ಮನೆಗಳ್ಳ ಎಮ್ಮೆ ಸಂತೋಷನ ಬಂಧನ


Team Udayavani, Nov 17, 2019, 3:05 AM IST

manegalla

ಬೆಂಗಳೂರು: ಜಾಮೀನು ಆಧಾರದಲ್ಲಿ ಜೈಲಿನಿಂದ ಹೊರಗಡೆ ಬಂದ 20 ದಿನಗಳ ಅಂತರದಲ್ಲೇ ಐದು ಮನೆಕಳ್ಳತನ ಮಾಡಿ ಚಿನ್ನಾಭರಣ ದೋಚಿದ್ದ ಸಂತೋಷ್‌ ಅಲಿಯಾಸ್‌ ಎಮ್ಮೆ (32) ಎಂಬಾತನನ್ನು ಬಂಧಿಸುವಲ್ಲಿ ತಲಘಟ್ಟಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸಂತೋಷ್‌ ಬಂಧನದಿಂದ ಮೂರು ಮನೆಗಳವು ಪ್ರಕರಣಗಳು ಪತ್ತೆಯಾಗಿವೆ.

ಸಂತೋಷ್‌ನಿಂದ ಕದ್ದ ಚಿನ್ನಾಭರಣ ಸ್ವೀಕರಿಸಿ ಅಪರಾಧ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಿರಿಯಾಪಟ್ಟಣದ ಕೃಷ್ಣಮೂರ್ತಿ (45) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಗಳಿಂದ 27 ಲಕ್ಷ ರೂ. ಮೌಲ್ಯದ 700 ಗ್ರಾಂ. ಚಿನ್ನಾಭರಣ ಐದು ಕೆ.ಜಿ. ಬೆಳ್ಳಿ ವಸ್ತುಗಳು, ಒಂದು ಬೈಕ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಏಳೆಂಟು ವರ್ಷಗಳಿಂದ ಮನೆಕಳ್ಳತನವನ್ನೇ ಕಸುಬು ಮಾಡಿಕೊಂಡಿರುವ ಸಂತೋಷ್‌, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 70ಕ್ಕೂ ಅಧಿಕ ಪ್ರಕರಣ ಆರೋಪಿಯಾಗಿದ್ದಾನೆ. ಐಶಾರಾಮಿ ಜೀವನ ಹಾಗೂ ದುಶ್ಚಟಗಳಿಗಾಗಿ ಹಣ ಖರ್ಚು ಮಾಡಲು ಕಳವು ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ.

ಹಗಲು ವೇಳೆಯಲ್ಲಿ ಬೈಕ್‌ನಲ್ಲಿ ದಕ್ಷಿಣ ವಿಭಾಗಗಳಲ್ಲಿ ತಿರುಗಾಡುತ್ತಿದ್ದ ಆರೋಪಿ ಸಂತೋಷ್‌, ಮನೆ ಮುಂದೆ ಬಿಡಿಸಿಟ್ಟ ರಂಗೋಲಿ , ದಿನಪತ್ರಿಕೆಗಳು ಹಾಗೆ ಉಳಿದುಕೊಂಡಿರುವುಂತಹ ಕೆಲವು ಮನೆಗಳನ್ನು ಟಾರ್ಗೆಟ್‌ ಮಾಡಿಕೊಳ್ಳುತ್ತಿದ್ದ. ಪುನಃ ರಾತ್ರಿ ವೇಳೆ ಒಬ್ಬನೇ ತೆರಳಿ ಬೀಗ ಮುರಿದು ಚಿನ್ನಾಭರಣ ದೋಚುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಜತೆ ಕಳ್ಳತನ ಮಾಡಲು ಯಾರನ್ನಾದರೂ ಸೇರಿಸಿಕೊಂಡರೆ ಪಾಲು ನೀಡಬೇಕು ಎಂದು ಲೆಕ್ಕಾಚಾರ ಹಾಕುತ್ತಿದ್ದ. ಹೀಗಾಗಿ, ಒಬ್ಬನೇ ಕಳ್ಳತನ ಮಾಡಿ ಪಿರಿಯಾ ಪಟ್ಟಣದ ಕೃಷ್ಣಮೂರ್ತಿ ಬಳಿ ನೀಡಿ ಹಣ ಪಡೆಯುತ್ತಿದ್ದ. ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದ. ಬಿಡುಗಡೆ ಆಗಿದ್ದ ಕೆಲವೇ ದಿನಗಳಲ್ಲಿ ಐದು ಮನೆಗೆ ಕನ್ನ ಹಾಕಿದ್ದಾನೆ. 27ನೇ ದಿನಕ್ಕೆ ಆತನನ್ನು ಬಂಧಿಸಿ ಪುನ; ಜೈಲಿಗೆ ಕಳುಹಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ತಲಘಟ್ಟ ಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕಳವು ಸೇರಿದಂತೆ ವಿವಿಧ ಮಾದರಿಯ 26 ಪ್ರಕರಣಗಳಿಗೆ ಸಂಬಂಧಿಸಿದಂತೆ, ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿ ಟಿ. ಮಹದೇವ್‌, ಇನ್ಸ್‌ಪೆಕ್ಟರ್‌ ರಾಮಪ್ಪ ಬಿ. ಗುತ್ತೇರ್‌ ನೇತೃತ್ವದ ತಂಡವು, ಚಿನ್ನಾಭರಣ, ಬೆಳ್ಳಿ ವಸ್ತುಗಳು, ಎಂಟು ಬೈಕ್‌ ಸೇರಿ 58.85 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕೃತ್ಯಗಳಿಗೆ ಸಂಬಂಧಿಸಿದಂತೆ ಪ್ರಕರಣಗಳಿಗೆ ಸಂಬಂಧಿಸಿದಂತೆ 14 ಮಂದಿಯನ್ನು ವಸ್ತುಗಳನ್ನು ಬಂಧಿಸಿ 14 ಮಂದಿಯನ್ನು ಬಂಧಿಸಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.