ಎಸ್‌ಟಿಪಿ ಕಾಮಗಾರಿ ಪುನರಾರಂಭ ಶೀಘ್ರ


Team Udayavani, Oct 18, 2019, 10:16 AM IST

bng-tdy-2

ಬೆಂಗಳೂರು: ಮೇಲ್ಛಾವಣಿ ಕುಸಿದು ಮೂವರು ಸಾವಿಗೀಡಾದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಹೆಬ್ಟಾಳ ಹೊರ ವರ್ತುಲದ ಬಳಿಯ ಜಲಮಂಡಳಿಯ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ಡೈಜಸ್ಟರ್‌ ಟ್ಯಾಂಕ್‌ಗಳ ಕಾಮಗಾರಿಯನ್ನು ಮತ್ತೆ ಆರಂಭಿಸಲು ಜಲಮಂಡಳಿ ಮುಂದಾಗಿದೆ.

ಈ ಕುರಿತು ಹಿರಿಯ ಅಧಿಕಾರಿಗಳ ಹಾಗೂ ಸರ್ಕಾರ ಒಪ್ಪಿಗೆ ಪಡೆಯುತ್ತಿದ್ದು, ಮುಂದಿನ ವಾರದಿಂದ ಕಾಮಗಾರಿಯೂ ಆರಂಭವಾಗುವ ಸಾಧ್ಯತೆಗಳಿವೆ. ಈ ಘಟಕದಲ್ಲಿ ಒಟ್ಟು 4 ನೂತನ ಎಸ್‌ಟಿಪಿ ಡೈಜಸ್ಟರ್‌ ಟ್ಯಾಂಕ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಕುಸಿದಿ ರುವ ಒಂದು ಟ್ಯಾಂಕ್‌ ಅನ್ನು ಬಿಟ್ಟು ಬಾಕಿ ಉಳಿದ ಟ್ಯಾಂಕ್‌ನ ಕಾಮಗಾರಿ ಮುಂದುವರೆಸಲು ಜಲಮಂಡಳಿ ಸದ್ದಿಲ್ಲದೆ ತಯಾರಿ ನಡೆಸಿದೆ.

ಮೆಗಾ ಸಿಟಿ ಆಪತ್ತು ನಿಧಿ ಹಾಗೂ ಅಮೃತ್‌ ಸಿಟಿ ಯೋಜನೆಯಡಿ ನಗರದಲ್ಲಿ ವಿವಿಧ ಪ್ರದೇಶಗಳಲ್ಲಿ ಸಂಗ್ರಹವಾಗುವ ಕೊಳಚೆ ನೀರನ್ನು ಸಂಗ್ರಹಿಸಿ ಆ ನೀರನ್ನು ಶುದ್ಧೀಕರಿಸಿ ನಾಲೆಗಳ ಮೂಲಕ ಹತ್ತಿರದ ಕೆರೆಗಳಿಗೆ ಹರಿಸಲು ನಗರದ ಒಂಭತ್ತು ಪ್ರದೇಶಗಳಲ್ಲಿ ಜಲಮಂಡಳಿಯು ತ್ಯಾಜ್ಯನೀರು ಸಂಸ್ಕರಣಾ ಘಟಕಗಳ ನಿರ್ಮಿಸುತ್ತಿದೆ. ಈ ಮೆಗಾ ಸಿಟಿ ಆಪತ್ತು ನಿಧಿ ಯೋಜನೆ ಅಡಿಯಲ್ಲಿಯೇ ಹೆಬ್ಟಾಳ ಹೊರ ವರ್ತುಲ ರಸ್ತೆ ಬಳಿ ಈ ತ್ಯಾಜ್ಯ ಸಂಸ್ಕರಣಾ ಘಟಕವು ನಿರ್ಮಾಣ ಮಾಡಲಾಗುತ್ತಿತ್ತು. ಆದರೆ, ಏಕಾಏಕಿ ಜು.17ರಂದು ಆ ಘಟಕದ ಒಂದು ಟ್ಯಾಂಕ್‌ನ ಮೇಲ್ಛಾವಣಿ ಕುಸಿದು ಮೂರು ಮಂದಿ ಸಾವಿಗೀಡಾಗಿ 20ಕ್ಕೂ ಹೆಚ್ಚು ಮಂದಿ ಗಾಯಾಳುಗಳಾದ್ದರು.

ಇನ್ನು ಈ ಅವಘಡಕ್ಕೆ ಕಾಮಗಾರಿ ಲೋಪದೋಷ ಕಾರಣವೇ ಎಂದು ತಿಳಿಯಲು ಜಲಮಂಡಳಿಯು ಚೆನ್ನೈನ ಸಿಎಸ್‌ಐಆರ್‌ (ಸ್ಟ್ರಕ್ಚರಲ್‌ ಎಂಜಿನಿಯರಿಂಗ್‌ ರಿಸರ್ಚ್‌ ಸೆಂಟರ್‌)ಗೆ ಗುಣಮಟ್ಟ ತನಿಖೆ ನಡೆಸಲು ನೀಡಿತ್ತು. ತನಿಖೆ ಪ್ರಗತಿಯಲ್ಲಿದ್ದ ಹಿನ್ನೆಲೆ ಹೆಬ್ಟಾಳದ ಎಸ್‌ಟಿಪಿ ಕಾಮಗಾರಿಗಳೆಲ್ಲ ಸ್ಥಗಿತಗೊಂಡಿದ್ದವು.

ಯೋಜನೆ ತಡವಾಗಬಾರದು ಎಂದು ಆರಂಭ: ಹೆಬ್ಟಾಳ ಹೊರ ವರ್ತುಲ ರಸ್ತೆ ಬಳಿ ನಿರ್ಮಿಸಲಾಗುತ್ತಿದ್ದ ಈ ಎಸ್‌ಟಿಪಿಯನ್ನು ಕಾಮಗಾರಿಯನ್ನು 2017 ಜುಲೈನಲ್ಲಿ ಆರಂಭಿಸಿದ್ದು, 2020 ಜನವರಿ 30ರೊಳಗೆ ಮುಗಿಸಲು ನಿರ್ಧರಿಸಲಾಗಿತ್ತು. 360 ಕೋಟಿ ರೂ. ವೆಚ್ಚದಲ್ಲಿಯೇ 100 ಎಂಎಲ್‌ಡಿ ಸಾಮರ್ಥ್ಯದ ಘಟಕ ನಿರ್ಮಿಸುತ್ತಿದ್ದು, ಒಟ್ಟು ನಾಲ್ಕು ಟ್ಯಾಂಕ್‌ ನಿರ್ಮಿಸಲಾಗು ತ್ತಿತ್ತು. ಈ ಪೈಕಿ ಒಂದು ಪೂರ್ಣಗೊಂಡಿದ್ದು, ಎರಡನೇಯದು ಕುಸಿದಿತ್ತು. ಈ ಅವಘಡ ನಡೆದ ಹಿನ್ನೆಲೆ ಉಳಿದ ಎರಡು ಟ್ಯಾಂಕರ್‌ ಕಾಮಗಾರಿಯೂ ಮೂರ್‍ನಾಲ್ಕು ತಿಂಗಳು ನಿಂತಿದೆ.

ಯೋಜನೆ ತಡವಾಗಬಾರದು ಎಂದು ಕುಸಿದು ತನಿಖೆ ನಡೆಯುತ್ತಿರುವ ಒಂದು ಟ್ಯಾಂಕ್‌ ಬಿಟ್ಟು ಅರ್ಧಕ್ಕೆ ನಿಂತಿರುವ ಉಳಿದ ಎರಡು ಟ್ಯಾಂಕ್‌ಗಳ ಸರ್ಕಾರ ಹಾಗೂ ಮೇಲಧಿಕಾರಿಗಳಿಂದ ಒಪ್ಪಿಗೆ ಪಡೆದು ಕಾಮಗಾರಿ ಆರಂಭಿಸಲಾಗುತ್ತಿದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಗುಣಮಟ್ಟ ಕುರಿತು ತನಿಖಾ ವರದಿ ಬರುವ ಮುಂಚೆಯೇ ಮತ್ತೆ ಕಾಮಗಾರಿ ಆರಂಭಿಸಲು ಮುಂದಾಗಿರುವ ಜಲಮಂಡಳಿಯ ನಡೆಗೆ ಕೆಲವೆಡೆ ವಿರೋಧ ವ್ಯಕ್ತವಾಗಿದೆ.

ತನಿಖಾ ವರದಿ ಬಂದಿಲ್ಲ : ಹೆಬ್ಟಾಳ ಘಟಕದ ಮೇಲ್ಚಾವಣಿ ಕುಸಿದ ಹಿನ್ನೆಲೆ ಮೂರನೇ ವ್ಯಕ್ತಿಯಿಂದ ಪ್ರಾಮಾಣಿಕವಾಗಿ ಕಾಮಗಾರಿಯ ಗುಣಮಟ್ಟ ಪರಿಶೀಲನೆಯಾಗಬೇಕು ಎಂದು ಜಲಮಂಡಳಿಯು ಘಟನೆ ನಡೆದ ವಾರದಲ್ಲಿಯೇ ಚೆನ್ನೈನ ಸಿಎಸ್‌ಐಆರ್‌ (ಸ್ಟ್ರಕ್ಚರಲ್‌ ಎಂಜಿನಿಯರಿಂಗ್‌ ರಿಸರ್ಚ್‌ ಸೆಂಟರ್‌)ಗೆ ತನಿಖೆಗೆಂದು ನೀಡಿತ್ತು. ಇದಕ್ಕಾಗಿ ಜಲಮಂಡಳಿಯು ಸಿಎಸ್‌ಐಆರ್‌ಗೆ 30 ಲಕ್ಷ ರೂ. ಶುಲ್ಕವನ್ನು ಪಾವತಿಸಿದೆ. ಘಟನೆ ನಡೆದ ನಾಲ್ಕು ತಿಂಗಳಾದರೂ ಯಾವುದೇ ವರದಿಯನ್ನು ಸಿಎಸ್‌ಐಆರ್‌ ನೀಡಿಲ್ಲ. ವರದಿ ಯಾವಾಗ ಬರುತ್ತದೆ ಎಂದು ಮಾಹಿತಿ ಇಲ್ಲ. ಇಂದಿಗೂ ತನಿಖೆ ನಡೆಯುತ್ತಿದೆ ಎಂದು ಜಲಮಂಡಳಿ ತಿಳಿಸಿದೆ

 

-ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.