![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-415x271.jpg)
ಪೂರ್ಣ ಹಣ ಕೊಡದೆ ಅವಮಾನಿಸಿದ ಕೇಂದ್ರ
Team Udayavani, Feb 16, 2018, 12:51 PM IST
![Krishna-Byreg.jpg](https://www.udayavani.com/wp-content/uploads/2018/02/16/Krishna-Byreg-401x465.jpg)
ಬೆಂಗಳೂರು: ಉಪ ನಗರ ರೈಲು ಯೋಜನೆಗೆ 17 ಸಾವಿರ ಕೋಟಿ ರೂ. ನೀಡಿದ್ದೇವೆಂದು ಹೇಳಿರುವ ಕೇಂದ್ರ ಸರ್ಕಾರ ಕೇವಲ ಒಂದು ಕೋಟಿ ರೂ. ಮಂಜೂರು ಮಾಡುವ ಮೂಲಕ ಕನ್ನಡಿಗರ ಮೂಗಿಗೆ ತುಪ್ಪ ಸವರಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಆರಂಭಿಸಿರುವ ಯೋಜನೆಯ ಲಾಭ ಪಡೆಯಲು ಬಜೆಟ್ನಲ್ಲಿ ಘೋಷಣೆ ಮಾಡಿ ಹಣ ಬಿಡುಗಡೆ ಮಾಡದೇ ಕರ್ನಾಟಕವನ್ನು ನಿರ್ಲಕ್ಷಿಸಿ ಕನ್ನಡಿಗರಿಗೆ ಅವಮಾನ ಮಾಡಿದೆ ಎಂದು ದೂರಿದರು.
ರಾಜ್ಯದ ಯೋಜನೆ: ಉಪ ನಗರ ರೈಲು ಯೋಜನೆ ಆರಂಭಿಸುವ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ ನೈರುತ್ಯ ರೈಲ್ವೆ ಜತೆ ಸೇರಿ, ರೈಟ್ಸ್ ಸಂಸ್ಥೆ ಮೂಲಕ ಸಮೀಕ್ಷೆ ನಡೆಸಿದೆ. ಅದರಂತೆ ಯೋಜನೆಗೆ 10,929 ಕೋಟಿ ರೂ. ಯೋಜನಾ ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದೆ. ಹಾಗೇ ಯೋಜನೆಗಾಗಿ ಕಳೆದ ಬಜೆಟ್ನಲ್ಲಿ 345 ಕೋಟಿ ರೂ. ಮೀಸಲಿಟ್ಟಿರುವ ರಾಜ್ಯ ಸರ್ಕಾರ, ಈ ಬಾರಿಯೂ 350 ಕೋಟಿ ರೂ. ಮೀಸಲಿಡಲು ತೀರ್ಮಾನಿಸಿದೆ.
ಮೊದಲ ಹಂತದಲ್ಲಿ ರಾಜ್ಯ ಸರ್ಕಾರ 700 ಕೋಟಿ ರೂ. ನೀಟಲು ಸಿದ್ಧವಿದೆ. ಅದೇ ರೀತಿ 50:50ರ ಅನುಪಾತದಲ್ಲಿ ಕೇಂದ್ರ ಕೂಡ 700 ಕೋಟಿ ರೂ. ಬಿಡುಗಡೆ ಮಾಡಬೇಕು. ಆದರೆ, ಬಜೆಟ್ನಲ್ಲಿ 17 ಸಾವಿರ ಕೋಟಿ ರೂ. ಘೋಷಿಸಿ ಪ್ರಚಾರ ಪಡೆದ ಮೋದಿ ಸರ್ಕಾರ, ಈಗ ಕೇವಲ ಒಂದು ಕೋಟಿ ರೂ. ಮೀಸಲಿಟ್ಟು ರಾಜ್ಯದ ಜನರನ್ನು ಮೂರ್ಖರನ್ನಾಗಿಸಿದೆ ಎಂದು ದೂರಿದರು.
ಹಣ ನೀಡುವುದಾಗಿ ಸುಳ್ಳು ಹೇಳಿಕೆ: ಹಾಗೇ, “ರಾಜ್ಯ ಸರ್ಕಾರ ಬಯಸಿದರೆ ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ ಹಣ ನೀಡುವುದಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸುಳ್ಳು ಹೇಳಿದ್ದಾರೆ. ಬೆಳ್ಳಂದೂರು ಮತ್ತು ವರ್ತೂರು ಕೆರೆ ಅಭಿವೃದ್ಧಿಗೆ 559 ಕೋಟಿ ರೂ. ಪ್ರಸ್ತಾವನೆಯನ್ನು 2016ರ ಜನವರಿಯಲ್ಲೇ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿತ್ತು.
ಆದರೆ ತನ್ನಲ್ಲಿ ಹಣದ ಕೊರತೆ ಇರುವುದರಿಂದ ರಾಜ್ಯ ಸರ್ಕಾರವೇ ವೆಚ್ಚ ಭರಿಸಿಕೊಳ್ಳಬೇಕು ಎಂಧು ಅದೇ ವರ್ಷ ಫೆಬ್ರವರಿಯಲ್ಲಿ ಕೇಂದ್ರ ಪ್ರತಿಕ್ರಿಯಿಸಿದೆ,’ ಎಂದು ಆರೋಪಿಸಿದ ಸಚಿವ ಕೃಷ್ಣಭೈರೇಗೌಡ, ಈ ಕುರಿತು ನಡೆದ ಪತ್ರ ವ್ಯವಹಾರದ ದಾಖಲೆ ಬಿಡುಗಡೆ ಮಾಡಿದರು.
ಈ ಬೆಳವಣಿಗೆಯಿಂದಾಗಿ ಕೇಂದ್ರವನ್ನು ನಂಬಿಕೊಳ್ಳದೆ, ರಾಜ್ಯ ಸರ್ಕಾರ ಬೆಳ್ಳಂದೂರು ಕೆರೆ ಅಭಿವೃದ್ಧಿಗೆ ಈಗಾಗಲೇ ತಾತ್ಕಾಲಿಕವಾಗಿ 50 ಕೋಟಿ ರೂ. ಮೀಸಲಿಟ್ಟಿದೆ. ಅಲ್ಲದೆ ಬೆಳ್ಳಂದೂರು ಕೆರೆ ಸೇರುವ ತ್ಯಾಜ್ಯ ನೀರು ಸಂಸ್ಕರಣೆಗೆ 1388 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯುತ್ತಿದೆ. 2020ರ ವೇಳೆಗೆ ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ಬೆಂಗಳೂರು ದೇಶದ ಮೊದಲ ನಗರವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-415x271.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು](https://www.udayavani.com/wp-content/uploads/2024/07/7-150x90.jpg)
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
![6](https://www.udayavani.com/wp-content/uploads/2024/07/6-150x90.jpg)
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
![4](https://www.udayavani.com/wp-content/uploads/2024/07/4-150x90.jpg)
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
![Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್ ](https://www.udayavani.com/wp-content/uploads/2024/07/5-150x90.jpg)
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
![2](https://www.udayavani.com/wp-content/uploads/2024/07/2-150x90.jpg)
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
MUST WATCH
ಹೊಸ ಸೇರ್ಪಡೆ
![ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ](https://www.udayavani.com/wp-content/uploads/2024/07/harmonium-150x98.jpg)
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
![ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್](https://www.udayavani.com/wp-content/uploads/2024/07/9-150x90.jpg)
ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-150x83.jpg)
Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!](https://www.udayavani.com/wp-content/uploads/2024/07/team-india-150x100.jpg)
ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.