ಅವರೆ ಕಾಯಿಯ ತರಾವರಿ ಅವತಾರ


Team Udayavani, Jan 5, 2018, 11:30 AM IST

avaremela.jpg

ಬೆಂಗಳೂರು: ನಗರದ ಶ್ರೀವಾಸವಿ ಕಾಂಡಿಮೆಂಟ್ಸ್‌ನ 18ನೇ ವಾರ್ಷಿಕ ಅವರೆ ಬೇಳೆ ಮೇಳಕ್ಕೆ ಗುರುವಾರ ಚಾಲನೆ ದೊರೆತಿದೆ. ವಿವಿ ಪುರದ ಸಜ್ಜನರಾವ್‌ ವೃತ್ತದಲ್ಲಿನ ಕಾಂಡಿಮೆಂಟ್ಸ್‌ ಬಳಿ ವಿಧಾನ ಪರಿಷತ್‌ ಸದಸ್ಯೆ ತಾರಾ ಅನುರಾಧಾ ಚಾಲನೆ ನೀಡಿದ್ದು, ಜ.15ರವರೆಗೆ ಮೇಳ ನಡೆಯಲಿದೆ.

ಇದೇ ವೇಳೆ ಮಾತನಾಡಿದ ತಾರಾ ಅವರು, ಸಣ್ಣ ಪ್ರಮಾಣದಲ್ಲಿ ಆರಂಭವಾದ ಈ ಮೇಳ ಇಂದು ಬೆಂಗಳೂರಿನ ಪ್ರಮುಖ ಕಾರ್ಯಕ್ರಮವಾಗಿ ಬೆಳೆದಿರುವುದು ಹೆಮ್ಮೆಯ ಸಂಗತಿ. ರೈತರಿಗೂ ಉಪಯೋಗವಾಗುವಂತಹ ಇಂತಹ ಮೇಳಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದರು.

ಅವರೆ ಕಾಯಿಂದ ಪಾಯಸ ಮಾಡುವುದು ನನಗೆ ತಿಳಿದಿತ್ತು. ಆದರೆ ಈ ಮೇಳಕ್ಕೆ ಭೇಟಿ ನೀಡಿದ ನಂತರ ತರಹೇವಾರಿ ಅವರೆ ಕಾಯಿ ಖಾದ್ಯಗಳನ್ನು ತಯಾರಿಸಬಹುದು ಎಂಬುವುದು ನನ್ನ ಅರಿವಿಗೆ ಬಂತು ಎಂದು ಹೇಳಿದರು. ಕಾರ್ಯಕ್ರಮದ ಆಯೋಜಕಿ ಗೀತಾ ಶಿವಕುಮಾರ್‌ ಅವರನ್ನ ತಾರಾ ಪ್ರಶಂಸಿಸಿದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, ಸರ್ಕಾರ ಇಂತಹ ಮೇಳಗಳನ್ನು ಹೆಚ್ಚು ಪ್ರೋತ್ಸಾಹಿಸಿ ತರಹೇವಾರಿ ಅವರೆ ಬೇಳೆ ಖಾದ್ಯಗಳಿಗೆ ಮಾರುಕಟ್ಟೆ ಸೃಷ್ಟಿಸಬೇಕು. ಉಪ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಿದಾಗ ರೈತರಿಗೂ ಸಾಕಷ್ಟು ಅನುಕೂಲ ಆಗಲಿದೆ ಎಂದರು.

ವಿದೇಶಿಯರು ಕೂಡ ಭಾರತೀಯ ಆಹಾರ ಪದ್ಧತಿ ಅನುಕರಿಸುತ್ತಿದ್ದಾರೆ. ಆದರೆ ನಾವು ವಿದೇಶಿ ಆಹಾರದ ಅನುಕರಣೆ ಮಾಡುತ್ತಿದ್ದೇವೆ. ನಮ್ಮಲ್ಲಿಯೇ ಸಿಗುವ ಪೌಷ್ಠಿಕ ಆಹಾರ ಸೇವಿಸುವುದನ್ನು ನಾವು ಮೊದಲು ಕಲಿಯಬೇಕು ಎಂದು ಹೇಳಿದರು.

ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್‌ ಮಾತನಾಡಿ, ವಿದೇಶಿ ಆಹಾರಗಳನ್ನು ನಾವು ಕೊಳ್ಳುವುದರಿಂದ ಆರ್ಥಿಕವಾಗಿ ನಮಗೇ ನಷ್ಟ. ನಮ್ಮ ರೈತರು ಬೆಳೆದ ಬೆಳೆಗಳಲ್ಲಿ ಪೌಷ್ಠಿಕಾಂಶ ಹೆಚ್ಚಿರುತ್ತದೆ. ಅಲ್ಲದೆ ನಮ್ಮ ಬೆಳೆಗಳು ತಾಜಾತನದಿಂದ ಕೂಡಿರಲಿದ್ದು ಆರೋಗ್ಯಕ್ಕೂ ಯೋಗ್ಯ ಎಂದರು. ಈ ವೇಳೆ ಚಿತ್ರನಟಿ ಮಯೂರಿ, ಗಿರಿಜಾ ಲೋಕೇಶ್‌, ಜೆಡಿಎಸ್‌ ಮುಖಂಡ ಶರವಣನ್‌, ಮಮತಾ ಆರ್‌.ವಿ. ದೇವರಾಜ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅವರೆ ಖಾದ್ಯಗಳೂ ಇಲ್ಲಿವೆ: ಹಿತಕಿದ ಅವರೆ ಬೇಳೆ ಹೋಳಿಗೆ, ಅವರೆ ಬೇಳೆ ದೋಸೆ, ಹಿತಕಿದ ಅವರೆ ಬೇಳೆ ಜಾಮೂನು, ಹಿತಕಿದ ಅವರೆ ಬೇಳೆ ಹನಿ ಜಿಲೇಬಿ, ಅವರೆಬೇಳೆ ರೋಲ್‌, ಮಂಚೂರಿ, ರುಮಾಲಿ ರೋಟಿ, ರಾಗಿ ಮುದ್ದೆ-ಅವರೆ ಕಾಳು ಸಾರು ಸೇರಿದಂತೆ ಹಲವು ಬಗೆಯ ಖಾದ್ಯಗಳು ಮೇಳದಲ್ಲಿ ದೊರೆಯಲಿವೆ. ಅವರೆಕಾಯಿ ಕಟ್ಲಿ, ಅವರೆ ಕಾಯಿ ಸ್ಟಿಕ್ಸ್‌ ಈ ಸಲದ ವಿಶೇಷ ಖಾದ್ಯವಾಗಿದ್ದು, ಭೋಜನಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.

ಅವರೆ ಬೇಳೆ ಮೇಳ ಅಂದ್ರೆ ನನಗಿಷ್ಟ. ಪ್ರತಿ ವರ್ಷವೂ ನಾನು ಅವರೆ ಬೇಳೆ ಮೇಳಕ್ಕೆ ಭೇಟಿ ನೀಡಿ ನನಗಿಷ್ಟವಾದ ಭಕ್ಷ್ಯಗಳನ್ನು ಸವಿಯುತ್ತೇನೆ. ಅವರೆ ಕಾಯಿ ದೋಸೆ ಅಂದ್ರೆ ನನಗೆ ಅಚ್ಚುಮೆಚ್ಚು.
-ಮಯೂರಿ, ಚಿತ್ರ ನಟಿ

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.