ಸಮಿತಿ ಶಿಫಾರಸಿನಂತೆ ಕ್ರಮ ಕೈಗೊಳ್ಳಿ


Team Udayavani, Nov 23, 2017, 10:41 AM IST

speaker.jpg

ಸುವರ್ಣಸೌಧ, ಬೆಳಗಾವಿ: ರಾಜಧಾನಿ ಬೆಂಗಳೂರು ಸುತ್ತಮುತ್ತ ಕೆರೆ ಹಾಗೂ ರಾಜಕಾಲುವೆ ಒತ್ತುವರಿ ಬಗ್ಗೆ ಸದನ ಸಮಿತಿಯು ಸಮಗ್ರ ವರದಿ ನೀಡಿದ್ದು, ಸಮಿತಿಯ ಶಿಫಾರಸು ಪ್ರಕಾರ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಬೇಕು ಎಂದು ಸದನ ಸಮಿತಿ ಅಧ್ಯಕ್ಷರೂ ಆಗಿರುವ ಸ್ಪೀಕರ್‌ ಕೆ.ಬಿ.ಕೋಳಿವಾಡ ಹೇಳಿದ್ದಾರೆ.

ಸುವರ್ಣಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ. ಮುಂದಿನದು ಸರ್ಕಾರಕ್ಕೆ ಬಿಟ್ಟದ್ದು. ಆದರೆ, ಕಾಲಮಿತಿಯಲ್ಲಿ ಈ ಬಗ್ಗೆ ಕ್ರಮ ಕೈಗೊಂಡಾಗ ಮಾತ್ರ ಜಲಮೂಲಗಳ ಸಂರಕ್ಷಣೆ ಸಾಧ್ಯ ಎಂದು ಹೇಳಿದರು.

ಸದನ ಸಮಿತಿಯು ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿ ಮಹತ್ವದ ವರದಿ ನೀಡಿದೆ. ಸಮಿತಿಯ ಶಿಫಾರಸು ಪ್ರಕಾರ ಕ್ರಮ ಕೈಗೊಂಡಾದ ಮಾತ್ರ ನಮ್ಮ ಶ್ರಮ ಸಾರ್ಥಕವಾಗುತ್ತದೆ. ಸರ್ಕಾರಿ ಸಂಸ್ಥೆಗಳು ಬೆಂಗಳೂರು ನಗರ ಜಿಲ್ಲೆಯಲ್ಲಿ 2194.11 ಎಕರೆ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ 1062.36 ಎಕರೆ ಒತ್ತುವರಿ ಮಾಡಿವೆ. ಅದೇ ರೀತಿ ಖಾಸಗಿ ವ್ಯಕ್ತಿಗಳು ನಗರ ಜಿಲ್ಲೆಯಲ್ಲಿ 2340.36 ಎಕರೆ, ಗ್ರಾಮೀಣ ಭಾಗದಲ್ಲಿ 5189.24 ಎಕರೆ ಜಮೀನು ಒತ್ತುವರಿ ಮಾಡಿದ್ದಾರೆ. 66289.38 ಎಕರೆಯಷ್ಟು ಕೆರೆ ಜಾಗ, 158 ಕೆರೆಗಳು ಸಂಪೂರ್ಣವಾಗಿ ಒತ್ತುವರಿಯಿಂದ ಮುಕ್ತವಾಗಿವೆ ಎಂದು ವಿವರಿಸಿದರು.

ಬಿಡಿಎ 23 ಕೆರೆಗಳನ್ನು ಸಂಪೂರ್ಣವಾಗಿ ಒತ್ತುವರಿ ಮಾಡಿ ಬಡಾವಣೆ ನಿರ್ಮಿಸಿದೆ. ನಿವೇಶನಗಳನ್ನೂ ಹಂಚಿಕೆ ಮಾಡಿ ಅಲ್ಲಿ ಮನೆ ಕಟ್ಟಲಾಗಿದೆ. ಈಗ ಅವರನ್ನು ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಹೀಗಾಗಿ, ಸೂಕ್ತ ಕಾನೂನು ತಿದ್ದುಪಡಿ ಮಾಡಲು ಶಿಫಾರಸು ಮಾಡಲಾಗಿದೆ. ಖಾಸಗಿ ವ್ಯಕ್ತಿಗಳು ಮಾಡಿರುವ ಒತ್ತುವರಿ ವಿಚಾರದಲ್ಲಿ ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಮಾನವೀಯತೆ ನೆಲೆಯಿಂದ ನಿರ್ಜೀವ ಕೆರೆ ಜಾಗದಲ್ಲಿ ಇರುವವರಿಗೆ ದಂಡ ವಿಧಿಸಿ ಸಕ್ರಮಗೊಳಿಸಲು ಸಾಧ್ಯವಿದ್ದರೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ ಎಂದರು.

ನಗರದಲ್ಲಿ ಹಲವು ಖಾಸಗಿ ಸಂಸ್ಥೆಗಳು ಕೆರೆ, ಕಾಲುವೆ ಒತ್ತುವರಿ ಮಾಡಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಿಕೊಂಡಿವೆ. ಸರ್ಕಾರದ ವಶಕ್ಕೆ ಪಡೆಯಲು ಸ್ಪಷ್ಟವಾಗಿ ತಿಳಿಸಲಾಗಿದೆ. ದೇವಾಲಯಗಳಿದ್ದರೆ ಅದನ್ನು ಮುಜರಾಯಿ ಇಲಾಖೆಗೆ ವಹಿಸಲು ತಿಳಿಸಲಾಗಿದೆ. ಒಂದೊಮ್ಮೆ ಕೆರೆ ಪುನಶ್ಚೇತನ ಗೊಳಿಸಬಹುದು ಎಂದು ಗುರುತಿಸಲಾದ ಜಾಗದಲ್ಲಿ ದೇವಾಲಯ ಇದ್ದರೆ ಬೇರೆಡೆ ಸ್ಥಳಾಂತರಕ್ಕೂ ಸೂಚಿಸಲಾಗಿದೆ ಎಂದು ಹೇಳಿದರು. 

ಸರ್ಕಾರದ ಸಂಸ್ಥೆಗಳು ಮೂಲ ಸೌಕರ್ಯ ಒದಗಿಸಲು ಕೆಲವು ಕಡೆ ಒತ್ತುವರಿ ಮಾಡಿದ್ದರೆ, ಸ್ಮಶಾನ ಇದ್ದು, ಸಾರ್ವಜನಿಕರು ಬಳಕೆ ಮಾಡುತ್ತಿದ್ದರೆ ಅಂತಹ ಕಡೆ ಜನರ ಹಿತಾಸಕ್ತಿ ಗಮನಿಸಿ ಕ್ರಮ ಕೈಗೊಳ್ಳಲು ವರದಿಯಲ್ಲಿ ಹೇಳಲಾಗಿದೆ. ಇದು ಯಾರನ್ನೂ ಬಚಾವ್‌ ಮಾಡುವ ಉದ್ದೇಶವಲ್ಲ ಎಂದು ತಿಳಿಸಿದರು.

300 ಜನ ಭೂ ಮಾಪಕರನ್ನು ನೇಮಿಸಿ ನೋಡಲ್‌ ಅಧಿಕಾರಿ ಸಹಕಾರದೊಂದಿಗೆ ಕೆರೆ ಹಾಗೂ ರಾಜಾಕಾಲುವೆ ಬಗ್ಗೆ ಅತ್ಯುತ್ತಮ ವರದಿ ಸಿದ್ಧಪಡಿಸಲಾಗಿದೆ. ಇದು ಒಂದು ರೀತಿಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಜಲಮೂಲಗಳ ಇತಿಹಾಸ ಸಂಪುಟವೂ ಹೌದು ಎಂದು ಹೇಳಿದರು. 

ಯಾರೇ ಒತ್ತುವರಿ ಮಾಡಿದರೂ ಬಿಡುವಂತಿಲ್ಲ: ನಟ ದರ್ಶನ್‌ ಸೇರಿದಂತೆ ಯಾರೇ ರಾಜಕಾಲುವೆ ಜಾಗದಲ್ಲಿ ಮನೆ ನಿರ್ಮಿಸಿದ್ದರೂ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಿದ್ದರೂ ಅದನ್ನು ತೆರವುಗೊಳಿಸಬೇಕಾಗುತ್ತದೆ. ನಮ್ಮ ವರದಿಯಲ್ಲೂ ಅದನ್ನೇ ಹೇಳಲಾಗಿದೆ. ನಾವು ಯಾರೊಬ್ಬರ ಬಗ್ಗೆಯೂ ವೈಯಕ್ತಿವಾಗಿ ಉಲ್ಲೇಖೀಸಿಲ್ಲ. ಹಾಗೆಂದ ಮಾತ್ರಕ್ಕೆ ಯಾರಧ್ದೋ ಪ್ರಭಾವಕ್ಕೆ ಮಣಿದಿದ್ದೇವೆ ಎಂದಲ್ಲ. ಕೆರೆ ಅಂಗಳ ಒತ್ತುವರಿ ಪುನಶ್ಚೇತನಗೊಳಿಸಲು ಸಾಧ್ಯವಿದ್ದರೆ ಅಲ್ಲೂ ತೆರವುಗೊಳಿಸಿ ಎಂದು ಹೇಳಿದ್ದೇವೆ. ರಾಜಕಾಲುವೆ ವಿಚಾರದಲ್ಲಿ ಯಾವುದೇ ವಿನಾಯಿತಿ ಕೊಟ್ಟಿಲ್ಲ ಎಂದುಕೋಳಿವಾಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.