ಸಂಬಂಧಿಯ ಕೊಂದಿದ್ದ ಇಬ್ಬರ ಬಂಧನ
Team Udayavani, Oct 9, 2018, 12:19 PM IST
ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಎಲೆಕ್ಟ್ರಿಶಿಯನ್ ಮಿಥಾಯಿ ಚಂದ್ರಶೇಖರ್ ಕೊಲೆ ಪ್ರಕರಣವನ್ನು ಭೇದಿಸಿರುವ ಬೈಯಪ್ಪನಹಳ್ಳಿ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೀಮಂತ್ ಕುಮಾರ್ ಸಿಂಗ್, ಬಿರೇಶ್ ಸಿಂಗ್ ಬಂಧಿತರು. ಕಗ್ಗದಾಸಪುರ ಮುಖ್ಯ ರಸ್ತೆಯ ಪೂರ್ವಂಕರ ಸೀಸನ್ ಪ್ರಾಜೆಕ್ಟ್ ಕೊಳಚೆ ನೀರು ಶುದ್ಧೀಕರಣ ಘಟಕದಲ್ಲಿ ಸೆ.21ರಂದು ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಕೊಲೆ ಪ್ರಕರಣ ಪತ್ತೆಯಾಗಿತ್ತು.
ಈ ಕುರಿತು ನಾಪತ್ತೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ ಪೊಲೀಸರು, ಅನುಮಾನದ ಮೇರೆಗೆ ಚಂದ್ರಶೇಖರ್ ಸಹೋದರ ಸಂಬಂಧಿಗಳಾದ ಇಬ್ಬರೂ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ವಿಚಾರ ಬಾಯ್ಬಿಟ್ಟಿದ್ದಾರೆ. ಆರೋಪಿ ಸೀಮಂತ್ ಕುಮಾರ್ ಪತ್ನಿ ಜೊತೆ ಮಿಥಾಯಿ ಚಂದ್ರಶೇಖರ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ.
ಇದರಿಂದ ಕೋಪಗೊಂಡಿದ್ದ ಸೀಮಂತ್, ತನ್ನ ಸ್ನೇಹಿತ ಬೀರೇಶ್ ಜತೆಗೂಡಿ ಚಂದ್ರುಗೆ ಕಂಠಪೂರ್ತಿ ಮದ್ಯ ಕುಡಿಸಿ ಕತ್ತುಬಿಗಿದು ಕೊಲೆಗೈದಿದ್ದರು. ಬಳಿಕ ಒಂದು ದಿನ ಪೂರ್ತಿ ಕೊಠಡಿಯಲ್ಲಿಯೇ ಶವ ಇಟ್ಟುಕೊಂಡಿದ್ದ ಆರೋಪಿಗಳು, ಕೊಳಚೆ ನೀರು ಶುದ್ಧೀಕರಣ ಘಟಕದ ಪೈಪ್ಗೆ ಶವದ ಮೂಟೆ ಹಾಕಿದ್ದರು. ಒಂದು ತಿಂಗಳ ಬಳಿಕ ಶವದ ವಾಸನೆ ಬಂದಾಗ, ಅಲ್ಲಿನ ವ್ಯವಸ್ಥಾಪಕ ಪರಿಶೀಲಿಸಿದಾಗ ಗುರುತು ಸಿಗದ ರೀತಿಯಲ್ಲಿ ಶವ ಪತ್ತೆಯಾಗಿತ್ತು ಎಂದು ಪೊಲೀಸರು ತಿಳಿಸಿದರು.
ಆರೋಪಿಗಳು ಚಂದ್ರಶೇಖರ್ ಕೊಲೆ ಮಾಡಿದ ಬಳಿಕ ರೂಂ ಖಾಲಿ ಮಾಡಿಕೊಂಡು ಹೊರಟು ಹೋಗಿದ್ದರು. ಸ್ಥಳೀಯರ ನೀಡಿದ ಮಾಹಿತಿ ಕಲೆ ಹಾಕಿ ಆರೋಪಿಗಳ ದೂರವಾಣಿ ಕರೆಗಳನ್ನು ಆಧರಿಸಿ ಬಂಧಿಸಿದಾಗ ಕೊಲೆಗೈದಿರುವುದನ್ನು ಒಪ್ಪಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.