ಹತ್ಯೆ ಹಿಂದೆ ಹಿಂದೂ ಭಯೋತ್ಪಾದಕರು


Team Udayavani, Sep 18, 2017, 12:01 PM IST

agni-sridhar.jpg

ಬೆಂಗಳೂರು: ಭಾನುವಾರ ನಗರದ ಹೋಟೆಲ್‌ನಲ್ಲಿ ವಿಚಾರವಾದಿಗಳ ವೇದಿಕೆ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ 2016ನೇ ಸಾಲಿನ ಪೆರಿಯಾರ್‌ ಪ್ರಶಸ್ತಿಯನ್ನು ಕೋಟಗಾನಹಳ್ಳಿ ರಾಮಯ್ಯ ಮತ್ತು 2017ನೇ ಸಾಲಿನ ಪ್ರಶಸ್ತಿಯನ್ನು ಮರಣೋತ್ತರವಾಗಿ ಗೌರಿ ಲಂಕೇಶ್‌ ಅವರಿಗೆ ಸಮರ್ಪಿಸಲಾಯಿತು. 

ಸಮಾರಂಭದಲ್ಲಿ ಮಾತನಾಡಿದ ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಅನಂತಮೂರ್ತಿಯವರ ಪುಸ್ತಕದ ಒಂದು ಮಾತನ್ನು ಕಲಬುರ್ಗಿ ಅವರು ಸಭೆಯಲ್ಲಿ ಉಲ್ಲೇಖ ಮಾಡಿದ್ದರು. ಅದೇ ಅವರ ಹತ್ಯೆಗೆ ಕಾರಣವಾಯಿತು. ಕಲ್ಬುರ್ಗಿ ಮತ್ತು ಗೌರಿಯ ಹಂತಕರು ಹಿಂದೂ ಭಯೋತ್ಪಾದಕರಾಗಿದ್ದಾರೆ. ಅವರನ್ನು ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಮುಂದೆ ಮತ್ತೂಬ್ಬ ವಿಚಾರವಾದಿ ಹತ್ಯೆಯಾಗಲಿದೆ ಎಂದರು.

ಸ್ವಾಮೀಜಿ ಹತ್ಯೆ ಹೇಳಿಕೆ ನೀಡಿದ್ದರು: ಕಲಬುರ್ಗಿ ಹತ್ಯೆಗೆ ಹದಿನೈದು ದಿನದ ಮುಂಚೆ ಪ್ರಣವಾನಂದ ಸ್ವಾಮೀಜಿ ಸುದ್ದಿಗೋಷ್ಠಿ ಕರೆದು ಐದು ಜನರ ಪ್ರಾಣ ತೆಗೆಯುತ್ತೇನೆ ಎಂದಿದ್ದರು. ಈಗ ಇಬ್ಬರ ಕೊಲೆಯಾಗಿದೆ. ಮುಂದೆ ನಾನು ಮತ್ತು ಭಗವಾನ್‌ ಲಿಸ್ಟ್‌ನಲ್ಲಿದ್ದೇವೆ ಎಂದ ಅವರು, ಹತ್ಯೆ ಪ್ರಾಯೋಜಕರ ವಿಚಾರಣೆ ನಡೆಸಿದರೆ ಹಂತಕರು ಯಾರೆನ್ನುವುದು ಗೊತ್ತಾಗಲಿದೆ. ಹತ್ಯೆ ಪ್ರಾಯೋಜಕರು ಕರ್ನಾಟಕದವರು. ಆದರೆ ಎಲ್ಲಿಂದಲೋ ಬಾಡಿಗೆ ಕೊಲೆಗಾರರನ್ನು ತಂದಿರಬಹುದು.

ಗೌರಿ ಹತ್ಯೆಗೆ ನ್ಯಾಯ ಸಿಗಲಿದೆ ಅನ್ನೋ ನಂಬಿಕೆ ನನಗಿಲ್ಲ. ಸನಾತನ ಸಂಸ್ಕೃತಿಯಲ್ಲಿ ಹಿಂಸೆಯ ಎರಡು ಮಾದರಿಗಳಿವೆ, ಒಂದು ವಧೆ, ಮತ್ತೂಂದು ಬಲಿ. ಈ ಬಲಿ ಸಂಸ್ಕೃತಿ ತನ್ನ ಹಿತಾಸಕ್ತಿಗಾಗಿ ತನ್ನವರನ್ನೆ ಅಂತ್ಯಗೊಳಿಸುವುದು.ಮತ್ತೂಂದು ವಧೆ ಸಂಸ್ಕೃತಿಯೂ ತನ್ನ ಹಿತಾಸಕ್ತಿಗಾಗಿ ಅನ್ಯರನ್ನು ಬಲಿ ಕೊಡುವುದು ಎಂದು ಹೇಳಿದರು.

ಪತ್ರಕರ್ತ ಅಗ್ನಿ ಶ್ರೀಧರ್‌ ಮಾತನಾಡಿ, ಮೀಸಲಾತಿ ಇಲ್ಲದಿದ್ದರೆ ದಲಿತರು ಒಂದು ಕಾರ್ಪೊರೇಟರ್‌ ಸ್ಥಾನವನ್ನೂ ಗೆಲ್ಲಲು ಸಾಧ್ಯವಿಲ್ಲ. ಶಾಸಕರಾಗುವುದು ಕನಸಿನ ಮಾತು. ಮೀಸಲಾತಿ ಶಿಕ್ಷಣ ಕ್ಷೇತ್ರಕ್ಕೆ ಮಾತ್ರವೆಂದೇ ತಿಳಿದಿರುವ ದಲಿತರಿಗೆ ಅದರ ಮಹತ್ವದ ಅರಿವಿಲ್ಲ ಎಂದರು.

ಕಲಬುರ್ಗಿ ಅವರ ಕೊಲೆಯಾಗಿ ಎರಡು ವರ್ಷ ಆದರೂ ಇನ್ನೂ ಪ್ರಕರಣ ಪತ್ತೆಯಾಗಿಲ್ಲ. ಆಗಲೇ ಗೌರಿ ಲಂಕೇಶ್‌ ಹತ್ಯೆ ಆಗಿದೆ. ರಾಜ್ಯದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ ಎಂದರು. ಸಮಾರಂಭದಲ್ಲಿ ಆರ್‌ಪಿಐ ಮುಖಂಡ ಎಂ.ವೆಂಕಟಸ್ವಾಮಿ, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್‌, ಲೋಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.