ಭಾರತದ ಸಂಸ್ಕೃತಿಗೆ ಕರ್ನಾಟಕವೇ ಮುಕುಟಮಣಿ
Team Udayavani, Jan 16, 2018, 11:40 AM IST
ಬೆಂಗಳೂರು: ಭಾರತೀಯ ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಕರ್ನಾಟಕ ಮುಕುಟಮಣಿ ಇದ್ದಂತೆ ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತ್ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
“ಏಕ್ ಭಾರತ್ ಶ್ರೇಷ್ಠ ಭಾರತ್’ ಕಲ್ಪನೆಯಡಿ ಕೇಂದ್ರ ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ ರಾಷ್ಟ್ರೀಯ ಸಂಸ್ಕೃತಿ ಮಹೋತ್ಸವಕ್ಕೆ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತದ ಸಂಸ್ಕೃತಿ, ಕಲೆ ಹಾಗೂ ಸಾಹಿತ್ಯಕ್ಕೆ ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಮುಕುಟಮಣಿ ಇದ್ದಂತೆ. ದೇಶದಲ್ಲಿ ಇರುವ ಪುರತತ್ವ ಸ್ಮಾರಕಗಳಲ್ಲಿ ಅತಿ ಹೆಚ್ಚು ಕರ್ನಾಟಕದಲ್ಲೇ ಇದೆ. ಕಾಶ್ಮೀರದಿಂದ ಕನ್ಯಾಕುಮಾರಿ ವರೆಗಿನ ಭಾರತ ಒಂದೇ ಭಾರತ, ಶ್ರೇಷ್ಠ ಭಾರತ ಎಂದು ಬಣ್ಣಿಸಿದರು.
ಸಂಸ್ಕೃತಿ, ಕಲೆ, ನಾಟಕ, ಸಾಹಿತ್ಯ, ಸಿನಿಮಾ, ನೃತ್ಯ ಇತ್ಯಾದಿ ಕೇವಲ ಮನೋರಂಜನೆಯಲ್ಲ. ಇದು ಭಾರತೀಯ ಸಂಸ್ಕೃತಿ ಹಾಗೂ ವಿವಿಧತೆಯಲ್ಲಿನ ಏಕತೆಯನ್ನು ಬಿಂಬಿಸುತ್ತದೆ ಎಂದರು. ಕೇಂದ್ರ ಸಂಸ್ಕೃತಿ ಹಾಗೂ ಪರಿಸರ ಇಲಾಖೆ ಸಚಿವ ಡಾ.ಮಹೇಶ್ ಶರ್ಮ ಮಾತನಾಡಿ, ಭಾರದ ಪ್ರತಿ 100 ಕಿ.ಮೀಟರ್ಗೆ ಭಾಷೆ, ಧರ್ಮ, ಸಂಸ್ಕೃತಿ ಹಾಗೂ ಸಂವೇದನೆ ಬದಲಾಗುತ್ತದೆ.
ಆದರೂ ನಾವೆಲ್ಲರೂ ಭಾರತೀಯರು. ದೇಶದಲ್ಲಿ 3686 ಪುರಾತತ್ವ ಸ್ಮಾರಕಗಳಿವೆ. ಅವುಗಳ ಪೈಕಿ 506 ಸ್ಮಾರಕ ಕರ್ನಾಟಕದಲ್ಲಿದೆ. ಪಟ್ಟದಕಲ್ಲು, ಹಂಪಿ, ಐಹೊಳೆ, ಪಶ್ಚಿಮಘಟ್ಟ, ಬೀದರ್ ಹಾಗೂ ಗುಲ್ಬರ್ಗದ ಕೋಟೆಗಳು ಕರ್ನಾಟಕದ ಕಲೆ ಮತ್ತು ಪರಂಪರೆಯನ್ನು ವಿವರಿಸುತ್ತದೆ ಎಂದು ಹೇಳಿದರು.
ಸಚಿವೆ ಉಮಾಶ್ರೀ ಮಾತನಾಡಿ, ಯುವ ಪೀಳಿಗೆ ಸಂಸ್ಕೃತಿಯ ಬೇರಿನಿಂದ ದೂರವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೇಂದ್ರ ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಜಾತ ಪ್ರಸಾದ್ ಮೊದಲಾವರು ಉಪಸ್ಥಿತರಿದ್ದರು.
ಕನ್ನಡದಲ್ಲಿ ಮಾತನಾಡಿದ ಕೇಂದ್ರ ಸಚಿವ: ಕೇಂದ್ರ ಸಂಸ್ಕೃತಿ ಸಚಿವ ಡಾ. ಮಹೇಶ್ ಶರ್ಮ ಉತ್ತರ ಪ್ರದೇಶದವರಾದರೂ, ಸುಮಾರು ಒಂದುವರೆ ನಿಮಿಷ ಕನ್ನಡದಲ್ಲೇ ಮಾತನಾಡಿದರು. ಕಾರ್ಯಕ್ರಮದ ಉದ್ದೇಶ ಹಾಗೂ ಕೇಂದ್ರ ಸರ್ಕಾರದ ಸಾಧನೆಯನ್ನು ವಿವರಿಸಿದರು. ಈ ಸಂದರ್ಭದಲ್ಲಿ ಸಭಿಕರು ಖುಷಿಯಿಂದ ಚಪ್ಪಾಳೆ ತಟ್ಟಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.