ಪೊಲೀಸರ ವರ್ತನೆಯಲ್ಲಿರಲಿ ಕಠಿಣತೆ, ಸೌಜನ್ಯತೆ


Team Udayavani, Jul 26, 2017, 11:52 AM IST

police-cucle-rally.jpg

ಬೆಂಗಳೂರು: ಸಮಾಜದಲ್ಲಿ ಶಾಂತಿ ಮೂಡಿಸುವ ಸಂದರ್ಭದಲ್ಲಿ ಕಠಿಣವಾಗಿ ವರ್ತಿಸುವುದರ ಜೊತೆಗೆ ಪೊಲೀಸರು ಸಾರ್ವಜನಿಕರೊಂದಿಗೆ ಮಧುರ ಬಾಂಧವ್ಯ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸಶ‌ಸ್ತ್ರ ಮೀಸಲು ಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೈಕಲ್‌ ಜಾಥಾದ ಮುಕ್ತಾಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಧಾನಸೌಧದ ಬೃಹತ್‌ ಮೆಟ್ಟಿಲುಗಳ ಮುಂಭಾಗದಲ್ಲಿ ಮಂಗಳವಾರ ಈ ಕಾರ್ಯಕ್ರಮ ನಡೆಯಿತು.

ಸಮಾಜದಲ್ಲಿ ಅನೇಕ ಉತ್ತಮ ಶಕ್ತಿಗಳ ಜೊತೆಗೆ ಕೆಲವು ದುಷ್ಟ ಶಕ್ತಿಗಳು ಇರುತ್ತವೆ. ದುಷ್ಟ ಶಕ್ತಿಗಳಿಂದ ಸಮಾಜವನ್ನು ರಕ್ಷಿಸುವ ಜವಾಬ್ದಾರಿ ಪೊಲೀಸರ ಮೇಲಿರುತ್ತದೆ. ಕಾನೂನು- ಸುವ್ಯವಸ್ಥೆ ದೃಷ್ಟಿಯಿಂದ ಸಮಾಜದಲ್ಲಿ ಶಾಂತಿ ತರಲು ಪೊಲೀಸರು ಅನೇಕ ಸಂದರ್ಭಗಳಲ್ಲಿ ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.

ಅದರ ಜೊತೆಗೆ ಸಾರ್ವಜನಿಕರೊಂದಿಗೆ ಪೊಲೀಸರು ಒಳ್ಳೆಯ ಸ್ನೇಹ ಸಂಬಂಧ ಇಟ್ಟುಕೊಳ್ಳಬೇಕಾದ್ದದ್ದು ಅವಶ್ಯಕವಾಗಿದೆ. ಪೊಲೀಸರಲ್ಲಿ ಆತ್ಮಸ್ಥೈರ್ಯ ಇರಬೇಕಾದರೆ, ಅವರು ಸಮಾಜಮುಖೀ ಆಗುವುದರ ಜೊತೆಗೆ ಕ್ರೀಯಾಶೀಲರಾಗಿರಬೇಕು ಎಂದರು.

ಪೊಲೀಸರಿಗೆ ಕರ್ತವ್ಯ ಮುಖ್ಯ. ಹಾಗಾಗಿ ಅವರು ಯಾವತ್ತೂ ಖನ್ನತೆಗೆ ಒಳಗಾಗಬಾರದು. ಅದಕ್ಕಾಗಿ ಪೊಲೀಸರಿಗಾಗಿ ಸಾಂಸ್ಕೃತಿಕ, ಕ್ರೀಡೆ ಮತ್ತು ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಪೊಲೀಸರು ಸಹಾಸ ಪ್ರವೃತ್ತಿಗಳು ಬೆಳೆಸಿಕೊಂಡರೆ ಎಂತಹದೆ ಕಠಿಣ ಪರಿಸ್ಥಿತಿಯಲ್ಲಿ ಮಾನಸಿಕ ಸ್ಥೈರ್ಯ ಸಿಗುತ್ತದೆ.

ಪೊಲೀಸರು ದೈಹಿಕವಾಗಿ ಸಮರ್ಥರಾಗಿರಬೇಕು. ಹೊಟ್ಟೆ ಬೆಳಸಿಕೊಳ್ಳಬಾರದು. ದೈಹಿಕ ಸಾಮರ್ಥಯ ಕಾಪಾಡಿಕೊಳ್ಳುವುದು ಕರ್ತವ್ಯದ ಒಂದು ಭಾಗವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು. 

ಜಾಥಾಗೆ ಅಭಿನಂದನೆ: ಬೀದರ್‌ನಿಂದ ಜು.12ರಂದು ಆರಂಭಗೊಂಡು ಜು.25ಕ್ಕೆ ಬೆಂಗಳೂರಿನಲ್ಲಿ ಕೊನೆಗೊಂಡ ಸೈಕಲ್‌ ಜಾಥಾಗೆ ಮುಖ್ಯಮಂತ್ರಿಯವರು ಅಭಿನಂದನೆ ಸಲ್ಲಿಸಿದರು. 28 ಜಿಲ್ಲೆಗಳ 1,750 ಕಿ.ಮೀ ಸಂಚರಿಸಿರುವ ಜಾಥ ಎರಡು ಸಾವಿರ ಹಳ್ಳಿಗಳನ್ನು ಸುತ್ತಿದೆ. ಈ ವೇಳೆ ಮಂದಿರ, ಮಸೀದಿ, ಚರ್ಚ್‌ ಮತ್ತು ಸರ್ಕಾರಿ ಕಚೇರಿಗಳಿಗೆ ಭೇಟಿ ಕೊಟ್ಟಿದೆ. ಹೀಗಾಗಿ ಜಾಥಾದಲ್ಲಿದ್ದವರಿಗೆ ಬದುಕಿನ ದರ್ಶನ ಆಗಿದೆ ಎಂದರು.

“ಪೊಲೀಸ್‌ ಇಲಾಖೆಯಲ್ಲಿ ಅಶಿಸ್ತು ಇರಬಾರದು. ಅದನ್ನು ಸರ್ಕಾರ ಸಹಿಸುವುದಿಲ್ಲ. ಒಂದು ವೇಳೆ ಅಶಿಸ್ತು ಕಂಡು ಬಂದರೆ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು ಹಾಕುವುದಿಲ್ಲ’.
-ಮುಖ್ಯಮಂತ್ರಿ ಸಿದ್ದರಾಮಯ್ಯ.

ಟಾಪ್ ನ್ಯೂಸ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.