ಈಡೇರದ ಉಪನಗರ ರೈಲಿನ ಆಸೆ


Team Udayavani, Feb 4, 2017, 12:15 PM IST

railway-station.jpg

ಬೆಂಗಳೂರು: ಉಪನಗರ ರೈಲು ಎದುರುನೋಡುತ್ತಿದ್ದ ನಗರದ ಜನರಿಗೆ ಕೇಂದ್ರ ಬಜೆಟ್‌ ನಿರಾಸೆ ಮೂಡಿಸಿದೆ. ಈ ಮೂಲಕ ಉಪನಗರ ರೈಲು ಯೋಜನೆಗೆ ಮತ್ತೂಂದು ವರ್ಷ ಕಾಯುವುದು ಅನಿವಾರ್ಯವಾಗಿದೆ. 

ಉಪನಗರ ಯೋಜನೆಗಾಗಿ ಕೇಂದ್ರ ಸಚಿವ ಅರುಣ್‌ ಜೇಟ್ಲಿ ಅವರು ಚೆನ್ನೈಗೆ 14 ಕೋಟಿ ಮತ್ತು ಹೈದರಾಬಾದ್‌ಗೆ 116 ಕೋಟಿ ರೂ. ನೀಡಿದ್ದಾರೆ. ಆದರೆ, ಬೆಂಗಳೂರನ್ನು ಮರೆತಿದ್ದಾರೆ. ಇಡೀ ಬಜೆಟ್‌ನಲ್ಲಿ ಬೆಂಗಳೂರು ಉಪನಗರ ರೈಲಿನ ಪ್ರಸ್ತಾಪವೇ ಆಗಲಿಲ್ಲ. ಇದರಿಂದ ಭರವಸೆಗಳು ಮತ್ತೆ ಹುಸಿಯಾಗಿವೆ. 

ಈ ಹಿಂದಿನ ರೈಲ್ವೆ ಬಜೆಟ್‌ನಲ್ಲಿ ಸಚಿವ ಸುರೇಶ್‌ ಪ್ರಭು, ಉಪನಗರ ರೈಲುಗಳ ಬಗ್ಗೆ ಪ್ರಸ್ತಾಪಿಸಿದ್ದರು. ಇದಾದ ನಂತರ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದ ಸಚಿವರು, ಉಪನಗರ ರೈಲು ಯೋಜನೆ ಭರವಸೆ ನೀಡಿದ್ದರು. ಆದರೆ, ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪ ಆಗಲೇ ಇಲ್ಲ. 

“ಲೆವೆಲ್‌ ಕ್ರಾಸಿಂಗ್‌’ನಲ್ಲೂ ನಿರಾಸೆ: ನಗರದ ವಿವಿಧೆಡೆ ಸುಮಾರು 50 ಲೆವೆಲ್‌ ಕ್ರಾಸಿಂಗ್‌ಗಳಿವೆ. ಈ ಪೈಕಿ ಕೇವಲ ಒಂದಕ್ಕೆ ಹಣಕಾಸು ಸಚಿವರು ಅನುಮೋದನೆ ನೀಡಿದ್ದಾರೆ. ಈ ನಿಟ್ಟಿನಲ್ಲೂ ನಗರದ ಜನರಿಗೆ ನಿರಾಸೆಯಾಗಿದೆ. 

ಸಚಿವ ಡಿ.ವಿ. ಸದಾನಂದಗೌಡ ಅವರು ರೈಲ್ವೆ ಸಚಿವರಾಗಿದ್ದಾಗ, ಅಂದಾಜು 10-15 ಲೆವೆಲ್‌ ಕ್ರಾಸಿಂಗ್‌ಗಳನ್ನು ತೆಗೆದುಹಾಕಲು ಅನುಮೋದನೆ ನೀಡಿದ್ದರು. ನಗರದ ಸಂಚಾರದಟ್ಟಣೆ ತಗ್ಗಿಸಲು ಈ ಲೆವೆಲ್‌ ಕ್ರಾಸಿಂಗ್‌ಗಳನ್ನು ತೆಗೆದುಹಾಕಿ, ವಾಹನಗಳ ಸಂಚಾರ ಮತ್ತು ರೈಲು ಸಂಚಾರಕ್ಕೆ ಒಟ್ಟಿಗೆ ಅವಕಾಶ ನೀಡುವುದು ಅತ್ಯಗತ್ಯವಾಗಿದೆ ಎಂದು ರೈಲ್ವೆ ತಜ್ಞ ಹಾಗೂ ಪ್ರಜಾ ಸಂಸ್ಥೆಯ ಸಂಜೀವ್‌ ದ್ಯಾಮಣ್ಣವರ ತಿಳಿಸಿದ್ದಾರೆ. 

ಟರ್ಮಿನಲ್‌ಗೆ 32 ಕೋಟಿ: ಬೈಯಪ್ಪನಹಳ್ಳಿ ಕೋಚಿಂಗ್‌ ಟರ್ಮಿನಲ್‌ಗೆ 32 ಕೋಟಿ ರೂ. ನೀಡಿದ್ದು ಸಮಾಧಾನ ತಂದಿದೆ. ಅದೇ ರೀತಿ, ಎಚ್‌ಎಎಲ್‌ ಬಳಿ ಸಿಬ್ಬಂದಿಗೆ ತರಬೇತಿ ನೀಡುವ “ರೈಲ್ವೆ ಸುರಕ್ಷತಾ ಗ್ರಾಮ’ಕ್ಕೆ 3 ಕೋಟಿ ನೀಡಲಾಗಿದೆ. ಬೆಂಗಳೂರು-ಹೊಸೂರು, ಚಿಕ್ಕಮಗ ಳೂರು-ಹುಬ್ಬಳ್ಳಿ ವಿದ್ಯುದ್ದೀಕರಣಕ್ಕೆ ಅನುಮೋದನೆ ದೊರಕಿದೆ. ಯಲಹಂಕ-ಗುಂದಕಲ್‌ ಡಬ್ಲಿಂಗ್‌ಗೆ 120 ಕೋಟಿ ರೂ. ನೀಡಿರುವುದು ಸ್ವಾಗತಾರ್ಹ ಎಂದು ತಜ್ಞರು ಹೇಳುತ್ತಾರೆ. 

ಆದರೆ, ರೈಲ್ವೆ ಮೂಲಸೌಕರ್ಯ ಕಲ್ಪಿಸಲು ಇಡೀ ರಾಜ್ಯಕ್ಕೆ ಕೇವಲ 40 ಕೋಟಿ ರೂ. ನೀಡಲಾಗಿದೆ. ತಮಿಳುನಾಡು ಮತ್ತು ಅವಿಭಜಿತ ಆಂಧ್ರಪ್ರದೇಶಕ್ಕೆ ಕ್ರಮವಾಗಿ 80 ಮತ್ತು 70 ಕೋಟಿ ರೂ. ಕೊಡಲಾಗಿದೆ. 

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.