ಪಾಲಿಕೆ ಸೇವೆಗಳಿನ್ನು ಆನ್‌ಲೈನಲ್ಲೇ


Team Udayavani, Sep 2, 2018, 11:58 AM IST

palike.jpg

ಬೆಂಗಳೂರು: ಮುಂದಿನ ವರ್ಷದ ಜನವರಿ 1ರಿಂದ ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಾಗರಿಕರಿಗೆ ನೀಡುವ ಸೇವೆಗಳು  ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಕಳೆದ ಫೆಬ್ರವರಿಯಲ್ಲಿ ಅಂದು ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಮಂಡಿಸಿದ್ದ 2018-19ನೇ  ಸಾಲಿನ ಬಜೆಟ್‌ ನಲ್ಲಿ ಈ ಕುರಿತು ಘೋಷಣೆ ಮಾಡಲಾಗಿತ್ತು. 

ಅದರಂತೆ ಸರ್ಕಾರಿ ಆದೇಶ ಹೊರಡಿಸಲಾ ಗಿದ್ದು, 2019ರ ಜ.1ರಿಂದ ಎಲ್ಲಾ ನಗರ  ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ, ವಹಿ-ನಕಲು (ಖಾತಾ), ಕಟ್ಟಡ ನಕ್ಷೆ ಅನು ಮೋದನೆ, ನೀರು ಮತು ¤ ವಿದ್ಯುತ್‌ ಸಂಪರ್ಕ, ರಸ್ತೆ  ತುಂಡರಿಸುವುದು ಸೇರಿದಂತೆ ನಾಗರಿಕ ಸೇವೆಗಳು ಆನ್‌ಲೈನ್‌ ಮೂಲಕ ಸಿಗಲಿವೆ. ಈ ನಿಟ್ಟಿನಲ್ಲಿ ತಂತ್ರಾಂಶ ಅಭಿವೃದ್ಧಿಪಡಿಸುವ ಕಾರ್ಯವನ್ನು  ಈಗಾಗಲೇ ಬಹುತೇಕ ಪೂರ್ಣಗೊಳಿಸಲಾಗಿದೆ.

2019ರ ಜ.1ರಿಂದ ಈ ಎಲ್ಲಾ ಸೇವೆಗಳನ್ನು ಆನ್‌ಲೈನ್‌ ಮೂಲಕವೇ ಒದಗಿಸುವುದು ಕಡ್ಡಾಯವಾಗಿದೆ.  ಅದಕ್ಕಾಗಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಅಭಿವೃದ್ಧಿಪಡಿಸಿರುವ ಕಟ್ಟಡ ಪರವಾನಗಿ ಮತ್ತು ಲೇಔಟ್‌ ಅನುಮೋದನಾ ವ್ಯವಸ್ಥೆಗಳನ್ನು ಗ್ರಾಹಕೀಕರಣಗೊಳಿಸಿ (ಕಸ್ಟಮೈಸೇಷನ್‌) ಬಳಸಿಕೊಳ್ಳಲು ಕೂಡ ಅನುಮತಿ ನೀಡಲಾಗಿದೆ. 

ತಂತ್ರಾಂಶ ಅಭಿವೃದ್ಧಿ ಪ್ರಕ್ರಿಯೆ ಪೂರ್ಣ: ನಾಗರಿಕ ಸೇವೆಗಳನ್ನು ಆನ್‌ಲೈನ್‌ ಮೂಲಕ ಕಲ್ಪಿಸಲು ಈಗಾಗಲೇ ತಂತ್ರಾಂಶ ಅಭಿವೃದ್ಧಿ ಪ್ರಕ್ರಿಯೆ  ಪೂರ್ಣಗೊಂಡಿದೆ. ನಗರ ಸ್ಥಳೀಯ ಸಂಸ್ಥೆಗಳ ಕಚೇರಿ ಕಾರ್ಯಚಟುವಟಿಕೆಗಳ ಸ್ವಯಂಚಾಲಿತ ನಿರ್ವಹಣೆಗಾಗಿ ಆನ್‌ಲೈನ್‌ ಉದ್ಯಮ ಸಂಪನ್ಮೂಲ  ಯೋಜನೆ ಅಭಿವೃದ್ಧಿಪಡಿಸಲು, ಕಟ್ಟಡ ಮತ್ತು ನಿವೇಶನಗಳ ಅನುಮೋದನಾ ಪ್ರಕ್ರಿಯೆಯ ಸ್ವಯಂಚಾಲಿತ ನಿರ್ವಹಣೆಗಾಗಿ ಆನ್‌ಲೈನ್‌ ತಂತ್ರಾಂಶ  ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ.

ಅದರಂತೆ ಕರ್ನಾಟಕ ಮುನ್ಸಿಪಲ್‌ ಸೊಸೈಟಿ ಮೂಲಕ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ  ಕಟ್ಟಡ ಪರವಾನಗಿ ಮತ್ತು ಲೇಔಟ್‌  ಅನುಮೋದನಾ ವ್ಯವಸ್ಥೆ ತಂತ್ರಾಂಶವನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಬಿಬಿಎಂಪಿ  ವ್ಯಾಪ್ತಿಯಲ್ಲಿ ಈಗಾಗಲೇ ಎಂಟು ವಲಯ ಕಚೇರಿಗಳಲ್ಲಿ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್‌ ಮೂಲಕ ನೀಡಲು ಕ್ರಮ ಕೈಗೊಂಡು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿದೆ. 

ಆನ್‌ಲೈನ್‌ ವ್ಯವಸ್ಥೆ ಅನುಕೂಲವೇನು?: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೇಔಟ್‌ ಅಥವಾ ಕಟ್ಟಡ ನಿರ್ಮಾಣ ಮಾಡಬೇಕಾದರೆ ಖಾತೆ, ಕಟ್ಟಡ ನಕ್ಷೆ ಅನುಮೋದನೆ, ವಿದ್ಯುತ್‌ ಸಂಪರ್ಕ ಮತ್ತು ನೀರಿನ  ಸಂಪರ್ಕಕ್ಕಾಗಿ ರಸ್ತೆ ತುಂಡರಿಸುವುದು ಸೇರಿ ವಿವಿಧ ಸೇವೆಗಳಿಗೆ ಬೇರೆ ಬೇರೆ ಇಲಾಖೆಗಳಿಗೆ ಅರ್ಜಿ ಸಲ್ಲಿಸಬೇಕಿತ್ತು. ನಕ್ಷೆ ಮಂಜೂರಾದರೂ ಅನುಮತಿ ತಡವಾಗುತ್ತಿತ್ತು. ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯಬೇಕಿತ್ತು. ಆನ್‌ಲೈನ್‌ ವ್ಯವಸ್ಥೆ ಜಾರಿಯಿಂದ ಒಮ್ಮೆ ಅರ್ಜಿ ಸಲ್ಲಿಸಿದರೆ ಸಾಕು.

ಆಯಾ ನಗರ ಸ್ಥಳೀಯ ಸಂಸ್ಥೆಗಳೇ ಎಲ್ಲಾ ಕೆಲಸಗಳಿಗೆ ಸಂಬಂಧಿಸಿದ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಅಥವಾ ಅನುಮತಿ  ಪತ್ರ ಪಡೆದು, ಕೆಲವೇ ದಿನಗಳಲ್ಲಿ ಒದಗಿಸುತ್ತದೆ. ಇದಕ್ಕೆ 30ರಿಂದ 45 ದಿನ ನಿಗದಿಪಡಿಸಲಾಗುತ್ತದೆ. ಅರ್ಜಿ ತಿರಸ್ಕೃತವಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಇತ್ಯರ್ಥವಾಗದೇ ಇದ್ದರೆ ಅಥವಾ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದರೆ ಅದನ್ನೇ ಅನುಮತಿ ಎಂದು  ಪರಿಗಣಿಸಿ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಸೇವೆಗಳನ್ನು ಪಡೆದುಕೊ ಳ್ಳಲು ಅರ್ಜಿದಾರರು ಅರ್ಹರಾಗುತ್ತಾರೆ. 

ಯಾವ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯ?: 2019ರ ಜ.1ರಿಂದ ಆಸ್ತಿ ತೆರಿಗೆ, ವಹಿ-ನಕಲು (ಖಾತಾ), ಕಟ್ಟಡ ನಕ್ಷೆ ಅನುಮೋದನೆ, ನೀರು ಮತು ವಿದ್ಯುತ್‌ ಸಂಪರ್ಕ, ರಸ್ತೆ ತುಂಡರಿಸುವುದು ಸೇರಿ ನಗರ ಸ್ಥಳೀಯ ಸಂಸ್ಥೆಯಿಂದ ಒದಗಿಸಲಾಗುವ ನಾಗರಿಕ ಸೇವೆಗಳು.

* ಪ್ರದೀಪ್‌ಕುಮಾರ್‌ ಎಂ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.