ವಿದ್ಯಾರ್ಥಿಗಳಿಗೆ “ಆತ್ಮಹತ್ಯೆ ತಡೆ’ ತರಬೇತಿ


Team Udayavani, Oct 17, 2019, 3:07 AM IST

vidyarthi

ಬೆಂಗಳೂರು: ಕಾಲೇಜುಗಳ ಚುರುಕಾಗಿರುವ ವಿದ್ಯಾರ್ಥಿಗಳಿಗೆ “ಆತ್ಮಹತ್ಯೆ ತಡೆ’ ಕುರಿತು ತರಬೇತಿ ನೀಡುವ ಮೂಲಕ ಹದಿಹರೆಯದ ವಯಸ್ಸಿನವರಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಮಾಣವನ್ನು ತಗ್ಗಿಸಲು ನಿಮ್ಹಾನ್ಸ್‌ನ ಮಾನಸಿಕ ಶಿಕ್ಷಣ ವಿಭಾಗವು ಮುಂದಾಗಿದೆ.

ಪ್ರತಿ ಕಾಲೇಜುನಲ್ಲಿ 18ರಿಂದ 20 ವಿದ್ಯಾರ್ಥಿಗಳಿಗೆ “ಪೀರ್‌ ಲೀಡರ್ “ಎಂದು ಆಯ್ಕೆ ಮಾಡಿ ಮೂರು ದಿನಗಳ ಕಾಲ ತಡಬೇತಿ ನೀಡಿ ಅವರುಗಳ ಮೂಲಕ ಕಾಲೇಜು ವ್ಯಾಪ್ತಿಯಲ್ಲಿ ಹಾಗೂ ಸ್ನೇಹಿತ ಬಳಗದ ಯುವಕ ಯುವತಿಯರಲ್ಲಿ ಕಂಡು ಬರುವ ಆತ್ಮಹತ್ಯೆ ಆಲೋಚನೆ/ಆತ್ಮಹತ್ಯೆ ಮನಸ್ಥಿತಿಯನ್ನೇ ಮಟ್ಟಹಾಕಲು ಚಿಂತನೆ ನಡೆಸಿದೆ.

ಈ ಕಾರ್ಯಕ್ರಮದ ಸಾಧಕ-ಬಾಧಕ ತಿಳಿಯುವ ನಿಟ್ಟಿನಲ್ಲಿ ನಿಮ್ಹಾನ್ಸ್‌ ಪ್ರಾಯೋಗಿಕವಾಗಿ ನಗರದ ಎರಡು ಕಾಲೇಜುಗಳ ವಿದ್ಯಾರ್ಥಿಗಳಿಗೆ ಮುಂದಿನ ವಾರ “ಆತ್ಮಹತ್ಯೆ ತಡೆ’ ತರಬೇತಿ ನೀಡುತ್ತಿದೆ. ಇಲ್ಲಿ ಬರುವ ಅಭಿಪ್ರಾಯಗಳು, ತರಬೇತಿ ಪಡೆದ ಕಾಲೇಜು ವಿದ್ಯಾರ್ಥಿಗಳ ಚಟುವಟಿಕೆ ಹಾಗೂ ಪಾಲ್ಗೊಳ್ಳುವಿಕೆ ಆಧರಿಸಿ ಮುಂದಿನ ವರ್ಷದಿಂದ ಆರೋಗ್ಯ ಇಲಾಖೆ ಸಹಕಾರದೊಂದಿಗೆ ನಗರದ ಎಲ್ಲಾ ಕಾಲೇಜುಗಳಲ್ಲಿಯೂ ಈ ಕಾರ್ಯಕ್ರಮ ಜಾರಿಗೊಳಿಸಲಿದೆ.

ನಗರ ಮುಂಚೂಣಿಯಲ್ಲಿ: ಬೆಂಗಳೂರು ನಗರ ಆತ್ಮಹತ್ಯೆಯಲ್ಲಿ ಮುಂಚೂಣಿಯಲ್ಲಿದ್ದು, ನಗರ ವ್ಯಾಪ್ತಿಯಲ್ಲಿ 2017 ರಿಂದ 2019 ಆಗಸ್ಟ್‌ವರೆಗೂ ಒಟ್ಟು 5,232 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ 16ರಿಂದ 21 ವರ್ಷದೊಳಗಿನವರಲ್ಲಿಯೇ ಆತ್ಮಹತ್ಯೆ ಪ್ರಮಾಣ ಹೆಚ್ಚಳವಾಗಿದೆ. ಪ್ರಮುಖವಾಗಿ ಹದಿಹರೆಯದ ವಯಸ್ಸಿನವರು ಹೆಚ್ಚಾಗಿ ಸ್ನೇಹಿತರೊಟ್ಟಿಗೆ ಬೆರೆಯುತ್ತಾರೆ.

ತಮ್ಮ ಭಾವನೆಗಳನ್ನು ಪೋಷಕರು, ಶಿಕ್ಷಕರುಗಳಿಗಿಂತಲೂ ಸ್ನೇಹಿತರ ಬಳಿಯಲ್ಲಿಯೇ ಹಂಚಿಕೊಳ್ಳುತ್ತಾರೆ. ಹೀಗಾಗಿಯೇ, ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮೂಲಕ ಚುರುಕಾಗಿ ಹಾಗೂ ಪರಿಣಾಮಕಾರಿ ಆತ್ಮಹತ್ಯೆ ತಡೆಗಟ್ಟಲು ನಿಮ್ಹಾನ್ಸ್‌ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿದ ನಿಮ್ಹಾನ್ಸ್‌ ಮಾನಸಿಕ ಶಿಕ್ಷಣ ವಿಭಾಗದ ಪ್ರಾಧ್ಯಾಪಕಿ ಡಾ.ಮೀನಾ ಅವರು, “ಎಲ್ಲಾ ಕಡೆಗಳಲ್ಲೂ ಮಾನಸಿಕ ಆರೋಗ್ಯ ಸಂಬಂಧಿಸಿದ ತಜ್ಞರು, ವೈದ್ಯರು, ಆಪ್ತ ಸಮಾಲೋಚಕರು ಇರುವುದಕ್ಕೆ ಸಾಧ್ಯವಿಲ್ಲ.

ಹದಿಹರೆಯದವರು ಹೆಚ್ಚಾಗಿ ಕಾಲೇಜು ಅಥವಾ ಮನೆಯ ಸಮೀಪದ ಸೇಹಿತರ ಜತೆ ಬೆರೆಯುತ್ತಾರೆ. ತಮ್ಮ ನೋವು ನಲಿವುಗಳನ್ನು ಅವರೊಟ್ಟಿಗೆ ಹಂಚಿಕೊಳ್ಳುತ್ತಾರೆ. ಸ್ನೇಹಿತನೊಬ್ಬ ಸಾವಿನ ಬಗ್ಗೆ ಮಾತನಾಡುತ್ತಿದ್ದಾನೆ, ಜಿಗುಪ್ಸೆ ಬಂದಿದೆ ಎನ್ನುತ್ತಿದ್ದಾನೆ, ಅವನಲ್ಲಿ ಆತ್ಮಹತ್ಯೆ ಆಲೋಚನೆ ಬಂದಿವೆ ಎಂದಾಗ ಆ ಸಂದರ್ಭವನ್ನು ಸೂಕ್ತವಾಗಿ ನಿರ್ವಹಿಸುವ ಶಕ್ತಿ ಇರಬೇಕಾಗುತ್ತದೆ. ಇದಕ್ಕಾಗಿಯೇ ಕಾಲೇಜಿನಲ್ಲಿ ಚಟುವಟಿಕೆಯಿಂದಿರುವ, ಚುರುಕಿನ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ತರಬೇತಿಯಲ್ಲಿ ಏನಿರುತ್ತೆ?: ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮೂರು ದಿನಗಳ ತರಬೇತಿಯನ್ನು ನಿಮ್ಹಾನ್ಸ್‌ ವೈದ್ಯರು, ಪ್ರಾಧ್ಯಾಪಕರು ನೀಡುತ್ತಾರೆ. ಮೊದಲು ಆತ್ಮಹತ್ಯೆ ಎಂದರೇನು, ಅದರ ಪರಿಣಾಮಗಳೇನು, ಸಮಾಜಕ್ಕಾಗುತ್ತಿರುವ ನಷ್ಟವೆಷ್ಟು ಎಂಬ ಅಂಶವನ್ನು ತಿಳಿಸಲಾಗುತ್ತಿದೆ. ಬಳಿಕ ಆತ್ಮಹತ್ಯೆಗೆ ಕಾರಣಗಳೇನಿರಬಹುದು, ಲಕ್ಷಣಗಳೇನು, ಸ್ನೇಹಿತರಲ್ಲಿ ಆ ಲಕ್ಷಣಗಳು ಕಂಡು ಬಂದರೆ ಆ ಸಂದರ್ಭವನ್ನು ಹೇಗೆ ನಿರ್ವಹಣೆ ಮಾಡಬೇಕು.

ಆತ್ಮಹತ್ಯೆ ಪ್ರವೃತ್ತಿ ಕಂಡುಬರುವವರ ಬಳಿ ಸಮಾಧಾನದ ಮಾತುಗಳನ್ನಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡಲಾಗುತ್ತದೆ. ಜತೆಗೆ ಕಾಲೇಜಿನಲ್ಲಿ ಆತ್ಮಹತ್ಯೆ ತಡೆ ಕುರಿತು ಜಾಗೃತಿ ಮೂಡಿಸಲು ನಾಟಕ, ಕರಪತ್ರ, ಭಿತ್ತಿಪತ್ರ ಸಿದ್ಧಪಡೆಸುವ ಕುರಿತು ಹೇಳಿಕೊಡಲಾಗುತ್ತದೆ ಎಂದು ನಿಮ್ಹಾನ್ಸ್‌ ಪ್ರಾಧ್ಯಾಪಕರು ಮಾಹಿತಿ ನೀಡಿದ್ದಾರೆ.

ಹದಿಹರೆಯದರಲ್ಲಿ ಆತ್ಮಹತ್ಯೆ ತಡೆಯಲು ಕಾಲೇಜು ವಿದ್ಯಾರ್ಥಿಗಳಿಗೆ ಆತ್ಮಹತ್ಯೆ ತಡೆ ಕುರಿತ ತರಬೇತಿ ನೀಡಲು ನಿಮ್ಹಾನ್ಸ್‌ ಮುಂದಾಗಿದೆ. ಭಾರತದಲ್ಲಿಯೆ ಮೊದಲ ಬಾರಿಗೆ ಇಂತಹ ಪ್ರಾಯೋಗಿಕ ಯೋಜನೆಯೊಂದನ್ನು ನಿಮ್ಹಾನ್ಸ್‌ ಕೈಗೊಂಡಿದೆ. ಈ ಕುರಿತು ಕಾಲೇಜುಗಳಿಂದ ಹಾಗೂ ತಜ್ಞರುಗಳಿಂದ ಉತ್ತಮ ಅಭಿಪ್ರಾಯ ಕೇಳಿಬಂದಿದೆ.
-ಡಾ.ಕೆ.ಎಸ್‌.ಮೀನಾ, ಸಹಾಯಕ ಪ್ರಾಧ್ಯಾಪಕಿ, ಮಾನಸಿಕ ಆರೋಗ್ಯ ಶಿಕ್ಷಣ ವಿಭಾಗ, ನಿಮ್ಹಾನ್ಸ್‌

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.