ನಿರ್ವಹಣೆಯಿಲ್ಲದೆ ಪಾಳುಬಿದ್ದಿರುವ ಇ-ಶೌಚಾಲಯ!


Team Udayavani, Jul 13, 2023, 2:30 PM IST

ನಿರ್ವಹಣೆಯಿಲ್ಲದೆ ಪಾಳುಬಿದ್ದಿರುವ ಇ-ಶೌಚಾಲಯ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರನ್ನು ಶೌಚಮುಕ್ತ ನಗರವನ್ನಾಗಿಸುವ ಉದ್ದೇಶದಿಂದ ನಿರ್ಮಿಸಲಾಗಿದ್ದ ಹೈಟೆಕ್‌ ಇ-ಶೌಚಾಲಯಗಳಿಗೆ ಸಮರ್ಪಕ ನಿರ್ವಹಣೆಯಿಲ್ಲದೇ, ದುರ್ವಾಸನೆ ಬೀರುತ್ತಿವೆ.

ಹೌದು! ನಗರದಲ್ಲಿ ಎಲ್ಲೆಂದರಲ್ಲೇ ಮೂತ್ರವಿಸರ್ಜನೆ ಮಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮಹಾನಗರ ಪಾಲಿಕೆಯು ನಗರಾದ್ಯಂತ ಒಟ್ಟು 100 ಸ್ಥಳಗಳಲ್ಲಿ ಮೊದಲು 169, ನಂತರದ ದಿನಗಳಲ್ಲಿ 74, ಸರಿಸುಮಾರು 241 ಇ-ಶೌಚಾಲಯಗಳನ್ನು ನಿರ್ಮಿಸಿದೆ. ಈ ಪೈಕಿ ಹೆಚ್ಚಿನವು ಬಳಕೆ ಆಗುತ್ತಿಲ್ಲ. ಕೆಲವು ತಾಂತ್ರಿಕ ಸಮಸ್ಯೆಯಿಂದ ಕೆಟ್ಟು ನಿಂತಿದ್ದು, ಇನ್ನೂ ಕೆಲವು ಅಸಮರ್ಪಕ ನಿರ್ವಹಣೆಯಿಂದ ಹಾಳಾಗಿ ಹೋಗಿವೆ.

ಕೋಟ್ಯಂತರ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಈ ಯೋಜನೆಗೆ ನಿರ್ವಹಣೆ ಮತ್ತು ವಿದ್ಯುತ್‌ ಕೊರತೆಯಿಂದಾಗಿ ಸಾರ್ವಜನಿಕರ ಬಳಕೆಗೆ ಸಾಧ್ಯವಾಗುತ್ತಿಲ್ಲ. ಇ-ಶೌಚಾಲಯಗಳ ಸ್ವಚ್ಛತೆ ಸೇರಿದಂತೆ ಸಂಪೂರ್ಣ ನಿರ್ವಹಣೆಗಾಗಿ ಈ ಹಿಂದೆ ನೀಡಿದ್ದ ಟೆಂಡರ್‌ನ ಕಾಲಾವಧಿ ಮುಕ್ತಾಯಗೊಂಡು ಐದಾರು ತಿಂಗಳು ಕಳೆದಿದೆ. ಬಿಬಿಎಂಪಿ ಟೆಂಡರ್‌ ಕರೆದಿದ್ದರೂ ಯಾರೂ ಈ ಟೆಂಡರ್‌ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ. ಇದರ ಪರಿಣಾಮವಾಗಿ ನಗರದಲ್ಲಿನ ನೂರಾರು ಇ-ಟಾಯ್ಲೆಟ್‌ ಗಳಿಗೆ ನಿರ್ವಹಣೆಯ ಕೊರತೆಯಿಂದ ಬಳಕೆಗೆ ಬಾರದ ಸ್ಥಿತಿಯನ್ನು ತಲುಪಿವೆ.

ಸದ್ಯ, ಕೇವಲ 74 ಇ-ಶೌಚಾಲಯಗಳ ನಿರ್ವಹಣೆ ಮಾತ್ರ ಚಾಲ್ತಿಯಲ್ಲಿವೆ. ಕೆಲ ಇ-ಟಾಯ್ಲೆಟ್‌ಗಳಿಗೆ ಲಾಕ್‌ ವ್ಯವಸ್ಥೆ ಇಲ್ಲದೇ ಮುರಿದು ಬಿದ್ದಿರುವ ಬಾಗಿಲುಗಳು, ಸರಿಯಾದ ನೀರು, ವಿದ್ಯುತ್‌ ಸಂಪರ್ಕವಿಲ್ಲ. ಇನ್ನೂ ಕೆಲವೆಡೆ ಬೀಗ ಹಾಕಲಾಗಿದ್ದು, ಸುಸ್ಥಿತಿಯಲ್ಲಿರುವ ಶೌಚಾಲಯಗಳು ಗಬ್ಬು ನಾರುತ್ತಿವೆ. ಸಾರ್ವಜನಿಕರು ಮೊದಲು ಎರಡು ರೂ.ಗಳ ನಾಣ್ಯಗಳನ್ನು ಬಳಸಿ ಇ-ಶೌಚಾಲಯಗಳನ್ನು ಬಳಸಬೇಕಿತ್ತು. ಈ ಕಾರಣದಿಂದಾಗಿ ಬಹುತೇಕರು ಇ-ಶೌಚಾಲಯಗಳ ಬಳಕೆಯೇ ಮಾಡಿಲ್ಲ. ಈ ಅಸಮರ್ಪಕ ಬಳಕೆಯೂ ಅವು ಹಾಳಾಗಲು ಒಂದು ಕಾರಣವಾಗಿದೆ. ಆದ್ದರಿಂದಾಗಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ಇ-ಶೌಚಾಲಯಗಳನ್ನು ಸಾರ್ವಜನಿಕರು ಸಮರ್ಪಕ ಬಳಕೆ ಮಾಡುವ ಉದ್ದೇಶದಿಂದಾಗಿ ಉಚಿತ ಬಳಕೆಗೆ ಅವಕಾಶ ಮಾಡಿಕೊಡಲಾಯಿತು ಎನ್ನುತ್ತಾರೆ ಬಿಬಿಎಂಪಿ ಅಧಿಕಾರಿಗಳು.

SHE ಶೌಚಾಲಯ : ಕೆಲವು ಪ್ರದೇಶಗಳಲ್ಲಿ ಮಹಿಳೆಯರಿಗೆ ಮತ್ತು ಪುರುಷರಿಗೆ ಒಂದೇ ಇ-ಶೌಚಾಲಯ ಇರುವ ಕಾರಣ, ಮುಜುಗರದಿಂದ ಮಹಿಳೆಯರು ಆ ಶೌಚಾಲಯದ ಬಳಕೆಯನ್ನೇ ಮಾಡುವುದಿಲ್ಲ. ಆದ್ದರಿಂದಾಗಿ ಬಿಬಿಎಂಪಿ ಮಹಿಳೆಯರ ಬಳಕೆಗೆ ಮಾತ್ರ ನೂತನ ಯೋಜನೆ “ಶಿ ಶೌಚಾಲಯ’ ನಿರ್ಮಿಸಲು ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಡಿ 100 “ಶಿ’ ಶೌಚಾಲಯಗಳನ್ನು ನಿರ್ಮಿಸಲು ಪ್ರಸ್ತಾವನೆ ಇಡಲಾಗಿದೆ.

ಇ-ಶೌಚಾಲಯಗಳ ನಿರ್ವಹಣೆಗೆಂದು ಟೆಂಡರ್‌ ಕರೆಯಲಾಗಿದೆ. ಆದರೆ, ಯಾರೂ ಟೆಂಡರ್‌ನಲ್ಲಿ ಭಾಗವಹಿಸಲು ಮುಂದೆ ಬಂದಿಲ್ಲ. ಇದರಿಂದಾಗಿ ಇ-ಶೌಚಾಲಯಗಳ ನಿರ್ವಹಣೆ ಇಲ್ಲದಂತಾಗಿದೆ. ಆದ್ದರಿಂದ ಶೀಘ್ರದಲ್ಲೇ ಮರುಟೆಂಡರ್‌ ಕರೆಯಲಾಗುತ್ತದೆ. ● ಪ್ರವೀಣ್‌ ಲಿಂಗಯ್ಯ, ಬಿಬಿಎಂಪಿ ಮುಖ್ಯ ಎಂಜಿನಿಯರ್‌

ವಿ.ವಿ. ಪುರಂ ವೃತ್ತದ ಬಳಿಯಿರುವ ಇ-ಟಾಯ್ಲೆಟ್‌ ಅನ್ನು ಹೆಚ್ಚಾಗಿ ಪುರುಷರೇ ಬಳಸುವುದರಿಂದಾಗಿ, ಮಹಿಳೆಯರು ಅದನ್ನು ಉಪಯೋಗಿಸಲು ಹಿಂಜರಿಯುತ್ತಾರೆ. ಅಲ್ಲದೇ, ಅಲ್ಲಿ ಸರಿಯಾದ ನಿರ್ವಹಣೆಯೂ ಇಲ್ಲವಾಗಿದ್ದು, ಸಮೀಪಿಸುತ್ತಿದ್ದೆಂತೆ ಕೆಟ್ಟವಾಸನೆ ಬರುತ್ತದೆ. ● ಜ್ಯೋತಿ, ಸ್ಥಳೀಯರು

ಭಾರತಿ ಸಜ್ಜನ್‌

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.