ಉಗ್ರರ ಕಣ್ಣು ಬೆಂಗಳೂರಿನ ಮೇಲಿದೆ!


Team Udayavani, Feb 13, 2020, 3:07 AM IST

ugrara-kannu

ಬೆಂಗಳೂರು: ಜಗತ್ತಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನ ಮೇಲೂ ಉಗ್ರರ ಕಣ್ಣಿದೆ ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೇಳಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಮೆರಿಕ ಸೇರಿ ಹಲವು ರಾಷ್ಟ್ರಗಳು ಉಗ್ರ ಚಟುವಟಿಕೆಗಳ ಕಡಿವಾಣಕ್ಕೆ ಬಿಗಿ ಕ್ರಮ ಕೈಗೊಂಡಿವೆ. ಬಾಂಗ್ಲಾದೇಶದಲ್ಲಿ ವಿಶ್ವದ 10 ಅಪಾಯಕಾರಿ ಉಗ್ರ ಸಂಘಟನೆಗಳು ನೆಲೆ ಕಂಡು ಕೊಂಡಿವೆ. ಹೀಗಾಗಿ ಸಹಜವಾಗಿಯೇ ಅವುಗಳ ಪ್ರಭಾವ ಭಾರತ ಹಾಗೂ ಬೆಂಗಳೂರಿನ ಮೇಲಿರಲಿದೆ ಎಂದರು.

ತಂತ್ರಜ್ಞಾನ, ಆರ್ಥಿಕತೆ, ಜನಸಂಖ್ಯೆ ಹೆಚ್ಚಳ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಮುಂದಿರುವ ಬೆಂಗಳೂರಲ್ಲಿ ಉಗ್ರರು ತಮ್ಮ ಚಟುವಟಿಕೆಗಳನ್ನು ವಿಸ್ತರಿಸಲು ಉತ್ತೇಜನಕಾರಿ ವಾತಾವರಣವಿದೆ. ಹೀಗಾಗಿಯೇ ಉಗ್ರರ ಕಣ್ಣು ನಗರದ ಮೇಲಿದ್ದು, ಸ್ಲಿàಪರ್‌ ಸೆಲ್‌ ಮಾಡಿಕೊಳ್ಳಲು ಹವಣಿಸುತ್ತಾರೆ.

ಆದರೆ, ಉಗ್ರ ಚಟುವಟಿಕೆಗಳ ನಿಯಂತ್ರಣಕ್ಕೆ ಇಲಾಖೆ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಗರುಡ ಪಡೆ ಕೂಡ ಅಸ್ತಿತ್ವದಲ್ಲಿದೆ. ಅವರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡದಂತೆ ಸಾರ್ವಜನಿಕರೂ ಇಲಾಖೆಗೆ ನೆರವಾಗಬೇಕು ಎಂದು ಹೇಳಿದರು.

ಅಕ್ರಮ ವಲಸಿಗರೂ ಇದ್ದಾರೆ: ವಿಫ‌ುಲ ಉದ್ಯೋಗ ಅವಕಾಶಗಳು ಸೇರಿ ವಿವಿಧ ಕಾರಣಗಳಿಗೆ ವಿವಿಧ ದೇಶಗಳಿಂದ ವಲಸಿಗರು ಬಂದು ಬೆಂಗಳೂರಿನಲ್ಲಿ ನೆಲೆ ಕಂಡು ಕೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ನೇಪಾಳ ಹಾಗೂ ಬಾಂಗ್ಲಾದೇಶಿಗರಿದ್ದಾರೆ. ಅವರ ಮೇಲೆ ನಿಗಾ ಇಡಲಾಗಿದೆ ಎಂದು ಹೇಳಿದರು.

ಮೂರು ನಿಮಿಷದಲ್ಲಿ ಹೊಯ್ಸಳ: ನಾಗರಿಕರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಲು ಸದ್ಯ ಹೊಯ್ಸಳ ಜಾರಿಯಲ್ಲಿದ್ದು, ಕರೆ ಮಾಡಿದ ಏಳು ನಿಮಿಷಗಳಿಗೆ ಸ್ಥಳಕ್ಕೆ ತಲುಪಲಾಗುತ್ತಿದೆ. ಈ ಸೇವೆಯನ್ನು ಮತ್ತಷ್ಟು ತ್ವರಿತಗೊಳಿಸಲು ಈಗಿರುವ ಹೊಯ್ಸಳ ವಾಹನಗಳ ಸಂಖ್ಯೆ ದುಪ್ಪಾಟ್ಟಾಗಬೇಕು.

ಹೀಗಾಗಿ ಅಗತ್ಯ ಹೊಯ್ಸಳ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಜೆಟ್‌ನಲ್ಲಿ ಅನುದಾನ ಸಿಗುವ ಸಾಧ್ಯತೆಯಿದೆ. ಅನುದಾನ ಸಿಕ್ಕಿ ವಾಹನಗಳು ಲಭ್ಯವಾದರೇ ಕರೆ ಮಾಡಿದ ಮೂರು ನಿಮಿಷಗಳಲ್ಲಿಯೇ ಹೊಯ್ಸಳ ಸಿಬ್ಬಂದಿ ಹಾಜರಾಗಲಿದ್ದಾರೆ ಎಂದರು.

ಸಿಸಿ ಕ್ಯಾಮೆರಾ ಕಡ್ಡಾಯ: ಅಪರಾಧ ಕೃತ್ಯಗಳನ್ನು ತಡೆಯಲು ಹಾಗೂ ಅರೋಪಿಗಳನ್ನು ಬೇಗನೆ ಪತ್ತೆಹಚ್ಚಲು ಸಿಸಿ ಕ್ಯಾಮೆರಾ ನೆರವಾಗಲಿವೆ. ಹೀಗಾಗಿ, ವ್ಯಾಪಾರಿಗಳು ತಮ್ಮ ಅಂಗಡಿ ಮುಂದೆ ಕಡ್ಡಾಯವಾಗಿ ಕ್ಯಾಮೆರಾ ಅಳವಡಿಸಬೇಕು. ವಾಹನ ಕಳವು ಕೂಡ ನಗರದಲ್ಲಿ ಹೆಚ್ಚಾಗಿದೆ ಪೊಲೀಸರ ಹೊರತಾಗಿ ವಾಹನಸವಾರರು ಕೂಡ ಜಿಪಿಎಸ್‌ ಚಿಪ್‌ ಅಳವಡಿಸುವ ಮೂಲಕ ಸ್ವಯಂ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಹೊರರಾಜ್ಯದ ಕೆಲಸದವರು ಬೇಕು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಉದ್ಯೋಗಗಳಿಗೆ ನುರಿತ ಹಾಗೂ ಉತ್ತಮ ಕೆಲಸಗಾರರ ಅಗತ್ಯವಿದೆ. ಹೀಗಾಗಿ ರಾಜ್ಯ ಹಾಗೂ ಹೊರರಾಜ್ಯದ ಕೆಲಸಗಾರರ ಅಗತ್ಯವಿದೆ ಎಂದು ಆಯುಕ್ತ ಭಾಸ್ಕರ್‌ ರಾವ್‌ ಹೇಳಿದರು.

20 ವರ್ಷಗಳ ಹಿಂದೆ ಇದ್ದ ಪರಿಸ್ಥಿತಿಯಲ್ಲಿ ಈಗ ನಗರದಲ್ಲಿಲ್ಲ. ಪ್ರಪಂಚದ ಎಲ್ಲ ದೇಶಗಳ, ದೇಶದ ಎಲ್ಲ ರಾಜ್ಯಗಳ ಜನರು ಇಲ್ಲಿ ಬಂದು ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿರುವ ಉದ್ಯೋಗಗಳಿಗೆ ನುರಿತ ಕೆಲಸಗಾರರ ಅಗತ್ಯವೂ ಇದೆ. ಈ ಕಾರಣಕ್ಕೆ ಹೊರಗಿನ ಕೆಲಸದವರೂ ಕೂಡ ಬೇಕಾಗುತ್ತಾರೆ ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.