ಡ್ರಗ್ಸ್‌ ಮಾರಾಟ ಜಾಲದಲ್ಲಿ ಸಿಕ್ಕಿಬಿದ್ದ ಟೆಕ್ಕಿ


Team Udayavani, Nov 3, 2018, 12:17 PM IST

drugs.jpg

ಬೆಂಗಳೂರು: ರಾಜಧಾನಿಯ ಪ್ರತಿಷ್ಠಿತ ಪಬ್‌ಗಳು ಹಾಗೂ  ಪಾರ್ಟಿಗಳಿಗೆ ಕೊಕೇನ್‌ ಸೇರಿದಂತೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲ ಬೇಧಿಸಿರುವ  ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು, ಮಂಗಳೂರು ಮೂಲದ ಸಾಫ್ಟ್ವೇರ್‌ ಇಂಜಿನಿಯರ್‌ ಹಾಗೂ ಇಬ್ಬರು ಆಫ್ರಿಕಾ ಪ್ರಜೆಗಳನ್ನು ಬಂಧಿಸಿದ್ದಾರೆ.  

ದಕ್ಷಿಣ ಆಫ್ರಿಕಾದ ಫೇತ್‌ ಚುಕ್‌ (32)  ಹಾಗೂ ಕಂಟೆ ಹೆನ್ರಿ (24)  ಮಂಗಳೂರಿನ ಪ್ರತೀಕ್‌ ಶೆಟ್ಟಿ  (29) ಬಂಧಿತರು. ಆರೋಪಿಗಳಿಂದ  1.30 ಕೋಟಿ ರೂ. ಮೌಲ್ಯದ ಕೊಕೇನ್‌ ಹಾಗೂ ಎಕ್ಸ್‌ಟೆಸಿ ಮಾತ್ರೆಗಳು ಹಾಗೂ ಒಂದು ಕಾರು, ಬೈಕ್‌ನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಪ್ರಮುಖ ಆರೋಪಿ ಎಂದು ಪರಿಗಣಿಸಿರುವ ಫೇತ್‌ಚುಕ್‌ ಹಲವು ವರ್ಷಗಳಿಂದ ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿಸಿಕೊಂಡಿದ್ದಾನೆ. ಮುಂಬೈ, ಹೊರದೇಶಗಳಿಂದ  ಕೋಕೇನ್‌ ತರಿಸಿಕೊಳ್ಳುತ್ತಿದ್ದ ಆತ ನೈಜೀರಿಯನ್‌ ಯುವಕರನ್ನಿಟ್ಟುಕೊಂಡು  ಕಾಲೇಜು ವಿದ್ಯಾರ್ಥಿಗಳು, ಪ್ರತಿಷ್ಠಿತ ಕಂಪೆನಿಗಳ ಉದ್ಯೋಗಿಗಳು, ಪಬ್‌ಗಳು ಹಾಗೂ ಪಾರ್ಟಿಗಳಲ್ಲಿ ಮಾರಾಟ ಮಾಡಿಸುತ್ತಿದ್ದ.

ಈ ಮಾರಾಟ ಜಾಲದಲ್ಲಿ ಟೆಕ್ಕಿ ಪ್ರತೀಕ್‌ ಶೆಟ್ಟಿಯೂ ತೊಡಗಿಸಿಕೊಂಡಿದ್ದ. ಆರೋಪಿಗಳು ಒಂದು ಗ್ರಾಂ ಕೊಕೇನ್‌ಗೆ 8 ಸಾವಿರ ರೂ.ಗಳಿಗೆ ಮಾರುತ್ತಿದ್ದರು. ಅದೇ ರೀತಿ ಎಕ್ಸೆಟಿಸಿ ಮಾತ್ರೆ ಒಂದಕ್ಕೆ ಒಂದೂವರೆ ಸಾವಿರ ರೂ. ಪಡೆಯುತ್ತಿದ್ದರು ಎಂಬ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆಫ್ರಿಕನ್‌ ಮೂಲದ ಇಬ್ಬರು  ಆರೋಪಿಗಳು ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಾಂಗಕ್ಕೆ ಸೇರಿಕೊಂಡಿದ್ದಾರೆ. ಇಬ್ಬರ ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದು. ಇವರಿಗೆ ಮಾದಕ ವಸ್ತು ಪೂರೈಸುತ್ತಿದ್ದ ಜಾಲ ಯಾವುದು? ಆರೋಪಿಗಳ ಜತೆ ಭಾಗಿಯಾಗಿದ್ದ ಇತರೆ ಆರೋಪಿಗಳು ಯಾರು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತರು ಹೇಳಿದರು.

ಚಟದಿಂದ ದಂಧೆಗೆ ಸೇರಿಕೊಂಡ: ಮಂಗಳೂರು ಮೂಲದ ಆರೋಪಿ ಪ್ರತೀಕ್‌ ಶೆಟ್ಟಿ, ಸಾಫ್ಟ್ವೇರ್‌ ಉದ್ಯೋಗಿ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆತನಿಗೆ ತಿಂಗಳಿಗೆ 60 ಸಾವಿರ ರೂ. ಸಂಬಳವಿದೆ. ಈ ಹಿಂದೆ ಆರೋಪಿ ಪೇತ್‌ಚುಕ್‌ನಿಂದ ಮಾದಕ ವಸ್ತು ಖರೀದಿಸಿ ಸೇವಿಸುತ್ತಿದ್ದ ಪ್ರತೀಕ್‌, ಕ್ರಮೇಣ ವ್ಯಸನಿಯಾಗಿದ್ದಾನೆ. ಬಳಿಕ, ಆತನೇ ಪಾರ್ಟಿಗಳಿಗೆ ಮಾದಕ ವಸ್ತು ಪೂರೈಸುವ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾನೆ.

ದಿನಪೂರ್ತಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರತೀಕ್‌, ರಾತ್ರಿ ವೇಳೆ ಮಾದಕ ವಸ್ತು ಮಾರಾಟದಲ್ಲಿ ತೊಡಗಿಸಿಕೊಳ್ಳುತ್ತಿದ್ದ. ಪಾರ್ಟಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಎಂಬ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

40 ಗ್ರಾಹಕರ ಪಟ್ಟಿ: ಆರೋಪಿಗಳಿಂದ ಪಾರ್ಟಿಗಳಲ್ಲಿ, ಪಬ್‌ಗಳಲ್ಲಿ ಮಾದಕ ವಸ್ತು ಖರೀದಿ ಮಾಡುತ್ತಿದ್ದ 40 ಮಂದಿಯ ಹೆಸರು  ವಿವರಗಳನ್ನು ಪಟ್ಟಿ ಮಾಡಲಾಗಿದೆ. ಬಹುತೇಕರು 40ರೊಳಗೆ ವಯೋಮಾನದವರೇ ಆ ಪಟ್ಟಿಯಲ್ಲಿದ್ದಾರೆ.

ಅದೇ ರೀತಿ, ನಗರದಲ್ಲಿ ಮಾದಕ ವಸ್ತು ಸೇವನೆಯಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು, ಉದ್ಯೋಗಿಗಳ ಪಟ್ಟಿಯನ್ನು ಆಯಾ ವಿಭಾಗದಲ್ಲಿ ಮಾಡಲಾಗಿದೆ. ನವೆಂಬರ್‌ 14ರ ಬಳಿಕ ಅವರೆಲ್ಲರನ್ನೂ ಪೋಷಕರ ಸಮ್ಮುಖದಲ್ಲಿ ಸಭೆ ನಡೆಸಿ, ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳು ಹಾಗೂ ಕಾನೂನು ಕ್ರಮಗಳ ಬಗ್ಗೆ ಮನವರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಆಯುಕ್ತ ಟಿ. ಸುನೀಲ್‌ ಕುಮಾರ್‌ ತಿಳಿಸಿದರು. 

ಜಪ್ತಿ ಮಾಡಿಕೊಂಡ ಮಾದಕ ವಸ್ತುಗಳ ವಿವರ ಹಾಗೂ ಮೌಲ್ಯ 
-ಕೋಕೇನ್‌- 1.50 ಕೆ.ಜಿ – 1,20, ಕೋಟಿ ರೂ. 
-ಎಕ್ಸ್‌ಟೆಸಿ ಮಾತ್ರೆ (ಕಂದು ಬಣ್ಣ) – 1350 – 20.25,ಲಕ್ಷ ರೂ. 
-ಎಕ್ಸ್‌ಟೆಸಿ ಮಾತ್ರೆ  (ಕಡು ನೇರಳೆ ಬಣ್ಣ)- 580 – (286 ಗ್ರಾಂ)- 8.70, ಲಕ್ಷ ರೂ. 
-ಕಾರು- 3,50,ಲಕ್ಷ ರೂ. 
-ಬೈಕ್‌ – 35, ಸಾವಿರ ರೂ. 
-ನಗದು ಹಣ- ಆರು ಸಾವಿರ ರೂ. 
-ಒಟ್ಟು 1,52,86,000 ಕೋಟಿ ರೂ.

ಒಂದು ಲಕ್ಷ ರೂ. ಬಹುಮಾನ: ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಎಸಿಪಿ ಬಿ.ಎಸ್‌. ಮೋಹನ್‌ಕುಮಾರ್‌,ಇನ್ಸ್‌ಪೆಕ್ಟರ್‌, ಎಸ್‌. ಆಯಿಷಾ, ಸಬ್‌ ಇನ್ಸ್‌ಪೆಕ್ಟರ್‌ ಮಿರ್ಜಾ ಅಲಿ ರಾಜಾ, ಪಿ.ಎಸ್‌.ಐ. ಲಕ್ಷಿನರಸಿಂಹಯ್ಯ, ಪೊಲೀಸ್‌ ಪೇದೆ ಶಶಿಧರ್‌, ಯೋಗಾನಂದ  ಸೇರಿ ಮತ್ತಿತರರ  ಸಿಬ್ಬಂದಿಯನ್ನೊಳಗೊಂಡ ತಂಡಕ್ಕೆ ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ 1ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.

ನಗರದ ಕೆಲವು ಪಬ್‌ಗಳು ಹಾಗೂ ಹೋಟೆಲ್‌ಗ‌ಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂಬ ಬಗ್ಗೆ ಆರೋಪಿಗಳ ವಿಚಾರಣೆಯಿಂದ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ಪ್ರಕರಣವನ್ನು  ಆಳವಾಗಿ ತನಿಖೆ ನಡೆಸಲಾಗುತ್ತಿದೆ.
-ಅಲೋಕ್‌ ಕುಮಾರ್‌, ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತ 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.