![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 8, 2020, 9:16 AM IST
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಆ. 10ರಂದು ಹಮ್ಮಿಕೊಂಡಿರುವ ಭಾರತ ರಕ್ಷಿಸಿ ಆಂದೋಲನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಲಾಕ್ಡೌನ್ ಹೇರಿಕೆಯಿಂದ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ಯೋಗ ನಷ್ಟವಾಗಿದೆ. ಸರ್ಕಾರ ಇತ್ತೀಚೆಗೆ ತಂದಿರುವ ಕೈಗಾರಿಕೆ ಕಾಯ್ದೆ ತಿದ್ದುಪಡಿಯಿಂದ ಮಾಲೀಕರು ಬೀದಿಗೆ ಬಂದಿದ್ದಾರೆ. ಸಂಘಟಿತ ಕಾರ್ಮಿಕರು ಸೌಲಭ್ಯ ವಂಚಿತ ರಾಗಿದ್ದಾರೆ ಎಂದು ಆರೋಪಿಸಿದರು.
ಉದ್ಯೋಗ ಖಾತ್ರಿ ಯೋಜನೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಸಂಸತ್ ಹಾಗೂ ರಾಜ್ಯ ವಿಧಾನ ಮಂಡಲ ಅಧಿವೇಶನ ಕರೆಯಬೇಕು. ಜತೆಗೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ಕ್ರಮಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಆ. 10 ರಂದು ಹಮ್ಮಿಕೊಂಡಿರುವ ರಾಜ್ಯಾದ್ಯಂತ ಭಾರತ ರಕ್ಷಿಸಿ ಆಂದೋಲನವನ್ನು ಬೆಂಬಲಿಸುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.
10ರಂದು ಪಕ್ಷ ಸಂಘಟನೆ ಸಭೆ : ಪಕ್ಷ ಸಂಘಟನೆ ಹಾಗೂ ಕೋವಿಡ್ ನಿಯಂತ್ರಿಸಲು ಆರಂಭಿಸಿರುವ ಆರೋಗ್ಯ ಹಸ್ತ ಕಾರ್ಯಕ್ರಮದ ಕುರಿತು ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆ. 10ರಂದು ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಸಭೆ ಕರೆದಿದ್ದಾರೆ. ಸಭೆಗೆ ಎಲ್ಲ ಘಟಕಗಳ ಅಧ್ಯಕ್ಷರು ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.