15,000 ಹೆರಿಗೆ ಮಾಡಿಸಿದ್ದಸೂಲಗಿತ್ತಿ ನರಸಮ್ಮ ಇನ್ನಿಲ್ಲ


Team Udayavani, Dec 26, 2018, 6:48 AM IST

10.jpg

ಬೆಂಗಳೂರು/ತುಮಕೂರು: ದೀರ್ಘ‌ಕಾಲದ ಶ್ವಾಸಕೋಶ ಸಮಸ್ಯೆ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ (97) ಅವರು  ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸೂಲಗತ್ತಿ ನರಸಮ್ಮ ಅವರನ್ನು ನ.29ರಂದು ಕೆಂಗೇರಿಯ ಬಿಜಿಎಸ್‌ ಗ್ಲೋಬಲ್‌ ಜನರಲ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮಧ್ಯಾಹ್ನ 3.10ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಬಿಜಿಎಸ್‌ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿ ಯೂರಪ್ಪ ಅವರು ಮಂಗಳವಾರ ಬೆಳಗ್ಗೆ ಆಸ್ಪತೆಗೆ ಭೇಟಿ ನೀಡಿ, ನರಸಮ್ಮ ಅವರ ಆರೋಗ್ಯ ವಿಚಾರಿಸಿದ್ದರು. ಮ. 3.10ರ ಸುಮಾರಿಗೆ ಕೊನೆಯುಸಿ ರೆಳೆದ ಸುದ್ದಿ ತಿಳಿದ ತಕ್ಷಣ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಆಸ್ಪತ್ರೆಗೆ ತೆರಳಿ ನರಸಮ್ಮ ಅವರ ಅಂತಿಮ ದರ್ಶನ ಪಡೆದರು. ಪಾವಗಡ ತಾಲೂಕಿನ ಕೃಷ್ಣಾಪುರ ಎಂಬಲ್ಲಿ 1920ರಲ್ಲಿ ಜನಿಸಿದ ನರಸಮ್ಮ ಅವರು, ಗ್ರಾಮೀಣ ಭಾಗದಲ್ಲಿ ಹೆರಿಗೆ ಮಾಡಿಸುವುದರಲ್ಲಿ ಪ್ರಸಿದ್ಧಿ ಪಡೆದಿದ್ದರು. ತಮ್ಮ 20ನೇ ವಯಸ್ಸಿನಲ್ಲೇ ಯಾವುದೇ ತೊಂದರೆಯಾಗದಂತೆ ವೈದ್ಯಲೋಕಕ್ಕೆ ಅಚ್ಚರಿ ಮೂಡಿಸುವಂತೆ ಹೆರಿಗೆ ಮಾಡಿಸುತ್ತಿದ್ದರು.  ಇದುವರೆಗೆ 15 ಸಾವಿರಕ್ಕೂ ಅಧಿಕ ಹೆರಿಗೆ ಮಾಡಿಸಿರುವ ಕೀರ್ತಿ ಇವರ ಪಾಲಿಗೆ ಸಂದಿದೆ.

ನರಸಮ್ಮ ಅವರ ಸಾಧನೆ ಗುರುತಿಸಿ, ಕೇಂದ್ರ ಸರ್ಕಾರ ಈ ವರ್ಷ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. 2014ರಲ್ಲಿ ತುಮಕೂರು
ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೂ ಪಾತ್ರರಾಗಿದ್ದರು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ದೇವರಾಜ್‌ ಅರಸು ಪ್ರಶಸ್ತಿ, ನ್ಯಾಷನಲ್‌ ಸಿಟಿಜನ್‌ ಆಫ್ ಇಂಡಿಯಾ ಪ್ರಶಸ್ತಿ ಸೇರಿದಂತೆ ಅನೇಕ ಗೌರವಕ್ಕೆ ಪಾತ್ರರಾಗಿದ್ದರು.

12ನೇ ವಯಸ್ಸಿಗೆ ಮದುವೆಯಾಗಿ, 12 ಮಕ್ಕಳ ತಾಯಿಯಾಗಿ, ತಮ್ಮ ಅಜ್ಜಿ ಗಂಗಮ್ಮ ಮಾಡುತ್ತಿದ್ದ ಸೂಲಗಿತ್ತಿ ಕೆಲಸವನ್ನು ನೋಡಿ ಕಲಿತು, ಇಪ್ಪತ್ತೆರಡನೇ ವಯಸ್ಸಿನಿಂದಲೇ ಹೆರಿಗೆ ಮಾಡಿಸುವ ಕಾರ್ಯವನ್ನು ಪ್ರಾರಂಭಿಸಿದ ನರಸಮ್ಮ, ತುಮಕೂರು ಭಾಗದ ಗರ್ಭಿಣಿಯರ ದೇವತೆಯೇ ಆಗಿದ್ದರು. ಯಾವುದೇ ನರ್ಸ್‌ ಗಳಿಲ್ಲದ ವೇಳೆಯಲ್ಲಿ ವೈದ್ಯಕೀಯ ಸೌಲಭ್ಯವಿಲ್ಲದ ಕಾಲದಲ್ಲಿ ಬರೋಬ್ಬರಿ 15,000ಕ್ಕೂ ಹೆಚ್ಚು ಜೀವಗಳನ್ನು ಭೂಮಿಗೆ ತಂದ ಭಾಗ್ಯವಂತೆ ಈಕೆ. 

ಗಣ್ಯರ ಕಂಬನಿ
ಬೆಂಗಳೂರು: ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ
ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ನರಸಮ್ಮ ಅವರು ಆ ಭಾಗದ ಸಾವಿರಾರು ಗ್ರಾಮೀಣ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದವರು. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಹಾಗೂಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಂದೇಶದಲ್ಲಿ ಹೇಳಿದ್ದಾರೆ.

ಸೂಕ್ತ ಆಸ್ಪತ್ರೆ ಹಾಗೂ ವೈದ್ಯರಿಗೆ ಕೊರತೆಯಿದ್ದ ಸಮಯದಲ್ಲಿ ಉಚಿತವಾಗಿಯೇ ಹದಿನೈದು ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿರುವ ಮಹಾತಾಯಿ ಸೂಲಗಿತ್ತಿ ನರಸಮ್ಮನವರು ಅನಾರೋಗ್ಯದಿಂದ ವಿಧಿವಶರಾಗಿರುವ ಸುದ್ದಿ ತಿಳಿದು ತೀವ್ರ
ದು:ಖವಾಗಿದೆ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಎಚ್‌.ಡಿ.ದೇವೇಗೌಡರು ಟ್ವೀಟ್‌ನಲ್ಲಿ ಸಂತಾಪ ಸಲ್ಲಿಸಿದ್ದಾರೆ.
ಬಿ.ಎಸ್‌.ಯಡಿಯೂರಪ್ಪ ಅವರು ಸಂತಾಪ ಸಂದೇಶ ನೀಡಿದ್ದು, ಸೂಲಗಿತ್ತಿ ನರಸಮ್ಮ ಅವರು ನಿಧನರಾದ ವಿಷಯ ತಿಳಿದು ದು:ಖವಾಯಿತು. ಗ್ರಾಮೀಣ ಪ್ರದೇಶದಲ್ಲಿ ಜನಿಸಿ ಆ ಭಾಗದ ಮಹಿಳೆಯರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.