
ಕ್ಯಾಂಟೀನ್ಗೆ ದೇಗುಲ ಆವರಣ; ವಿವಾದ ಅಂತ್ಯ
Team Udayavani, Aug 2, 2017, 11:23 AM IST

ಬೆಂಗಳೂರು: ಚಾಮರಾಜಪೇಟೆಯ ರಾಮೇಶ್ವರ ದೇವಸ್ಥಾನದ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಸ್ಥಳದಲ್ಲಿ ಕ್ಯಾಂಟೀನ್ ನಿರ್ಮಾಣ ಪ್ರಸ್ತಾಪ ಕೈ ಬಿಡಲಾಗಿದ್ದು, ಬೇರೆ ಸ್ಥಳ ಹುಡುಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೂರಾರು ವರ್ಷಗಳ ಇತಿಹಾಸವಿರುವ ದೇವಾಲಯ ಕಾಂಪೌಂಡ್ ಅನ್ನು ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ತೆರವುಗೊಳಿಸಿದ್ದರಿಂದ ವಿರೋಧ ವ್ಯಕ್ತಪಡಿಸಿದ್ದ ಸ್ಥಳೀಯರು ಮಂಗಳವಾರ ಪಾಲಿಕೆಯ ಮಾಜಿ ಉಪ ಮೇಯರ್ ಲಕ್ಷ್ಮಿನಾರಾಯಣ ಹಾಗೂಮಾಜಿ ಸದಸ್ಯ ಬಿ.ವಿ.ಗಣೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್, ಸ್ಥಳೀಯರಿಗೆ ಮಾಹಿತಿ ನೀಡದೆ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆವರಣದಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಮುಂದಾಗಿದ್ದು ಸರಿಯಲ್ಲ. ಕ್ಯಾಂಟೀನ್ಗೆ ಬೇರೆ ಜಾಗ ಹುಡುಕಿಕೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ತೆರವು ಮಾಡಿರುವ ದೇವಾಲಯ ಕಾಂಪೌಂಡ್ ಪಾಲಿಕೆ ವತಿಯಿಂದಲೇ ನಿರ್ಮಿಸಿಕೊಡಿ ಇಲ್ಲದಿದ್ದರೆ ನನ್ನ ಸ್ವಂತ ವೆಚ್ಚದಲ್ಲಿ ನಿರ್ಮಿಸಿಕೊಡುತ್ತೇನೆ ಎಂದು ಹೇಳಿದರು. ಇದರೊಂದಿಗೆ ಕ್ಯಾಂಟೀನ್ ನಿರ್ಮಾಣ ವಿವಾದ ಅಂತ್ಯಗೊಂಡಿತು.ಉಪಮೇಯರ್ ಎಂ.ಆನಂದ್ ಉಪಸ್ಥಿತರಿದ್ದರು.
ಈ ಕುರಿತು ಪ್ರತಿಕ್ರಿಯಿದ ಸ್ಥಳೀಯ ಪಾಲಿಕೆ ಸದಸ್ಯೆ ಕೋಕಿಲಾ ಚಂದ್ರಶೇಖರ್, ಪಾಲಿಕೆಯ ಅಧಿಕಾರಿಗಳು ದೇವಸ್ಥಾನದ ಜಾಗದಲ್ಲಿ ಕ್ಯಾಂಟೀನ್ ನಿರ್ಮಿಸಲು ಮುಜರಾಯಿ ಇಲಾಖೆಯಿಂದ ಅನುಮತಿ ಪಡೆದುಕೊಂಡಿದ್ದಾರೆ. ಆದರೆ, ಸ್ಥಳೀಯ ಜನಪ್ರತಿನಿಗಳಿಗೆ ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆಯದೆ ಕ್ಯಾಂಟೀನ್ ನಿರ್ಮಾಣಕ್ಕೆ ಮುಂದಾಗಿದ್ದು, ಬಿಜೆಪಿಯರು ಕ್ಯಾಂಟೀನ್ ನಿರ್ಮಿಸದಂತೆ ಪ್ರತಿಭಟನೆ ನಡೆಸಿದ್ದಾರೆ.
ಆ ಹಿನ್ನೆಲೆಯಲ್ಲಿ ಬೇರೊಂದು ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಈ ಮಧ್ಯೆ, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ , ಚಾಮರಾಜಪೇಟೆಯ ದೇವಾಲಯ ಜಾಗದಲ್ಲಿ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಇದರೊಂದಿಗೆ ಈಗಾಗಲೇ ಹೊಡೆದಿರುವ ಕಾಂಪೌಂಡನ್ನು ಪಾಲಿಕೆಯಿಂದ ಮರು ನಿರ್ಮಾಣ ಮಾಡಿಕೊಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.