ಈಗಷ್ಟೇ ಸ್ವಾಭಿಮಾನದ ಬದುಕು


Team Udayavani, Mar 31, 2019, 12:23 PM IST

egashte

ಬೆಂಗಳೂರು: “ಆರು ದಶಕಗಳಲ್ಲಿ ನಮ್ಮ ಜೀವನ ಭಿಕ್ಷುಕರಿಗಿಂತ ಕಡೆಯಾಗಿತ್ತು. ಆದರೆ, ಕಳೆದ ಐದು ವರ್ಷಗಳಲ್ಲಿ ಸ್ವಾಭಿಮಾನ ಮತ್ತು ಘನತೆಯಿಂದಾದರೂ ಬದುಕುವಂತಾಗಿದೆ. ಇದು ಭಾರತದಲ್ಲಾದ ದೊಡ್ಡ ಪರಿವರ್ತನೆ’ ಎಂದು ಉದ್ಯಮಿ ಟಿ.ವಿ. ಮೋಹನದಾಸ್‌ ಪೈ ವಿಶ್ಲೇಷಿಸಿದರು.

ನಗರದ ಹೋಟೆಲ್‌ನಲ್ಲಿ ಬಿಜೆಪಿ ಆರ್ಥಿಕ ಘಟಕ ಶನಿವಾರ ಹಮ್ಮಿಕೊಂಡಿದ್ದ “ಪರಿವರ್ತನೆ ಭಾರತ’ (ಟ್ರಾನ್ಸ್‌ಫಾರ್ಮಿಂಗ್‌ ಇಂಡಿಯಾ) ಕುರಿತ ಸಂವಾದದಲ್ಲಿ ಮಾತನಾಡಿದ ಅವರು, “ಆರು ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್‌, ಕನಿಷ್ಠ ಮೂಲಸೌಕರ್ಯಗಳನ್ನೂ ನೀಡದೆ ನಮ್ಮನ್ನು ಭಿಕ್ಷುಕರನ್ನಾಗಿ ಮಾಡಿತ್ತು.

ಆದರೆ, ಕಳೆದ ಐದು ವರ್ಷಗಳಲ್ಲಿ ಭಾರತೀಯರ ಜೀವನಮಟ್ಟ ಸುಧಾರಿಸಿದೆ. ನಲ್ಲಿಗಳಲ್ಲಿ ನೀರು ಬರುತ್ತಿದೆ. ಸ್ವಿಚ್‌ನಲ್ಲಿ ವಿದ್ಯುತ್‌ ಪ್ರವಹಿಸುತ್ತಿದೆ. ಶೇ.85ರಷ್ಟು ಜನರಿಗೆ ಸೂರು ಸಿಕ್ಕಿದೆ. ಶೇ. 85ರಷ್ಟು ಜನ ಬ್ಯಾಂಕ್‌ ಖಾತೆಗಳನ್ನು ಹೊಂದಿದ್ದಾರೆ. 80 ಕೋಟಿ ಜನ ದೂರವಾಣಿ ಸಂಪರ್ಕ ಹೊಂದಿದ್ದಾರೆ. 45 ಕೋಟಿ ಮಂದಿ ಬಳಿ ಸ್ಮಾರ್ಟ್‌ಫೋನ್‌ಗಳಿವೆ.

ಈ ಮೂಲಕ ದೂರದ ಹಳ್ಳಿಗಳಲ್ಲಿರುವ ಜನ ವಿಶ್ವದೊಂದಿಗೆ ಸಂಪರ್ಕ ಹೊಂದಿದ್ದಾರೆ. ಅಲ್ಲಿನ ಆಗುಹೋಗುಗಳೊಂದಿಗೆ ವ್ಯವಹರಿಸುತ್ತಿದ್ದಾರೆ. ಈ ಮೂಲಕ ಒಂದು ಘನತೆಯ ಬದುಕು ಸಾಗಿಸಲು ಸಾಧ್ಯವಾಗಿದೆ. ನನ್ನ ಪ್ರಕಾರ ಇದು ದೇಶದಲ್ಲಾದ ದೊಡ್ಡ ಪರಿವರ್ತನೆ’ ಎಂದು ಪ್ರತಿಪಾದಿಸಿದರು.

“ರಫೇಲ್‌ ಒಂದು ಜೋಕ್‌’: ಈ ಹಿಂದೆ ದೆಹಲಿಯು ಇಡೀ ವಿಶ್ವದ ಭ್ರಷ್ಟಾಚಾರದ ಕೇಂದ್ರವಾಗಿತ್ತು. ಭಾರತೀಯರು ವಿದೇಶಗಳಲ್ಲಿ ತಮ್ಮ ಪಾಸ್‌ಪೋರ್ಟ್‌ ತೋರಿಸಿದಾಗ ವ್ಯಂಗ್ಯವಾಗಿ ನಗುವ ಕಾಲ ಇತ್ತು. ಆದರೆ, ಇಂದು ಈ ಚಿತ್ರಣ ಬದಲಾಗಿದೆ. ಹೆಮ್ಮೆಯಿಂದ ಓಡಾಡುವಂತಾಗಿದೆ.

ದಕ್ಷ ಆಡಳಿತದಿಂದ ಪಾರದರ್ಶಕತೆ ಬಂದಿದೆ ಎಂದ ಅವರು, “ರಫೇಲ್‌ ಡೀಲ್‌ ಪ್ರಕರಣದಲ್ಲಿನ ಅವ್ಯವಹಾರದ ಬಗ್ಗೆ ಪ್ರತಿಪಕ್ಷದ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ರಫೇಲ್‌ ಡೀಲ್‌ ಎನ್ನುವುದೇ ಒಂದು “ಜೋಕ್‌’. 56 ಸಾವಿರ ಕೋಟಿ ಮೊತ್ತದ ಈ ವ್ಯವಹಾರದಲ್ಲಿ ಸುಮಾರು 30 ಸಾವಿರ ಕೋಟಿ ರೂ. ಆಫ್ಸೆಟ್‌ ಗುತ್ತಿಗೆ. ಇದು ಇನ್ನೂ ಆಗಿಯೇ ಇಲ್ಲ’ ಎಂದರು.

“ದೆಹಲಿಯಲ್ಲಿರುವ ದೇಶದ ಮೊದಲ ಕುಟುಂಬ ಕಳೆದ ಆರು ದಶಕಗಳ ಕಾಲ ಐಷಾರಾಮಿ ಜೀವನ ನಡೆಸಿದೆ. ಅವರ ವೈಭವಯುತ ಜೀವನವನ್ನು ತೆರಿಗೆ ಪಾವತಿಸುವ ಮೂಲಕ ನಾನೂ ಪೋಷಿಸಿದ್ದೇನೆ’ ಎಂದು ಟೀಕಿಸಿದರು.

ನಾರಾಯಣ ಹೃದಯಾಲಯದ ಅಧ್ಯಕ್ಷ ಡಾ.ದೇವಿಪ್ರಸಾದ್‌ ಶೆಟ್ಟಿ ಮಾತನಾಡಿ, ಆಯುಷ್ಮಾನ್‌ ಭಾರತವು ದೇಶದ ಅತಿದೊಡ್ಡ ಉದ್ಯಮವಾದ ಆರೋಗ್ಯ ಕ್ಷೇತ್ರದಲ್ಲಿ “ಗೇಮ್‌ ಚೇಂಜರ್‌’ ಆಗಿದೆ ಎಂದು ಬಣ್ಣಿಸಿದರು. ವಿಶ್ವನಾಥ್‌ ಭಟ್‌ ಉಪಸ್ಥಿತರಿದ್ದರು.

ದೇಶದ ಆರ್ಥಿಕತೆ ಮೇಲೆ ಪರಿಣಾಮ: ಮೂಲ ಸಂವಿಧಾನದಲ್ಲಿ ಇಲ್ಲದ ಸಮಾಜವಾದ ಮತ್ತು ಜಾತ್ಯತೀತವಾದ ಎಂಬ ಎರಡು ಪದಗಳ ಸೇರ್ಪಡೆಯು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಿತು ಎಂದು ಟಿ.ವಿ. ಮೋಹನದಾಸ್‌ ಪೈ ಅಭಿಪ್ರಾಯಪಟ್ಟರು. ಸಮಾಜವಾದ ಮತ್ತು ಜಾತ್ಯತೀತವಾದ ಎಂಬ ಪದಗಳು ಮೂಲ ಸಂವಿಧಾನದಲ್ಲಿ ಇರಲಿಲ್ಲ. ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಇದನ್ನು ಸೇರಿಸಿದರು. ಪರಿಣಾಮ ದೇಶದ ಆರ್ಥಿಕತೆ ಮುಕ್ತವಾಗಲಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.