ ಮತ್ತು ವಿಜಯ್‌ ಮಂಗಳೂರಿನಲ್ಲಿ ಬೈಕ್‌ ಕದ್ದು ಬೆಂಗಳೂರಿಗೆ ಬಂದಿದ್ದರು. ಮೋಜು ಮಾಡಲು ಎಂ.ಎಸ್‌.ಪಾಳ್ಯ ಬಳಿಯ ಲಾಡ್ಜ್ವೊಂದರಲ್ಲಿ ಉಳಿದುಕೊಂಡಿದ್ದರು. ಫೆ.24ರಂದು ರಾತ್ರಿ ವಸತಿಗೃಹದಿಂದ  ಕೆಲ ದೂರದಲ್ಲಿ ಮದ್ಯ ಸೇವಿಸಲು ಹೋಗಿದ್ದ ಅರೋಪಿಗಳು ಲಾಡ್ಜ್ಗೆ ಹಿಂದಿರುಗುವಾಗ ರಸ್ತೆಯಲ್ಲಿ ಪ್ರಜ್ಞೆತಪ್ಪಿ ಬಿದಿದ್ದ ನರಸಿಂಹಮೂರ್ತಿ ಅವರನ್ನು ದರೋಡೆ ಮಾಡಿ ಪರಾರಿಯಾಗಿದ್ದರು. 

ಪಿಸ್ತೂಲ್‌ ಮಾರಾಟಕ್ಕೆ ಯತ್ನ: ಮಂಗಳೂರಿಗೆ ಹೋದ ಧನುಷ್‌ ಮತ್ತು ವಿಜಯ್‌ ಅಲ್ಲಿನ ಕೆಲ ದರೋಡೆಕೋರರು ಹಾಗೂ ಸುಪಾರಿ ಹಂತಕರಿಗೆ ಪಿಸ್ತೂಲ್‌ ಮಾರಾಟಕ್ಕೆ ಯತ್ನಿಸಿದ್ದರು. ಆದರೆ, ಪಿಸ್ತೂಲ್‌ ಮೇಲೆ ಸಿಎಆರ್‌ ಹಾಗೂ ಪೊಲೀಸ್‌ ಇಲಾಖೆಯ ನಂಬರ್‌ ಇದ್ದರಿಂದ ಹೆದರಿ ಯಾರೂ ಖರೀದಿಸಿರಲಿಲ್ಲ.

ಹೀಗೆ ಪಿಸ್ತೂಲ್‌ ಮಾರಾಟದ ಬಗ್ಗೆ ಗುಪ್ತಚರ ಅಧಿಕಾರಿಗಳಿಂದ ಮಾಹಿತಿ ಬಂದಿತ್ತು. ಜತೆಗೆ ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿಗಳು ಸುಳಿವು ಪತ್ತೆಯಾಗಿತ್ತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

 ಶಾಸಕರ ಗನ್‌ಮ್ಯಾನ್‌ ರಸ್ತೆಯಲ್ಲಿ ಬಿದ್ದಿದ್ದು ಏಕೆ? 
ಫೆ. 23ರಂದು ದೇವನಹಳ್ಳಿಗೆ ತೆರಳುತ್ತಿದ್ದ  ಶಾಸಕ ಪಿಳ್ಳ ಮುನಿಸ್ವಾಮಪ್ಪ ತಮ್ಮ ಅಂಗರಕ್ಷಕ ನರಸಿಂಹಮೂರ್ತಿ ಅವರನ್ನು ಎಂ.ಎಸ್‌.ಪಾಳ್ಯ ಬಳಿ ಇಳಿಸಿ ಆಟೋದಲ್ಲಿ ಮನೆಗೆ ಹೋಗುವಂತೆ ತಿಳಿಸಿದ್ದರು. ನರಸಿಂಹಮೂರ್ತಿ ಕೆಲಸದ ಒತ್ತಡದಿಂದ ಬಳಲಿದ್ದರು. ಸಿನಿಮಾ ನೋಡಿಕೊಂಡು ಹೋಗೋಣವೆಂದು ಆಟೋ ಹಿಡಿದು ಚಿತ್ರಮಂದಿರದ ಕಡೆ ಹೊರಟಿದ್ದರು. ಅದರಂತೆ ಚಿತ್ರಮಂದಿರ ಬಳಿ ಇಳಿದ ನರಸಿಂಹಮೂರ್ತಿ ಅಲ್ಲಯೇ ಪ್ರಜ್ಞೆತಪ್ಪಿ ಬಿದಿದ್ದಾರೆ.

ಇದರಿಂದ ಗಾಬರಿಗೊಂಡ ಆಟೋ ಚಾಲಕ ಓಡಿ ಹೋಗಿದ್ದಾನೆ.  ನರಸಿಂಹಮೂರ್ತಿ ಅವರನ್ನು ಯಾರೂ ಗಮನಿಸಿರಲಿಲ್ಲ. ಇದೇ ವೇಳೆ ಮದ್ಯದ ಅಮಲಿನಲ್ಲಿ ಬರುತ್ತಿದ್ದ ಆರೋಪಿಗಳು ನರಸಿಂಹಮೂರ್ತಿ ಅವನ್ನು ಕಂಡು, ಅವರ ಜೇಬುಗಳನ್ನು ಹುಡುಕಿದ್ದಾರೆ. ಆಗ ಸಿಕ್ಕ ಸರ್ವಿಸ್‌ ಪಿಸ್ತೂಲ್‌ ಮತ್ತು ನಗದು ದೋಚಿ ಪರರಿಯಾಗಿದ್ದರು ಎಂದು ಡಿಸಿಪಿ ಡಾ ಪಿ.ಎಸ್‌. ಹರ್ಷಾ ತಿಳಿಸಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.