ಪಾಲಿಕೆ ಬಜೆಟ್‌ಗೆ ಸಚಿವರು, ಶಾಸಕರ ಸಲಹೆ

ತೆರಿಗೆ ವ್ಯಾಪ್ತಿಗೆ 5 ಲಕ್ಷ ಆಸ್ತಿ ಸೇರಿಸಿ ಆದಾಯ ಕ್ರೋಢೀಕರಿಸಿ

Team Udayavani, Mar 18, 2022, 3:34 PM IST

2

ಬೆಂಗಳೂರು: ಈ ಸಾಲಿನ ಬಜೆಟ್‌ಗೆ ಪಾಲಿಕೆ ಸಜ್ಜಾಗುತ್ತಿದೆ. ಆ ಹಿನ್ನೆಲೆಯಲ್ಲಿ ಪಾಲಿಕೆ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌, ಪಾಲಿಕೆ ಮುಖ್ಯ ಆಯುಕ್ತ ಗೌರವ್‌ ಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಗುರುವಾರ ಬೆಂಗಳೂರು ವ್ಯಾಪ್ತಿಯ ಶಾಸಕರ, ಪರಿಷತ್‌ ಸದಸ್ಯರ ಮತ್ತು ಸಚಿವರ ಜತೆ ಸಭೆ ನಡೆಸಿದರು.

ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವ ಕೆ.ಗೋಪಾಲಯ್ಯ, ಮುನಿರತ್ನ, ಸಂಸದ ಪಿ.ಸಿ. ಮೋಹನ್‌, ಶಾಸಕ ಸುರೇಶ್‌ ಕುಮಾರ್‌, ರಘು, ಎನ್‌.ಎ.ಹ್ಯಾರೀಸ್‌, ಆರ್‌.ಮಂಜುನಾಥ್‌, ಕೆ.ಜೆ.ಜಾರ್ಜ್‌, ಸತೀಶ್‌ ರೆಡ್ಡಿ, ಭೈರತಿ ಸುರೇಶ್‌, ರವಿ ಸುಬ್ರಮಣ್ಯ, ಸೌಮ್ಯಾ ರೆಡ್ಡಿ, ರಿಜ್ವಾನ್‌ ಅರ್ಷದ್‌, ವಿಧಾನ ಪರಿಷತ್‌ ಸದಸ್ಯ ಪಿ.ಆರ್‌. ರಮೇಶ್‌, ಯು.ಬಿ.ವೆಂಕಟೇಶ್‌, ಅ.ದೇವೇಗೌಡ ಮತ್ತತಿರರು ಭಾಗವಹಿಸಿದ್ದರು.

ವಾರ್ಡ್‌ಗಳಲ್ಲಿ ಉಂಟಾಗುವ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರತಿ ವಾರ್ಡ್‌ಗೂ 2 ರಿಂದ 3 ಕೋಟಿ ರೂ. ವಾರ್ಷಿಕ ನಿರ್ವಹಣೆಗೆ ಅನುದಾನ ಮೀಸಲಿಡಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ಶಾಸಕರ ವ್ಯಕ್ತಪಡಿಸಿ ದರು. ಬಿ ಯಿಂದ ಎ ಖಾತಾ ವರ್ಗೀಕರಣ ಮಾಡಿ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಿಸುವುದು. ತೆರಿಗೆ ವ್ಯಾಪ್ತಿಗೆ ಒಳಪಡದ ಸುಮಾರು 5 ಲಕ್ಷ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಆದಾಯ ಮೂಲವನ್ನು ಹೆಚ್ಚಿಸಿಕೊಳ್ಳುವುದು. ಅನಧಿಕೃತ ಕಟ್ಟಡಗಳನ್ನು ಗುರುತಿಸುವ ಪ್ರಕ್ರಿಯೆಗೆ ಚುರುಕು ನೀಡಿ ಆಸ್ತಿ ತೆರಿಗೆ ವ್ಯಾಪ್ತಿಗೆ ತರುವುದು ಮತ್ತತಿರರ ಸಲಹೆಗಳನ್ನು ನೀಡಿದರು.

ರಾಜಕಾಲುವೆಗಳ ನಿರ್ವಹಣೆ ಒಂಟಿ ಮನೆಗಳಿಗೆ ಅನುದಾನ ಮೀಸಲಿಡುವುದು. ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ಎಲ್‌ಇಡಿ ಬೀದಿ ದೀಪಗಳನ್ನು ಅಳವಡಿಸುವುದು. ಕೆರೆಗಳನ್ನು ಅಭಿವೃದ್ಧಿಗೊಳಿಸಿ ಸರಿಯಾಗಿ ನಿರ್ವಹಣೆ ಮಾಡುವುದು ಹಾಗೂ ಕಲ್ಯಾಣ ಕಾರ್ಯಕ್ರಮದಡಿ ಬಡ ವರ್ಗದ ಜನರಿಗೆ ಲ್ಯಾಪ್‌ಟಾಪ್‌ ವಿತರಿಸುವುದು ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಿದರು.

ಸುಸ್ಥಿರ ಆರ್ಥಿಕ ಪರಿಸ್ಥಿತಿಗೆ ಕ್ರಮ: ಪಾಲಿಕೆ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌, ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಗಮನಿಸುವುದು ಹಾಗೂ ಸುಸ್ಥಿರ ಆರ್ಥಿಕ ಪರಿಸ್ಥಿತಿಯೊಂದಿಗೆ ಮುನ್ನಡೆಸಲು ಕ್ರಮವಹಿಸಬೇಕಿದೆ. ನಗರದ ಅಭಿವೃದ್ಧಿಯ ಬಗ್ಗೆ ಹೆಚ್ಚು ಗಮನಹರಿಸಬೇಕಿದ್ದು, ನಾಗರಿಕರಿಗೆ ಅವಶ್ಯಕ ಮೂಲ ಭೂತ ಸೌಕರ್ಯಗಳನ್ನು ಒದಗಿಸುವುದು ಪಾಲಿಕೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪಾಲಿಕೆಗೆ ಬರುವ ಆದಾಯವನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡಿಸಲು ಸಚಿವರ ಮತ್ತು ಶಾಸಕರ ಸಲಹೆ ಪಡೆಯಲಾಯಿತು ಎಂದರು.

ಆದಾಯ ಮೂಲ ಹೆಚ್ಚಿಸಲು ಆಸ್ತಿ ತೆರಿಗೆ: ಪಾಲಿಕೆ ವ್ಯಾಪ್ತಿಯಲ್ಲಿ ಆದಾಯದ ಮೂಲವನ್ನು ಹೆಚ್ಚಿಸುವ ಸಲುವಾಗಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರದಲ್ಲಿ ಹೆಚ್ಚು ಆದ್ಯತೆ ನೀಡಲಾಗಿದೆ. ನಗರದಲ್ಲಿನ ಬೀದಿ ದೀಪ ದೀಪಗಳನ್ನು ಎಲ್‌ಇಡಿ ದೀಪಗಳಾಗಿ ಬದಲಾಯಿಸುವ ಕೆಲಸಕ್ಕೆ ವೇಗ ನೀಡಲಾಗುತ್ತಿದ್ದು, ಎಲ್ಲೆಲ್ಲಿ ಬೀದಿ ದೀಪ ಅಳವಡಿಸಿಲ್ಲ ಅಂತಹ ಜಾಗದಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗುವುದು ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್‌ ಗುಪ್ತ ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.