ಆ್ಯಪ್‌ ಆಧಾರಿತ ಕ್ಯಾಬ್‌ಗಳಿಗೆ ವಿರೋಧ


Team Udayavani, Jan 23, 2017, 11:53 AM IST

cabs.jpg

ಬೆಂಗಳೂರು: ಆ್ಯಪ್‌ ಆಧಾರಿತ ಕ್ಯಾಬ್‌ ಸೇವೆ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅಖೀಲ ಭಾರತ ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಫೆ.15ರಂದು ರಾಜ್ಯಮಟ್ಟದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಅಖೀಲ ಭಾರತ ಸಾರಿಗೆ ನೌಕರರ ಒಕ್ಕೂಟ, ಬೆಂಗಳೂರು ಏರ್‌ಪೋರ್ಟ್‌ ಕೆಎಸ್‌ಟಿಡಿಸಿ ಪ್ರಿ-ಪೇಯ್ಡ ಟ್ಯಾಕ್ಸಿ ಡ್ರೈವರ್ ವೆಲ್‌ಫೇರ್‌ ಅಸೋಸಿಯೇಷನ್‌, ಆಟೋರಿಕ್ಷಾ ಚಾಲಕರ ಯೂನಿಯನ್‌ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕಾನಿಷ್ಕ ಹೋಟೆಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದುಂಡು ಮೇಜಿನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

ಆ್ಯಪ್‌ ಆಧಾರಿತ ಕ್ಯಾಬ್‌ ಸಂಸ್ಥೆಗಳು ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿವೆ. ಇವುಗಳ ವ್ಯಾಪ್ತಿ ನಿಧಾನವಾಗಿ ರಾಜ್ಯದ ಇತರ ನಗರಗಳಿಗೂ ವಿಸ್ತರಿಸುತ್ತಿದೆ. ಇದರಿಂದ ಕಾನೂನು ಚೌಕಟ್ಟಿನಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಟ್ಯಾಕ್ಸಿ, ಕ್ಯಾಬ್‌ಗಳು ತೊಂದರೆ ಅನುಭವಿಸುತ್ತಿವೆ. ಆದ್ದರಿಂದ ಕೂಡಲೇ ಆ್ಯಪ್‌ ಆಧಾರಿತ ವಾಹನಗಳಿಗೆ ಸಾರಿಗೆ ಇಲಾಖೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಫೆ.15ರಂದು ರಾಜ್ಯ ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. 

ಅಖೀಲ ಭಾರತ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಸಮಿತಿ ಸದಸ್ಯ ಕೆ. ಪ್ರಕಾಶ್‌ ಮಾತನಾಡಿ, “”ಬಂಡವಾಳಶಾಹಿ ವ್ಯವಸ್ಥೆ ಸಾರಿಗೆ ವ್ಯವಸ್ಥೆಯನ್ನೂ ನುಂಗಿಹಾಕುತ್ತಿದೆ. ಸರ್ಕಾರ ಟೋಲ್‌ ಮತ್ತು ತೆರಿಗೆ ಕಡಿಮೆ ಮಾಡಲಿ. ಆ್ಯಪ್‌ ಆಧಾರಿತ ಟ್ಯಾಕ್ಸಿಗಳಂತೆ ನಾವೂ ಕಡಿಮೆ ದರದಲ್ಲಿ ಸೇವೆ ನೀಡುತ್ತೇವೆ. ಅದುಬಿಟ್ಟು, ನಿಯಮಬಾಹಿರವಾಗಿ ಕಾರ್ಯಾಚರಣೆಗೆ ಅವಕಾಶ ನೀಡುವ ಮೂಲಕ ನ್ಯಾಯಯುತವಾಗಿ ದುಡಿಯು ವವರ ಮೇಲೆ ಸರ್ಕಾರ ಬರೆ ಎಳೆಯುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು. 

“”ವಾಹನಗಳ ಮೇಲಿನ ಆರ್‌ಟಿಒ ಶುಲ್ಕಗಳನ್ನು ಕೇಂದ್ರ ಸರ್ಕಾರ ಏಕಾಏಕಿ ಹತ್ತಾರುಪಟ್ಟು ಹೆಚ್ಚಿಸಿರುವುದು, ರಸ್ತೆ ಸಾರಿಗೆ ಸುರಕ್ಷತಾ ಮಸೂದೆಗೆ 6ನೇ ತಿದ್ದುಪಡಿಗೆ ಸಿದ್ಧತೆ ನಡೆಸಿರುವುದನ್ನು ಖಂಡಿಸಲಾಗುವುದು,” ಎಂದು ಪ್ರಕಾಶ್‌ ಇದೇ ವೇಳೆ ತಿಳಿಸಿದರು. 

ರಾಜೀವ್‌ಗಾಂಧಿ ಆಟೋ ಚಾಲಕರ ಸಂಘದ ಕಾರ್ಯದರ್ಶಿ ಬಿ. ಚಂದ್ರಶೇಖರ್‌ ಮಾತನಾಡಿ, “”ನಗರಕ್ಕೆ ಸೀಮಿತವಾಗಿದ್ದ ಓಲಾ, ಉಬರ್‌ನಂತಹ ಟ್ಯಾಕ್ಸಿಗಳು ಹುಬ್ಬಳ್ಳಿ, ಮೈಸೂರಿನಂತಹ ರಾಜ್ಯದ ಇತರ ನಗರಗಳಿಗೂ ಕಾರ್ಯಾಚರಣೆ ಶುರುಮಾಡಿವೆ. ಆದರೆ, ಸಾರಿಗೆ ಅಧಿಕಾರಿಗಳು ಕಡಿವಾಣ ಹಾಕುವಲ್ಲಿ ವಿಫ‌ಲರಾಗುತ್ತಿ ದ್ದಾರೆ,” ಎಂದು ಬೇಸರ ವ್ಯಕ್ತಪಡಿಸಿದರು. ಪದಾಧಿಕಾರಿಗಳಾದ ರುದ್ರಮೂರ್ತಿ, ಬಿ.ವಿ. ರಾಘವೇಂದ್ರ, ಮಂಜುನಾಥ್‌ ಮತ್ತಿತರರು ಭಾಗವಹಿಸಿದ್ದರು.

ಟ್ಯಾಕ್ಸಿ ಚಾಲಕರಿಗೆ ಎಚ್‌ಡಿಕೆ ಬೆಂಬಲ
ಬೆಂಗಳೂರು:
ಆ್ಯಪ್‌ ಆಧಾರಿತ ಟ್ಯಾಕ್ಸಿಗಳ ಚಾಲಕರಿಗೆ ಆಯಾ ಕಂಪೆನಿಗಳು ನೀಡುತ್ತಿರುವ ಕಿರುಕುಳ ಸೇರಿದಂತೆ ಟ್ಯಾಕ್ಸಿ ಚಾಲಕರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಸಾರಿಗೆ ಸಚಿವರ ಜತೆ ಮಾತುಕತೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ನಗರದ ಪುರಭವನದ ಎದುರು ಭಾನುವಾರ ಕಿರಣ್‌ಗೌಡ ನೇತೃತ್ವದ ಕರುನಾಡ ಟ್ಯಾಕ್ಸಿ ಚಾಲಕರ ಮತ್ತು ಮಾಲಿಕರ ಸಂಘ ಹಾಗೂ ತನ್ವೀರ್‌ ಪಾಷಾ ನೇತೃತ್ವದ ಒಟಿಯು ಚಾಲಕರು ಮತ್ತು ಮಾಲಿಕರ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸೋಮವಾರವೇ ಚಾಲಕರ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತಂತೆ ಸಾರಿಗೆ ಸಚಿವರ ಜತೆ ಸಭೆ ನಡೆಸಲಾಗುವುದು. ಆಡಳಿತ ಸಂಸ್ಥೆಗಳ ಸ್ಪರ್ಧೆಯಿಂದಾಗಿ ಚಾಲಕರು ಬೀದಿಗೆ ಬರುವ ಸ್ಥಿತಿ ಉಂಟಾಗಿದೆ. ಎಲ್ಲ ಸಂದರ್ಭದಲ್ಲೂ ಚಾಲಕರ ಪರವಾಗಿ ನಿಂತು, ನಿಮ್ಮ ಧ್ವನಿಯಾಗುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ಪ್ರಮುಖವಾಗಿ ಓಲಾಹಾಗೂ ಉಬರ್‌ ಸಂಸ್ಥೆಗಳು ಪರಸ್ಪರ ಸ್ಪರ್ಧೆಗಿಳಿದಿವೆ. ಇದರ ನಡುವೆ ಆ ಸಂಸ್ಥೆಗಳಡಿ ಟ್ಯಾಕ್ಸಿಗಳನ್ನು ಓಡಿಸುವ ಚಾಲಕರು ಅನ್ಯಾಯಕ್ಕೊಳಗಾಗುತ್ತಿದ್ದಾರೆ. ಸಂಸ್ಥೆಗಳು ಕಮಿಷನ್‌ ದರವನ್ನೂ ಹೆಚ್ಚಳ ಮಾಡಿದ್ದು, ಕೊಡುಗೆಗಳ ಹೆಸರಲ್ಲಿ ಚಾಲಕರನ್ನು ದೋಚುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಮುಧೋಳ: ಮರಳುಚೋರರಿಂದ ಹಗಲು ದರೋಡೆ

ಮುಧೋಳ: ಮರಳುಚೋರರಿಂದ ಹಗಲು ದರೋಡೆ

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

7(1)

Gangolli ಬಂದರಿಗೆ ಮರೀಚಿಕೆಯಾದ ಅಭಿವೃದ್ಧಿ

4

UV Fusion: ಕಣ್ಮರೆಯಾಗುತ್ತಿರುವ ಪರಂಪರಾನುಗತ ವೃತ್ತಿಗಳು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.