Mantri Mall: ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಮುದ್ರೆ


Team Udayavani, May 11, 2024, 11:37 AM IST

Mantri Mall: ತೆರಿಗೆ ಬಾಕಿ; ಮಂತ್ರಿ ಮಾಲ್‌ಗೆ ಬೀಗ ಮುದ್ರೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ್ದಾರೆ. 50 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಪೊಲೀಸ್‌ ಬಿಗಿ ಭದ್ರತೆಯಲ್ಲಿ ಬೀಗ ಮುದ್ರೆ ಹಾಕಿದ್ದಾರೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಾರಣ ಬಂದ್‌ ಮಾಡಲಾಗಿದೆ ಎಂದು ನೋಟಿಸ್‌ ಬ್ಯಾನರ್‌ ಅಂಟಿಸಲಾಗಿದೆ.

ಹಲವು ವರ್ಷಗಳಿಂದ ಮಲ್ಲೇಶ್ವರದ ಮಂತ್ರಿ ಮಾಲ್‌ ಮಾಲೀಕರು ತೆರಿಗೆ ಪಾವತಿ ಮಾಡಿಲ್ಲ. ಹಲವು ಬಾರಿ ನೋಟಿಸ್‌ ನೀಡಿದ್ದರೂ ಹಣ ಪಾವತಿಸದ ಕಾರಣಕ್ಕೆ ಮತ್ತೆ ಬೀಗ ಮುದ್ರೆ ಹಾಕಲಾಗಿದೆ ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಾಲ್‌ನ ಮುಖ್ಯ ದ್ವಾರಕ್ಕೆ ಬೀಗ ಹಾಕುವುದರೊಂದಿಗೆ ನೋಟಿಸ್‌ ಕೂಡ ಅಂಟಿಸಲಾಗಿದ್ದು, ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್‌ 6ರ ಸುತ್ತೂಲೆಯಂತೆ ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ.

ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್‌ ಮಾಡಲಾಗಿದೆ ಎಂದು ಬ್ಯಾನರ್‌ ಅಳವಡಿಸಲಾಗಿದ್ದು, ಮಾರ್ಷಲ್‌ಗ‌ಳನ್ನು ಕಾವಲಿರಿಸಲಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಬೆಳಗ್ಗೆ ಕೆಲಸಕ್ಕೆ ಆಗಮಿಸಿದ ಮಾಲ್‌ ಸಿಬ್ಬಂದಿ ಹಲವು ಹೊತ್ತು ಮಾಲ್‌ ಎದುರು ನಿಂತಿದ್ದರು. ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಸುತ್ತುವರಿದಿರುವುದನ್ನು ಗಮನಿಸಿ ಹಲವು ಹೊತ್ತುಗಳ ಬಳಿಕ ಮನೆಯತ್ತ ಮುಖ ಮಾಡಿದರು. ಈ ಹಿಂದೆ ಮಂತ್ರಿ ಮಾಲ್‌ ಸುಮಾರು 42.63 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಆ ವೇಳೆ ಮಾಲ್‌ ಕಚೇರಿಯ ಕುರ್ಚಿ, ಟೇಬಲ್‌, ಕಂಪ್ಯೂಟರ್‌ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಲ್‌ ಮಾಲೀಕರು ಕೋರ್ಟ್‌ ಮೂಲಕ ಬೀಗ ತೆಗೆಸಿ ವ್ಯಾಪಾರ ಆರಂಭಿಸಿದ್ದರು. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಪಾಲಿಕೆ ಅಧಿಕಾರಿಗಳು ಬೀಗ ಜಡಿದು ಸೀಜ್‌ ಮಾಡಿ ಯಾರನ್ನೂ ಒಳಗೆ ಹೋಗದಂತೆ ನಿರ್ಬಂಧಿಸಲಾಗಿದೆ.

ಪ್ರತಿ ಬಾರಿ ಬೀಗ ಹಾಕಿದಾಗ ಕೋರ್ಟ್‌ಗೆ ಹೋಗುವ ಮಂತ್ರಿ ಮಾಲ್‌ ಮಾಲೀಕರು, ಪಾಲಿಕೆಯಿಂದ ಕೈಗೊಳ್ಳುವ ಕ್ರಮದ ವಿರುದ್ಧ ತಡೆಯಾಜ್ಞೆ ತಂದು ಮತ್ತೆ ಮಾಲ್‌ ತೆರೆಸಿದ್ದರು.

ಶಾಪಿಂಗ್‌ಗೆ ಬಂದು ವಾಪಸ್‌ : ಅಕ್ಷಯ ತೃತೀಯ ಜತೆಗೆ ಬಸವ ಜಯಂತಿ ಹಿನ್ನೆಲೆಯಲ್ಲಿ ಶುಕ್ರವಾರ ಸರ್ಕಾರಿ ರಜೆ ಇದೆ. ಹೀಗಾಗಿ ಹಲವು ಕುಟುಂಬಗಳು ಶಾಪಿಂಗ್‌ ಮಾಡಲು ಕಾರು ಸೇರಿದಂತೆ ಮತ್ತಿತರ ವಾಹನಗಳಲ್ಲಿ ಬಂದಿದ್ದರು. ಮಾಲ್‌ಗೆ ಬೀಗ ಮುದ್ರೆ ಹಾಕಿರುವುದನ್ನು ನೋಡಿ ನಿರಾಸೆಯಿಂದ ವಾಪಸ್‌ ತೆರಳಿದರು.

ಟಾಪ್ ನ್ಯೂಸ್

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue

Bengaluru: ಡೆಂಘೀ ತಡೆಗೆ ಮನೆ ಮನೆ ಸಮೀಕ್ಷೆ- ಮುಖ್ಯ ಆಯುಕ್ತ

Prajwal Revanna ಗೆ ಮತ್ತೆ ಜೈಲು… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Ramachandrapura-matha

Sri Raghaweshwara Swamiji: 29ಕ್ಕೆ ಭಾವರಾಮಾಯಣ ರಾಮಾವತರಣ ಕೃತಿ ಬಿಡುಗಡೆ

Pavithra

Renukaswamy case: ಪುತ್ರಿ ನೋಡಿ ಪವಿತ್ರಾ ಕಣ್ಣೀರು; ಕ್ಷಮೆಯಾಚನೆ

Renukaswamy

Renukaswamy, 17 ಆರೋಪಿಗಳ ಹೆಸರಲ್ಲಿ ಡೂಪ್ಲಿಕೇಟ್‌ ಸಿಮ್‌ ಖರೀದಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.