ಕೆಲ ಎಟಿಎಂಗಳಲ್ಲಿ ತಾಂತ್ರಿಕ ದೋಷ; ಗ್ರಾಹಕರ ಪರದಾಟ


Team Udayavani, Apr 1, 2020, 2:14 PM IST

ಕೆಲ ಎಟಿಎಂಗಳಲ್ಲಿ ತಾಂತ್ರಿಕ ದೋಷ; ಗ್ರಾಹಕರ ಪರದಾಟ

ಬೆಂಗಳೂರು: ನಗರದ ಕೆಲವೆಡೆ ಎಟಿಎಂಗಳಲ್ಲಿ ಹಣ ಲಭ್ಯವಾಗದ ಕಾರಣ ಮಂಗಳವಾರ ಜನ ಪರದಾಡುವಂತಾಯಿತು. ತಾಂತ್ರಿಕ ದೋಷ, ನೆಟ್‌ವರ್ಕ್‌ ಸಮಸ್ಯೆ ಜತೆಗೆ ಹಣದ ಅಲಭ್ಯತೆ ಕಾರಣಕ್ಕೆ ಹಲವು ಎಟಿಎಂಗಳು ಸ್ಥಗಿತಗೊಂಡಿರುವುದರಿಂದ ಸಕಾಲದಲ್ಲಿ ಹಣ ಪಡೆಯಲಾಗದೆ ತೊಂದರೆಯಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ನಗರದ ಎಲ್ಲಾ ಎಟಿಎಂಗಳಲ್ಲಿ ಹಣ ಲಭ್ಯವಿದೆ ಎಂದು ಬ್ಯಾಂಕ್‌ಗಳ ಅ ಧಿಕಾರಿಗಳು ಹೇಳುತ್ತಿದ್ದರೂ ಹಲವೆಡೆ ಎಟಿಎಂನಲ್ಲಿ ಹಣವಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಏ.1ರಿಂದ ವೇತನ, ಪಿಂಚಣಿ ಜಮೆ ಆಗಲಿದ್ದು, ಕೇಂದ್ರ ಘೋಷಿಸಿರುವ ಪರಿಹಾರ ಮೊತ್ತ ಕೂಡ ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆಯಾಗಲಿದೆ. ಆ ಹೊತ್ತಿನಲ್ಲೂ ಎಟಿಎಂಗಳಲ್ಲಿ ಹಣ ಲಭ್ಯವಿಲ್ಲದಿದ್ದರೆ ಹೇಗೆ ಎಂಬ ಆತಂಕ ಗ್ರಾಹಕರನ್ನು ಕಾಡುತ್ತಿದೆ.

ಆಯ್ದ ಎಟಿಎಂ ಸ್ಥಗಿತ: ನಿರ್ದಿಷ್ಟ ಕಾರಣ, ನೈರ್ಮಲ್ಯ ಸಮಸ್ಯೆ ಕಾರಣಕ್ಕೆ ಕೆಲ ಎಟಿಎಂಗಳನ್ನು ಕ್ವಾರಂಟೈನ್‌ನಡಿ ನಿಗಾದಲ್ಲಿರಿಸಿ ಸ್ಥಗಿತಗೊಳಿಸಲಾಗಿದೆ. ಬಳಕೆದಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು, ಎಟಿಎಂ ಬಳಸುವಾಗ ಸ್ಕ್ರೀನ್‌ ಮುಟ್ಟುವಾಗ, ಪಿನ್‌ ಸಂಖ್ಯೆ ನಮೂದಿಸುವಾಗ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್‌ ಬಳಸಿಯೇ ಮುಂದುವರಿಯುವ ವ್ಯವಸ್ಥೆ ಮಾಡಲಾಗಿದೆ. ಎಟಿಎಂಗಳಲ್ಲಿ ಹಣ ಲಭ್ಯತೆ ಇದೆ. ಕೆಲವೆಡೆ ಹಣ ಭರ್ತಿ ಮಾಡುವಲ್ಲಿ ಕೆಲವು ತಾಸು ವ್ಯತ್ಯಯವಾಗಿ ರುವುದನ್ನು ಹೊರತುಪಡಿಸಿದರೆ ಹಣದ ಕೊರತೆ ಸಮಸ್ಯೆ ಇಲ್ಲ. ರಾಜ್ಯಾದ್ಯಂತ 13,000 ಎಟಿಎಂಗಳಿದ್ದು, ನೈರ್ಮಲ್ಯಕ್ಕೆ ಒತ್ತು ನೀಡಲು ತಿಳಿಸಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ ಎಸ್‌ಬಿಐನ 1,078 ಎಟಿಎಂಗಳಿದ್ದು, ಎಲ್ಲೆಡೆ ಹಣದ ಪೂರೈಕೆ ನಿರಂತರವಾಗಿ ನಡೆದಿದೆ. ಭದ್ರತಾ ಸಿಬ್ಬಂದಿ ಇರುವ ಎಟಿಎಂಗಳ ಬಳಿ ಸಿಬ್ಬಂದಿಯೇ ಗ್ರಾಹಕರು ಸರದಿಯಲ್ಲಿ ಹಣ ಪಡೆಯಲು ಸಹಕರಿಸಲಿದ್ದಾರೆ. ಕೈಗಳಿಗೆ ಸ್ಯಾನಿಟೈಸರ್‌ ಸಿಂಪಡಿಸಿಯೇ ಎಟಿಎಂ ಬಳಸಲು ಅವಕಾಶ ನೀಡುತ್ತಿದ್ದಾರೆ. ಭದ್ರತಾ ಸಿಬ್ಬಂದಿ ಇಲ್ಲದ “ವಿದ್ಯುನ್ಮಾನ ನಿಗಾ’ (ಇ- ಸರ್ವಲೆನ್ಸ್‌) ವ್ಯವಸ್ಥೆ ಇರುವ ಎಟಿಎಂಗಳಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್‌ಬಿಐ ಬ್ಯಾಂಕ್‌ನ ಉನ್ನತ ಅಧಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ರಾಜ್ಯದ ಬಹುತೇಕ ಕಡೆ ಎಟಿಎಂ ಕೇಂದ್ರಗಳಲ್ಲಿ ಸ್ಯಾನಿಟೈಸರ್‌, ಟಿಶ್ಯೂಪೇಪರ್‌ ವ್ಯವಸ್ಥೆ ಇದ್ದು, ಗ್ರಾಹಕರ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಗುರುವಾರದಿಂದ ಒತ್ತಡ?: 2019-20ನೇ ಸಾಲಿನ ಹಣಕಾಸು ವರ್ಷ ಮಾ. 31ಕ್ಕೆ ಮುಕ್ತಾಯವಾಗಿರುವುದರಿಂದ ಏ.1ರಂದು ಬ್ಯಾಂಕ್‌ಗಳಿಗೆ ರಜೆ ಇದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಗುರುವಾರದಿಂದ ಬ್ಯಾಂಕ್‌ಗಳು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಗ್ರಾಹಕರಿಗೆ ಸೇವೆ ನೀಡಲಿವೆ. ಗುರುವಾರದಿಂದ ಇದು ನಿರಂತರವಾಗಿ ಮುಂದುವರಿಯಲಿದೆ. ಗ್ರಾಹಕರು ಆತಂಕವಿಲ್ಲದೆ ಬ್ಯಾಂಕ್‌ ಸೇವೆ ಪಡೆಯಬಹುದು ಎಂದು ಎಸ್‌ಎಲ್‌ಬಿಸಿ ಮೂಲಗಳು ಹೇಳಿವೆ.

ಎಟಿಎಂ ಅವಲಂಬನೆ ಹೆಚ್ಚಳ ಸಾಧ್ಯತೆ : ತಿಂಗಳ ಮೊದಲ ವಾರದಲ್ಲಿ ಸಾಮಾನ್ಯವಾಗಿ ಅಧಿಕಾರಿ, ಉದ್ಯೋಗಿ, ಕಾರ್ಮಿಕ, ಸಿಬ್ಬಂದಿ ವರ್ಗಕ್ಕೆ ವೇತನ ಪಾವತಿ ಆಗಲಿದೆ. ಹಾಗೆಯೇ ಪಿಂಚಣಿ, ವಿವಿಧ ಸಹಾಯಧನ ಬಿಡುಗಡೆಯಾಗುತ್ತದೆ. ಜತೆಗೆ ಕೇಂದ್ರ ಸರ್ಕಾರ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಘೋಷಿಸಿರುವ ಪರಿಹಾರವೂ ಅರ್ಹರಿಗೆ “ನೇರ ಹಣ ವರ್ಗಾವಣೆ’ (ಡಿಬಿಟಿ) ಮೂಲಕ ಖಾತೆಗೆ ಜಮೆಯಾಗುತ್ತದೆ. ಈ ವೇಳೆ ಎಟಿಎಂಗಳಲ್ಲಿ ಹಣ ಲಭ್ಯವಾಗದಿದ್ದರೆ ಸಮಸ್ಯೆ ಆಗಲಿದೆ ಎಂಬುದು ಸಾರ್ವಜನಿಕರ ಆತಂಕ. ಆದರೆ, ಹಣ ಡ್ರಾ ಮಾಡುವಲ್ಲಿ ಯಾವುದೇ ಕೊರತೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕಿಂಗ್‌ ವಲಯದ ಪ್ರಮುಖರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.