ಸಣ್ಣ ತನದಿಂದ ಮಂದಿರ ನಿರ್ಮಾಣ ವಿಳಂಬ


Team Udayavani, Jul 7, 2018, 2:15 PM IST

sannatana.jpg

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬೇಕಾದ ಇಟ್ಟಿಗೆ, ಕಲ್ಲು ಕಂಬಗಳು ಸಿದ್ದಗೊಂಡಿದ್ದು, ಸಣ್ಣತನದ ರಾಜಕಾರಣ ಮಂದಿರ ನಿರ್ಮಾಣಕ್ಕೆ ಅಡ್ಡಿಯಾಗುತ್ತಿದೆ ಎಂದು ವಿಶ್ರಾಂತ ರಾಜ್ಯಪಾಲ ಡಾ.ಎಂ.ರಾಮಾ ಜೋಯಿಸ್‌ ವಿಷಾದ ವ್ಯಕ್ತಪಡಿಸಿದರು.

ಭಾರತೀಯ ವಿದ್ಯಾಭವನ ಹಾಗೂ ಇಸ್ಕಾನ್‌ ಬೆಂಗಳೂರು ವತಿಯಿಂದ ಇಸ್ಕಾನ್‌ ಮಲ್ಟಿ ವಿಷನ್‌ ಥಿಯೇಟರ್‌ನಲ್ಲಿ ಆಯೋಜಿಸಿರುವ “ರಾಮಾಯಣ ಸಂದೇಶ’, ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೆಲವು ರಾಜಕಾಣಿಗಳ ಸಣ್ಣತನದ ಫ‌ಲವಾಗಿ ರಾಮಮಂದಿರ ನಿರ್ಮಾಣ ವಿಳಂಬವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದ್ದು, ಅತಿ ಶೀಘ್ರದಲ್ಲಿ ಇತ್ಯರ್ಥವಾಗುವ ಸಾಧ್ಯತೆ ಇದೆ. ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಟ್ಟಿಗೆ, ಕಲ್ಲು ಕಂಬ ಸೇರಿದಂತೆ ಕೆತ್ತನೆಯ ಕಾರ್ಯಗಳು ಪೂರ್ಣಗೊಂಡಿದೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.

ಶ್ರೀರಾಮ ತನ್ನ ಕಷ್ಟದ ದಿನಗಳಲ್ಲೂ ಧರ್ಮದಂತೆ ನಡೆದುಕೊಂಡು, ರಾಜಧರ್ಮ ಪಾಲಿಸಿದ್ದಾನೆ. ಸಂವಿಧಾನದಲ್ಲಿ ಎಲ್ಲ ಗಂಡುಮಕ್ಕಳಿಗೂ ಸಮಾನ ಹಕ್ಕಿದ್ದರೆ ರಾಜಧರ್ಮದಲ್ಲಿ ಹಿರಿಯ ಮಗನಿಗೆ ವಿಶೇಷ ಆದ್ಯತೆ ಇರುತ್ತದೆ. ದಶರಥ ಮಹಾರಾಜನ ಹಿರಿಯ ಮಗನಾದ ಶ್ರೀರಾಮ, ತನಗೆ ರಾಜ್ಯಭಾರ ಸಿಗಲಿಲ್ಲ ಎಂದು ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಇಂದಿನ ರಾಜಕಾರಣಿಗಳಾಗಿದ್ದರೆ ರಾಮ ಇನ್ನಷ್ಟು ದಿನ ವನವಾಸದಲ್ಲೇ ಇರಲಿ ಎನ್ನುತ್ತಿದ್ದರು ಎಂದು ವಿಶ್ಲೇಷಿಸಿದರು.

ಕರ್ನಾಟಕ ಸಂಸ್ಕೃತಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್‌ ಮಾತನಾಡಿ, ಶ್ರೀರಾಮ ಕುಟುಂಬ ಧರ್ಮವನ್ನು ಪ್ರತಿನಿಧಿಸಿದ್ದರೆ, ಶ್ರೀಕೃಷ್ಣ ಲೋಕಧರ್ಮದ ಪ್ರತಿನಿಧಿ. ಕುಟುಂಬ ಧರ್ಮ ಮತ್ತು ಲೋಕಧರ್ಮದ ನಡುವೆ ಸಾಮರಸ್ಯ ಬೆಸೆಯುವ ಕೆಲಸ ಇಂದು ಆಗಬೇಕು.

ವಾಲ್ಮೀಕಿ ರಾಮಾಯಣ, ವ್ಯಾಸರ ಮಹಾಭಾರತ, ಭಾಗವತ ಮಹಾಪುರಾಣವು ಇದೇ ತತ್ವ ಸಾರುತ್ತದೆ. ಕುಟುಂಬ ಧರ್ಮ ಛಿದ್ರವಾಗುತ್ತಿರುವ ಕಾಲಗಟ್ಟದಲ್ಲಿ ನಾವಿದ್ದೇವೆ. ಕುಟುಂಬ ಧರ್ಮವನ್ನು ಗಟ್ಟಿಯಾಗಿ ಹಿಡಿದು ಲೋಕಧರ್ಮವನ್ನು ಅದರೊಂದಿಗೆ ಜತೆಗೂಡಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿದ್ವಾಂಸರಾದ ಶಿಮ್ಲಾದ ಪ್ರೊ.ರಾಜೇಂದ್ರ ಮಿಶ್ರ, ವಾರಣಾಸಿಯ ಡಾ.ಕಾಮೇಶ್ವರ ಉಪಾಧ್ಯಾಯ, ದೆಹಲಿಯ ಪ್ರೊ.ಶಶಿಪ್ರಭಾ ಕುಮಾರ್‌, ಬೆಂಗಳೂರಿನ ಡಾ.ಎಸ್‌.ನಾಗರಾಜ್‌ ಅವರನ್ನು ಸನ್ಮಾನಿಸಲಾಯಿತು. ಭಾರತೀಯ ವಿದ್ಯಾಭವನದ ಅಧ್ಯಕ್ಷ ಎನ್‌.ರಾಮಾನುಜ, ಗೌರವ ಕಾರ್ಯದರ್ಶಿ ಎಸ್‌.ಕೆ.ರಾಘವನ್‌, ಇಸ್ಕಾನ್‌ ಅಧ್ಯಕ್ಷ ಮಧುಪಂಡಿತ್‌ ದಾಸ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.