ಶರಣಾಗದ ರೌಡಿಶೀಟರ್‌ಗೆ ಗುಂಡೇಟಿನ ಉತ್ತರ


Team Udayavani, Oct 16, 2017, 12:16 PM IST

gun-fire2.jpg

ಬೆಂಗಳೂರು: ಪೇದೆಯೊಬ್ಬರಿಗೆ ಡ್ರ್ಯಾಗರ್‌ನಿಂದ ಇರಿದು ಪರಾರಿಯಾಗುತ್ತಿದ್ದವನಿಗೆ ಶರಣಾಗತಿಯಾಗುವಂತೆ ಸೂಚಿಸಿದರೂ ಪುಂಡಾಟ ನಡೆಸಲು ಯತ್ನಿಸಿದ ರೌಡಿಶೀಟರ್‌ಗೆ ಪೊಲೀಸರು ಗುಂಡೇಟಿನ ಮೂಲಕ ಉತ್ತರ ನೀಡಿದ್ದಾರೆ. ಹಲಸೂರು ಠಾಣೆ ಇನ್ಸಪೆಕ್ಟರ್‌ ಸುಬ್ರಹ್ಮಣ್ಯ ಹಾರಿಸಿದ ಗುಂಡೇಟಿನಿಂದ ಗಾಯಗೊಂಡಿರುವ ರೌಡಿಶೀಟರ್‌ ಕಾರ್ತಿಕ್‌ ಇದೀಗ ಆಸ್ಪತ್ರೆ ಸೇರಿದ್ದಾನೆ.

ಹಲಸೂರು ಠಾಣೆ  ಪೊಲೀಸರು ಶನಿವಾರ ರಾತ್ರಿ 2-40ರ ಸುಮಾರಿಗೆ ತಮ್ಮ ಠಾಣಾ ವ್ಯಾಪ್ತಿಯ ಕೇಂಬ್ರಿಡ್ಜ್ ಬಡಾವಣೆಯ ಡಿಎಡಿ  ಕ್ವಾರ್ಟಸ್‌ ಬಳಿ ನಾಕಾಬಂದಿ ಮಾಡಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ದೊಮ್ಮಲೂರು ಮಾರ್ಗವಾಗಿ ಗೌತಮಪುರದ ನಿವಾಸಕ್ಕೆ ತೆರಳಲು ರೌಡಿಶೀಟರ್‌ ಕಾರ್ತಿಕ್‌ ಬೈಕ್‌ನಲ್ಲಿ ಆಗಮಿಸಿದ್ದಾನೆ. ಹೀಗಾಗಿ ಕಾರ್ತಿಕ್‌ನನ್ನು ಅಡ್ಡಗಟ್ಟಿ ತಪಾಸಣೆ ನಡೆಸಲು ಪೇದೆ ಬಸವರಾಜ್‌ ಖಣಿಜ ಮುಂದಾಗಿದ್ದಾರೆ.

ಇದರಿಂದ ಕುಪಿತಗೊಂಡ ರೌಡಿಶೀಟರ್‌  ಕಾರ್ತಿಕ್‌, ಏರು ಧ್ವನಿಯಲ್ಲಿ ನಾನು ರೌಡಿಶೀಟರ್‌ ನನ್ನ ಅಡ್ಡಹಾಕಿದರೇ,ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಅವಾಜ್‌  ಹಾಕಿದ್ದಾನೆ. ಇದರಿಂದ ಕೆರಳಿದ ಪೇದೆ ಬಸವರಾಜ್‌ ಕಾರ್ತಿಕ್‌ ಬೈಕ್‌ ಕೀ ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಈ ಸಂಧರ್ಭದಲ್ಲಿ ತನ್ನ ಜೇಬಿನಲ್ಲಿದ್ದ ಡ್ರ್ಯಾಗರ್‌ ಹೊರತೆಗೆದು ಪೇದೆಗೆ ಇರಿಯಲು ಮುಂದಾಗಿದ್ದಾನೆ, ಇದರಿಂದ ತಪ್ಪಿಸಿಕೊಳ್ಳಲು ಕೈ ಅಡ್ಡ ಇಟ್ಟ ಪರಿಣಾಮ ಪೇದೆ ಬಸವರಾಜ್‌ ಕೈಗೆ ಡ್ರ್ಯಾಗರ್‌ನಿಂದ ಇರಿದು ಕಾರ್ತಿಕ್‌ ಪರಾರಿಯಾಗಿದ್ದಾನೆ.

ಆರೋಪಿ ಕಾರ್ತಿಕ್‌ ಪರಾರಿಯಾಗುತ್ತಿದ್ದಂತೆ ಪೇದೆ ಬಸವರಾಜ್‌ ವೈರ್‌ಲೈಸ್‌ ಮೂಲಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಹತ್ತಿರದ ಪ್ರದೇಶದಲ್ಲಿಯೇ ರಾತ್ರಿ ಗಸ್ತಿನಲ್ಲಿದ ಹಲಸೂರು ಠಾಣೆ ಇನ್ಸಪೆಕ್ಟರ್‌ ಸುಬ್ರಹ್ಮಣ್ಯ ನೇತೃತ್ವದ ತಂಡ, ಆರೋಪಿ ಕಾರ್ತಿಕ್‌ ಬಂಧನಕ್ಕೆ ಬೆನ್ನಟ್ಟಿದೆ. ಕೇವಲ 15 ನಿಮಿಷಗಳಲ್ಲಿಯೇ ಆರೋಪಿಯನ್ನು ಎಂಜಿರಸ್ತೆ ಸಮೀಪದ ಗುರುದ್ವಾರದ ಬಳಿ ರೌಂಡಪ್‌ ಮಾಡಿದ ಪೊಲೀಸರ ತಂಡ ಶರಣಾಗುವಂತೆ ಕಾರ್ತಿಕ್‌ಗೆ ಸೂಚಿಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಆದರೆ ಶರಣಾಗತಿಗೆ ಒಪ್ಪದ ಕಾರ್ತಿಕ್‌, ಪೊಲೀಸರ ಮೇಲೆ ಪೆಪ್ಪರ್‌ ಸ್ಟ್ರೇ ಹಾಗೂ ಡ್ರ್ಯಾಗರ್‌ ಎಸೆದು ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.ಹೀಗಾಗಿ ಪ್ರಾಣರಕ್ಷಣೆ ಅನಿವಾರ್ಯವಾಗಿ ಇನ್ಸಪೆಕ್ಟರ್‌ ಸುಬ್ರಹ್ಮಣ್ಯ,ತಮ್ಮ ಬಳಿಯಿದ್ದ ರಿವಾಲ್ವರ್‌ನಿಂದ ಕಾರ್ತಿಕ್‌ ಬಲಗಾಲಿಗೆ ಗುಂಡುಹಾರಿಸಿದ್ದಾರೆ. ಗುಂಡೇಟು ತಿಂದ ಕಾರ್ತಿಕ್‌  ಕೆಳಗೆಬಿದ್ದ ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ರೌಡಿಶೀಟರ್‌ ಕಾರ್ತಿಕ್‌ನಿಂದ ಡ್ರ್ಯಾಗರ್‌ನಿಂದ ಇರಿತಕ್ಕೊಳಗಾಗಿರುವ ಪೇದೆ ಬಸವರಾಜ್‌ಗೆ ಹಾಸ್‌ಮ್ಯಾಟ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ  ನೀಡಲಾಗುತ್ತಿದೆ.ಗುಂಡೇಟು ತಿಂದಿರುವ ಕಾರ್ತಿಕ್‌ಗೂ ಚಿಕಿತ್ಸೆಗೆ ದಾಖಲಿಸಿದ್ದು, ಡಿಸಾcರ್ಜ್‌ ಆದ ಬಳಿಕ ಕರ್ತವ್ಯನಿರತ ಸಿಬ್ಬಂದಿ ಕೊಲೆಯತ್ನ ನಡೆಸಿದ ಆರೋಪ ಪ್ರಕರಣ ಸಂಬಂಧ  ವಶಕ್ಕೆ ಪಡೆದುಕೊಳ್ಳಲಾಗುವುದು ಎಂದು ಅಧಿಕಾರಿ  ತಿಳಿಸಿದರು.

ಅತ್ಯಾಚಾರ ಆರೋಪಿ ಕಾರ್ತಿಕ್‌!: ರೌಡಿಶೀಟರ್‌ ಕಾರ್ತಿಕ್‌ ನಗರದಲ್ಲಿ ಹಲವು ವರ್ಷಗಳಿಂದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ. ಅತ್ಯಾಚಾರ, ಕೊಲೆಯತ್ನ, ಡಕಾಯಿತಿ ಸಂಬಂಧ ಕಲಾಸಿಪಾಳ್ಯ, ಹಲಸೂರು  ಹಾಗೂ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದರು.

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.