Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್ಟಾಪ್ ಕದ್ದ ಟೆಕ್ಕಿ!
Team Udayavani, Sep 18, 2024, 11:06 AM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಲ್ಯಾಪ್ಟಾಪ್ಗ್ಳನ್ನು ಕಳವು ಮಾಡುತ್ತಿದ್ದ ಸಿಬ್ಬಂದಿಯನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಹೊಸೂರು ತಾಲೂಕಿನ ತೋರಪಲ್ಲಿ ನಿವಾಸಿ ಮುರುಗೇಶ್ (29) ಬಂಧಿತ. ಆರೋ ಪಿಯಿಂದ 22 ಲಕ್ಷ ರೂ. ಮೌಲ್ಯದ 55 ಲ್ಯಾಪ್ಟಾಪ್ ಗಳನ್ನು ಜಪ್ತಿ ಮಾಡಲಾಗಿದೆ.
ವೈಟ್ ಫೀಲ್ಡ್ನ ಐಟಿಪಿಎಲ್ ಟೆಲಿಕಾಲರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಆಗಾಗ್ಗೆ ಒಂದೊಂದು ಲ್ಯಾಪ್ ಟಾಪ್ಗಳು ಕಳುವಾಗುತ್ತಿದ್ದವು. ಈ ಸಂಬಂಧ ಕಂಪನಿ ಮಾಲಿಕ ದೂರು ನೀಡಿದ್ದರು. ಈ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಮಿಷನರ್ ದಯಾನಂದ ತಿಳಿಸಿದ್ದಾರೆ.
ಆರೋಪಿಯು ಕದ್ದ ಲ್ಯಾಪ್ಟಾಪ್ ಗಳನ್ನು ಹೊಸೂರಿನ ಹಳೆಯ ಲ್ಯಾಪ್ ಟಾಪ್ ರಿಪೇರಿ ಮತ್ತು ಮಾರಾಟ ಮಳಿಗೆಗೆ ಮಾರಾಟ ಮಾಡುತ್ತಿದ್ದ ಎಂದರು.
ಟೊಮ್ಯಾಟೋ ಬೆಳೆದು 25 ಲಕ್ಷ ರೂ. ನಷ್ಟ : ಆರೋಪಿ ಮುರುಗೇಶ್ ಬಿಸಿಎ ಪದವೀಧರನಾಗಿದ್ದು, ಸ್ವಂತ ಊರಿನಲ್ಲಿ ಟೊಮ್ಯಾಟೋ ಬೆಳೆದು 25 ಲಕ್ಷ ರೂ. ನಷ್ಟ ಅನುಭವಿಸಿದ್ದ. ಇದಕ್ಕಾಗಿಕೈಸಾಲ ಮಾಡಿಕೊಂಡು ಬಡ್ಡಿ ಪಾವತಿಸಲಾಗದೆ ಕಷ್ಟಪಡುತ್ತಿದ್ದ. ಹೀಗಾಗಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ದಿನಕ್ಕೊಂದು ಲ್ಯಾಪ್ಟಾಪ್ ಕಳವು ಮಾಡುತ್ತಿದ್ದ. ಈ ಬಗ್ಗೆ ದೂರು ದಾಖ ಲಾದ ಮೇಲೆ ಕಂಪನಿಯ ಕ್ಯಾಮೆರಾಪರಿಶೀಲಿಸಲಾಯಿತು. ಸಿಸ್ಟಂ ಅಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಲ್ಯಾಪ್ ಟಾಪ್ ಕಳವು ಮಾಡಿದ್ದ ಎಂಬುದು ತನಿಖೆಯಿಂದ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.