ಕ್ರಮಕೈಗೊಳ್ಳಿ, ಇಲ್ಲವೇ ಹುದ್ದೆ ಬಿಟ್ಟು ಹೋಗಿ


Team Udayavani, Nov 3, 2018, 12:17 PM IST

kramakaigolli.jpg

ಬೆಂಗಳೂರು: ನಗರದ ಬಹುಪಾಲು ತ್ಯಾಜ್ಯ ವಿಲೇವಾರಿಯಾಗುತ್ತಿರುವ ಬೆಳ್ಳಹಳ್ಳಿ ಕ್ವಾರಿ ಮುಂದಿನ ಮೂರು ತಿಂಗಳಲ್ಲಿ ಭರ್ತಿಯಾಗಲಿದ್ದು, ನಗರದಲ್ಲಿ ತ್ಯಾಜ್ಯ ಸಮಸ್ಯೆ ಕಾಡುವ ಆತಂಕ ಎದುರಾಗಲಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಉಪಮುಖ್ಯಮಂತ್ರಿಗಳು “ತ್ಯಾಜ್ಯ ವಿಲೇವಾರಿಗೆ ಪರ್ಯಾಯ ಕ್ರಮಗಳಿಗೆ ಮುಂದಾಗಿ, ಇಲ್ಲವೆ ಹುದ್ದೆಗಳನ್ನು ಬಿಟ್ಟು ಹೋಗಿ’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ ಸೂಚನೆ ಮೇರೆಗೆ ಶುಕ್ರವಾರ ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ತ್ಯಾಜ್ಯ ವಿಲೇವಾರಿ ವಿಧಾನಗಳು, ಪಾಲಿಕೆಯ ಮುಂದಿರುವ ಪರ್ಯಾಯ ಮಾರ್ಗಗಳು, ಸದ್ಯ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, “ನಿಮ್ಮ ಕೈಯಲ್ಲಿ ಆಗದಿದ್ದರೆ ಹುದ್ದೆ ಬಿಟ್ಟು ಹೋಗಿ’ ಎಂದು ಖಾರವಾಗಿಯೇ ಹೇಳಿದ್ದಾರೆ. 

ಇದರೊಂದಿಗೆ ಯೋಜನಾ ವಿಭಾಗದಲ್ಲಿನ 13 ಸಹಾಯಕ ಎಂಜಿನಿಯರ್‌ಗಳನ್ನು ಕೂಡಲೇ ಘನತ್ಯಾಜ್ಯ ನಿರ್ವಹಣೆ ವಿಭಾಗಕ್ಕೆ ವರ್ಗಾಹಿಸುವಂತೆ ಆಯುಕ್ತರಿಗೆ ಸೂಚಿಸಿದ ಅವರು, ಒಂದೊಮ್ಮೆ ಅವರು ಹೋಗದಿದ್ದರೆ ಅವರನ್ನು ಮಾತೃ ಇಲಾಖೆಗೆ ವಾಪಾಸ್‌ ಕಳುಹಿಸಿ. ಅವರ ಬದಲಿಗೆ ಬೇರೆಯವನ್ನು ಕರೆಸಿಕೊಂಡು ಕೆಲಸ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. 

ನಂತರ ಸುದ್ದಿಗೋಷ್ಠಿ ನಡೆಸಿದ ಪರಮೇಶ್ವರ್‌, ಬೆಳ್ಳಹಳ್ಳಿ ಕ್ವಾರಿ 3 ತಿಂಗಳಲ್ಲಿ ಭರ್ತಿಯಾಗಲಿದೆ. ಹೀಗಾಗಿ ತ್ಯಾಜ್ಯ ಸಮಸ್ಯೆ ಎದುರಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೈಕೋರ್ಟ್‌ ನೀಡಿರುವ ಸೂಚನೆಗಳಿಂದ ತ್ಯಾಜ್ಯ ವಿಲೇವಾರಿ ವಿಷಯದಲ್ಲಿ ದೇಶವೇ ಬೆಂಗಳೂರಿನೆಡೆಗೆ ನೋಡುವಂತಾಗಿದೆ. ಹೈಕೋರ್ಟ್‌ ನಿರ್ದೇಶನವನ್ನು ನಾನು ಸ್ವಾಗತಿಸುತ್ತೇನೆ ಎಂದರು. 

ಬಿಬಿಎಂಪಿಯಲ್ಲಿ ತ್ಯಾಜ್ಯ ನಿರ್ವಹಣೆ ಈ ಹಿಂದೆ ಹಿಡಿತಕ್ಕೆ ಸಿಕ್ಕಿರಲಿಲ್ಲ. ಆದರೀಗ ಪಾಲಿಕೆ ಹಿಡಿತಕ್ಕೆ ತೆಗೆದುಕೊಂಡಿದ್ದು, ಸಮಸ್ಯೆ ನಿವಾಸಿರುವ ಕೆಲಸ ಮಾಡಲಾಗುತ್ತಿದೆ. ನಗರದಲ್ಲಿ 1.30 ಕೋಟಿ ಜನರು ವಾಸಿಸುತ್ತಿದ್ದು, ನಿತ್ಯ 20-30 ಲಕ್ಷ ಜನರು ನಗರಕ್ಕೆ ಬಂದು ಹೋಗುತ್ತಾರೆ. ಒಂದೇ ಒಂದು ದಿನ ನಗರದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ವ್ಯತ್ಯಯವಾದರೂ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುತ್ತಿದೆ ಎಂದು ಹೇಳಿದರು. 

ಮಾರ್ಷಲ್‌ ನೇಮಕ, ದಂಡ ಹೆಚ್ಚಳ: ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದು ಬ್ಲಾಕ್‌ಸ್ಪಾಟ್‌ ಸೃಷ್ಟಿಸುತ್ತಿದ್ದು, ಅದನ್ನು ತಡೆಯುವ ಉದ್ದೇಶದಿಂದ ವಾರ್ಡ್‌ ಒಬ್ಬರಂತೆ ಮಾರ್ಷಲ್‌ ನೇಮಿಸಿಕೊಳ್ಳಲಾಗುವುದು. ಜತೆಗೆ ದಂಡದ ಮೊತ್ತವನ್ನು 100 ರೂ.ಗಳಿಂದ 500 ರೂ.ಗೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರಕ್ಕೆ ಕಳುಹಿಸಿದ್ದು, ಶೀಘ್ರದಲ್ಲಿಯೇ ಅನುಮೋದನೆ ನೀಡಲಾಗುವುದು. ಜತೆಗೆ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸಲು ಉದ್ದೇಶಿಸಿದ್ದು, ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌, ಹಿರಿಯ ಆರೋಗ್ಯ ಪರಿವೀಕ್ಷಕರು, ಪ್ರತಿವಾರ್ಡ್‌ಗೆ ಇಬ್ಬರಿಂದ ಮೂವರಂತೆ ಸ್ಯಾನಿಟಿರಿ ದಫೇದಾರ್‌ಗಳನ್ನು ನೇಮಿಸಲಾಗುವುದು ಎಂದರು. 

ಟೆರ್ರಾಫಾರ್ಮ್ಗೆ ಮತ್ತೆ ಕಸ: ದೊಡ್ಡಬಳ್ಳಾಪುರದ ಬಳಿಯ ಟೆರ್ರಾಫಾರ್ಮ್ ಘಟಕಕ್ಕೆ ಸ್ಥಳೀಯರ ವಿರೋಧದಿಂದ 2014-15ರಲ್ಲಿ ತ್ಯಾಜ್ಯ ವಿಲೇವಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಬೆಳ್ಳಹಳ್ಳಿ ಕ್ವಾರಿ ಭರ್ತಿಯಾದ ಬಳಿಕ ತ್ಯಾಜ್ಯ ಅಲ್ಲಿಗೆ ಕಳುಹಿಸಲು ಸರ್ಕಾರ ಚಿಂತನೆ ನಡೆಸಿದೆ. ಅಲ್ಲಿರುವ 150 ಎಕರೆಯಲ್ಲಿ ಆಧುನಿಕ ತಂತ್ರಜ್ಞಾನದ ಯಂತ್ರಗಳನು ಬಳಸಿ ತ್ಯಾಜ್ಯ ವಿಲೇವಾರಿಗೆ ಮಾಡಲಾಗುವುದು ಎಂದ ಪರಮೇಶ್ವರ್‌, ಬಿಡದಿ ಬಳಿ 15 ಎಕರೆ ಜಾಗದಲ್ಲಿ ಬೆಸ್ಕಾಂ ಜತೆ ತ್ಯಾಜ್ಯದಿಂದ ವಿದ್ಯುತ್‌ ಉತ್ಪಾದನಾ ಘಟಕ ನಿರ್ಮಾಣ ಶೀಘ್ರದಲ್ಲಿಯೆ ಆರಂಭವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.