ಮತ್ತೆ ಮಳೆಯಲ್ಲಿ ಮಿಂದ ನಗರ


Team Udayavani, Sep 26, 2017, 11:29 AM IST

Annamma-Temple-(1)-rain-aga.jpg

ಬೆಂಗಳೂರು: ವಾರದ ಬಿಡುವಿನ ಬಳಿಕ ಭಾನುವಾರ ತಡರಾತ್ರಿಯಿಂದ ಸೋಮವಾರ ಬೆಳಗಿನವರೆಗೂ ಮಳೆ ಸುರಿದಿದ್ದು, ನಗರದ ಜನತೆ ಮತ್ತೂಮ್ಮೆ ಇಡೀ ರಾತ್ರಿ ನಿದ್ದೆಗೆಟ್ಟಿದ್ದಾರೆ. ರಾತ್ರಿ ಪೂರಾ ಸುರಿದ ಮಳೆಯಿಂದಾಗಿ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ನೀರು ನಿಂತಿದ ಪರಿಣಾಮ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದರು.

ಹಾಗೇ ಗಾಂಧಿನಗರದ ಅಣ್ಣಮ್ಮ ದೇವಿ ದೇವಾಲಯಕ್ಕೆ ನೀರು ನುಗ್ಗಿ, ಶರನ್ನವರಾತ್ರಿ ವಿಶೇಷ ಪೂಜೆ ವಿಳಂಬವಾಯಿತು. ಭಾನುವಾರ ತಡರಾತ್ರಿ 1 ಗಂಟೆಗೆ ಆರಂಭವಾದ ಮಳೆ, ಸೋಮವಾರ ಬೆಳಗ್ಗೆ 9.30ರವರೆಗೂ ಬಿಡಲೇ ಇಲ್ಲ. ಪರಿಣಾಮ ಬೆಳಗ್ಗೆ ಶಾಲೆ-ಕಾಲೇಜು ಹಾಗೂ ಕಚೇರಿಗಳಿಗೆ ಹೋಗುವವರಿಗೆ ತೊಂದರೆಯಾಯಿತು.

ಶಿವಾನಂದ ವೃತ್ತ, ಮಲ್ಲೇಶ್ವರ, ಯಶವಂತಪುರ, ಶಾಂತಿನಗರ, ಜಯನಗರ, ವಿಜಯನಗರ, ಬಸವನಗುಡಿ, ಶೇಷಾದ್ರಿಪುರ, ಮೇಖೀ ವೃತ್ತ, ಹೆಬ್ಟಾಳ, ಬನಶಂಕರಿ, ಸೋನಿ ವರ್ಲ್ಡ್ ಜಂಕ್ಷನ್‌, ಶ್ರೀನಿವಾಗಿಲು ಜಂಕ್ಷನ್‌, ಕಾಫಿಡೇ ಜಂಕ್ಷನ್‌ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು.

ಎರಡು ಮರ ಧರೆಗೆ: ಯಲಹಂಕ ಹಾಗೂ ಜಯನಗರ 7ನೇ ಬ್ಲಾಕ್‌ನಲ್ಲಿ ಸೋಮವಾರ ಬೆಳಗ್ಗೆ ತಲಾ ಒಂದು ಬೃಹದಾಕಾರದ ಮರಗಳು ಧರೆಗುರುಳಿದ್ದು, ಪಾಲಿಕೆಯ ಅಧಿಕಾರಿಗಳು ಕೂಡಲೇ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಇದರೊಂದಿಗೆ ಕೆಲವೆಡೆ ಮುರಿದು ಬಿದ್ದಿದ್ದ ಮರದ ಕೊಂಬೆಗಳನ್ನೂ ತೆರವುಗೊಳಿಸಲಾಗಿದೆ.

ಎರಡು ದಿನ ಮಳೆ ವಾತಾವರಣ: ಭಾನುವಾರ ತಡರಾತ್ರಿ ನಗರದಲ್ಲಿ 14.5 ಮಿ.ಮೀ ಮಳೆಯಾಗಿದ್ದು, ಇನ್ನೂ ಎರಡು ದಿನಗಳ ಕಾಲ ನಗರದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ. ನಗರದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಣ್ಣಮ್ಮನ ಗುಡಿ ಹೊಕ್ಕ ಗಂಗೆ: ರಾತ್ರಿಯಿಡೀ ನಿಲ್ಲದೆ ಮಳೆ ಸುರಿದ ಪರಿಣಾಮ ಗಾಂಧಿನಗರದ ಪ್ರಸಿದ್ಧ ಅಣ್ಣಮ್ಮ ದೇವಿ ದೇವಾಲಯದ ಗರ್ಭಗುಡಿಗೆ ಮಳೆ ನೀರು ನುಗ್ಗಿ, ವಿಶೇಷ ಪೂಜೆಗೆ ವಿಳಂಬವಾಯಿತು. ಮುಂಜಾನೆಯೇ ದೇವಾಲಯಕ್ಕೆ ಬಂದ ಪಾಲಿಕೆ ಸಿಬ್ಬಂದಿ, ಪಂಪಸ್‌ಸೆಟ್‌ಗಳ ಮೂಲಕ ಮಳೆ ನೀರನ್ನು ಹೊರಹಾಕಿದರು. ಶರನ್ನವರಾತ್ರಿ ಹಿನ್ನೆಲೆಯಲ್ಲಿ ಭಾನುವಾರ ಅಣ್ಣಮ್ಮ ದೇವಿಗೆ ಗಾಯತ್ರಿ ಅಲಂಕಾರ ಮಾಡಲಾಗಿತ್ತು.

ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಮಳೆನೀರು ಗರ್ಭಗುಡಿ ಪ್ರವೇಶಿಸಿದ್ದರಿಂದ ಬೆಳಗ್ಗೆ 6.30ಕ್ಕೆ ನಡೆಯಬೇಕಿದ್ದ ಪೂಜೆಗೆ ತಡವಾಗಿದ್ದು, ಮತ್ತೆ ದೇವಾಲಯಕ್ಕೆ ಮಳೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳುವುದಾಗಿ ಪಾಲಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಅರ್ಚಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.