ಬಿಎಂಟಿಸಿಯ ಸಾಮಾನ್ಯ ಬಸ್ಸಲ್ಲೂ ವೈ ಫೈ


Team Udayavani, May 12, 2017, 11:31 AM IST

bmtc-bus.jpg

ಬೆಂಗಳೂರು: ಪ್ರಯಾಣಿಕರ ಆಕರ್ಷಣೆಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಒತ್ತು ನೀಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗ ಒಂದು ಹೆಜ್ಜೆ ಮುಂದೆ ಹೋಗಿ,  ಸಾಮಾನ್ಯ ಬಸ್‌ಗಳಲ್ಲೂ ಉಚಿತ ವೈ-ಫೈ ಸೇವೆ ನೀಡಲು ನಿರ್ಧರಿಸಿದೆ. 

ಈ ಸಂಬಂಧ ಈಗಾಗಲೇ ಟೆಂಡರ್‌ ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ಅಂದುಕೊಂಡಂತೆ ಎಲ್ಲವೂ ನಡೆದರೆ ಒಂದೆರಡು ತಿಂಗಳಲ್ಲಿ ಪ್ರಯಾಣಿಕರಿಂದ ತುಂಬಿತುಳುಕುವ ಸಾಮಾನ್ಯ ಬಸ್‌ಗಳಲ್ಲೂ ಉಚಿತ ವೈ-ಫೈ ಸೇವೆ ಸಿಗಲಿದೆ. ಹೊಸದಾಗಿ ರಸ್ತೆಗಿಳಿಯಲಿರುವ ಸಾವಿರ ಸಾಮಾನ್ಯ ಬಸ್‌ಗಳಲ್ಲಿ ಈ ಹೈಟೆಕ್‌ ಸೇವೆ ಲಭ್ಯವಾಗಲಿದೆ. 

ಬಸ್‌ಗಳಲ್ಲಿ ಪ್ರಯಾಣಿಸುವ ಮೊದಲ ಹಂತದಿಂದ ಕೊನೆಯ ಹಂತದವರೆಗಿನ ಎಲ್ಲ ಪ್ರಯಾಣಿಕರಿಗೆ, ಇಡೀ ದಿನ ಗರಿಷ್ಠ 30 ಎಂಬಿಯಷ್ಟು ಉಚಿತ ವೈ-ಫೈ ಸೇವೆ ಪಡೆಯಲು ಅವಕಾಶ ಇರುತ್ತದೆ. ಒಂದೇ ಲಾಗ್‌ಇನ್‌ ಮತ್ತು ಪಾಸ್‌ವರ್ಡ್‌ ನೀಡಲಿದ್ದು, ಇದರ ವೇಗ ಕನಿಷ್ಠ 7.2 ಎಂಬಿಪಿಎಸ್‌ ಇರಲಿದೆ. ಮೆಜೆಸ್ಟಿಕ್‌, ಶಿವಾಜಿನಗರ, ಶಾಂತಿನಗರ ಸೇರಿದಂತೆ ನಗರದ ಬಹುತೇಕ ಎಲ್ಲ ಮಾರ್ಗಗಳಲ್ಲೂ ನೂತನ ಸಾಮಾನ್ಯ ಬಸ್‌ಗಳು ಸಂಚರಿಸಲಿದ್ದು, ಅವುಗಳಲ್ಲಿ ಈ ಸೇವೆ ಲಭ್ಯವಾಗಲಿದೆ.   

ಪ್ರಯಾಣಿಕರು ಒಂದು ಬಸ್‌ನಿಂದ ಮತ್ತೂಂದು ಬಸ್‌ಗೆ ಪ್ರಯಾಣಿಸಿದರೂ ವೈ-ಫೈ ಸೇವೆಯಲ್ಲಿ ವ್ಯತ್ಯಯ ಆಗುವುದಿಲ್ಲ. ಹಾಗೂ ನಿಗದಿಗಿಂತ ಹೆಚ್ಚು ಬಳಕೆಗೂ ಅವಕಾಶ ಇರುವುದಿಲ್ಲ ಎಂದು ಬಿಎಂಟಿಸಿ ವಾಣಿಜ್ಯ ವಿಭಾಗದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.  ಮೆಟ್ರೋ ಮೊದಲ ಹಂತ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಪ್ರಯಾಣಿಕರು ಬಿಎಂಟಿಸಿಯಿಂದ ವಿಮುಖರಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಈಚೆಗೆ ಎರಡನೇ ಹಂತದ ಪ್ರಯಣ ದರವನ್ನು 2 ರೂ. ಇಳಿಕೆ ಮಾಡಲಾಯಿತು.

ಈಗ ಹೊಸದಾಗಿ ಸೇರ್ಪಡೆಗೊಳ್ಳಲಿರುವ ಬಸ್‌ಗಳಿಗೆ ವೈ-ಫೈ ಸೇವೆ ಕಲ್ಪಿಸುವ ಮೂಲಕ ಜನರನ್ನು ಆಕರ್ಷಿಸಲು ನಿಗಮ ಮುಂದಾಗಿದೆ. ಈ ಯೋಜನೆಯಲ್ಲಿ ಬಿಎಂಟಿಸಿ ಯಾವುದೇ ಖರ್ಚು ಮಾಡುವುದಿಲ್ಲ. ಬದಲಿಗೆ ಏಜೆನ್ಸಿಗಳಿಗೆ ಟೆಂಡರ್‌ ನೀಡಲಾಗುತ್ತದೆ. ಇದಕ್ಕೆ ಪ್ರತಿಯಾಗಿ ಆ ಏಜೆನ್ಸಿಗಳಿಗೆ ಬಸ್‌ಗಳಲ್ಲಿ ಜಾಹೀರಾತು ಪ್ರಸಾರ ಮಾಡಲು ಅವಕಾಶ ನೀಡಲಾಗುತ್ತದೆ. 

ನಿಲ್ದಾಣಗಳಲ್ಲೂ ವೈ-ಫೈ: ವೋಲ್ವೊ ಬಸ್‌ಗಳು ಮತ್ತು ಆಯ್ದ ಪ್ರಮುಖ ನಿಲ್ದಾಣಗಳಲ್ಲೂ ಉಚಿತ ವೈ-ಫೈ ನೀಡಲಾಗುತ್ತಿದೆ. ಈ ಸಂಬಂಧದ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಪಿಐಟಿ ಎಂಬ ಏಜೆನ್ಸಿಗೆ ಗುತ್ತಿಗೆ ನೀಡಲಾಗಿದೆ. 

ಹಳೆಯ 200 ಮತ್ತು ಹೊಸದಾಗಿ ಬಂದಿರುವ 150 ಸೇರಿ ಒಟ್ಟಾರೆ 350 ವೋಲ್ವೊ ಬಸ್‌ಗಳಲ್ಲಿ ಈ ಸೇವೆ ಇರಲಿದ್ದು, ಮುಂದಿನ ಒಂದೆರಡು ವಾರಗಳಲ್ಲಿ ಜನರಿಗೆ ಸೇವೆ ಲಭ್ಯವಾಗಲಿದೆ. ಮುಖ್ಯವಾಗಿ ವೈಟ್‌ಫೀಲ್ಡ್‌, ಎಲೆಕ್ಟ್ರಾನಿಕ್‌ ಸಿಟಿ, ವಿಮಾನ ನಿಲ್ದಾಣ ಮಾರ್ಗಗಳಲ್ಲಿ ಈ ಇಂಟರ್‌ನೆಟ್‌ ಸೇವೆ ಪಡೆಯಬಹುದು. ಆದರೆ, ಇಲ್ಲಿಯೂ ಒಂದು ದಿನಕ್ಕೆ 30 ಎಂಬಿ ಡಾಟಾ ಬಳಕೆಗೆ ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಇದಲ್ಲದೆ, ಕೆಂಪೇಗೌಡ ಬಸ್‌ ನಿಲ್ದಾಣ (ಮೆಜೆಸ್ಟಿಕ್‌), ಶಿವಾಜಿನಗರ, ಶಾಂತಿನಗರ, ದೊಮ್ಮಲೂರು, ವೈಟ್‌ಫೀಲ್ಡ್‌, ಯಶವಂತಪುರ, ವಿಜಯನಗರ, ಕೆಂಗೇರಿ, ಬನಶಂಕರಿ, ಜಯನಗರ, ಬನ್ನೇರುಘಟ್ಟ, ಕೋರಮಂಗಲ ನಿಲ್ದಾಣಗಳಲ್ಲಿ ಉಚಿತ ಇಂಟರ್‌ನೆಟ್‌ ಸೇವೆ ಲಭ್ಯವಾಗಲಿದೆ. ಉದ್ದೇಶಿತ ನಿಲ್ದಾಣಗಳು ಅಥವಾ ಬಸ್‌ಗಳನ್ನು ಏರಿದ ತಕ್ಷಣ ಮೊಬೈಲ್‌ನಲ್ಲಿ ವೈ-ಫೈ ಆನ್‌ ಮಾಡಬೇಕು. ಆಗ ಪಾಸ್‌ವರ್ಡ್‌ ಕೇಳುತ್ತದೆ. ಆ ಬಸ್‌ ಅಥವಾ ನಿಲ್ದಾಣಗಳಲ್ಲಿ ಸೂಚಿಸಲಾದ ನಿರ್ದೇಶನಗಳ ಮೂಲಕ ಪ್ರಯಾಣಿಕರು ಈ ಸೇವೆ ಪಡೆಯಬಹುದು. 

ಆಯಾ ನಿಲ್ದಾಣಗಳಲ್ಲಿನ ಜನಸಾಂದ್ರತೆಗೆ ಅನುಗುಣವಾಗಿ ವೈ-ಫೈ ಸೇವೆ ಇರುತ್ತದೆ. ಉದಾಹರಣೆಗೆ ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರದಟ್ಟಣೆ ಹೆಚ್ಚಿರುವುದರಿಂದ ಗರಿಷ್ಠ 500 ಪ್ರಯಾಣಿಕರು ಒಟ್ಟಿಗೆ ಈ ಸೇವೆ ಪಡೆಯಬಹುದು. ಅದೇ ರೀತಿ, ಶಿವಾಜಿನಗರ, ಶಾಂತಿನಗರದಲ್ಲಿ ಈ ಸೇವೆಯನ್ನು 100 ಜನ ಮಾತ್ರ ಒಟ್ಟಿಗೆ ಪಡೆಯಲು ಸಾಧ್ಯವಾಗಲಿದೆ. ಇದಕ್ಕಿಂತ ಹೆಚ್ಚು ಜನ ಈ ಸೇವೆ ಪಡೆಯಲು ಸಾಧ್ಯವಾಗುವುದಿಲ್ಲ ಎಂದೂ ಸ್ಪಷ್ಪಪಡಿಸುತ್ತಾರೆ. 

ಓಲಾ-ಉಬರ್‌ಗೂ ಸೆಡ್ಡು?
ಆ್ಯಪ್‌ ಆಧಾರಿತ ಓಲಾ-ಉಬರ್‌ ಟ್ಯಾಕ್ಸಿಗಳು ಹವಾನಿಯಂತ್ರಿತ ಜತೆಗೆ ಉಚಿತ ಇಂಟರ್‌ನೆಟ್‌ ಸೇವೆ ಕಲ್ಪಿಸಲು ಸಿದ್ಧತೆ ನಡೆಸಿವೆ. ಇದಕ್ಕೆ ಪ್ರತಿಯಾಗಿ ಬಿಎಂಟಿಸಿ ಕೂಡ ಪ್ರಯಾಣಿಕರಿಗೆ ಉಚಿತ ವೈ-ಫೈ ಸೇವೆ ನೀಡಲು ಮುಂದಾಗಿದೆ ಎನ್ನಲಾಗಿದೆ.   ಈಗಾಗಲೇ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆಗಳಿಂದಲೂ ಬಿಎಂಟಿಸಿ ಬಸ್‌ಗಳಿಂದ ಪ್ರಯಾಣಿಕರು ವಿಮುಖರಾಗಿದ್ದಾರೆ. ಈ ಮಧ್ಯೆ ಟ್ಯಾಕ್ಸಿಗಳಲ್ಲಿ ವೈ-ಫೈ ಸೇವೆಯನ್ನೂ ಆರಂಭಿಸಿದರೆ ಮತ್ತಷ್ಟು ಹೊಡೆತ ಬೀಳಲಿದೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಬಸ್‌ಗಳಲ್ಲೂ ವೈ-ಫೈ ನೀಡುವ ಮೂಲಕ ಪ್ರತಿಸ್ಪರ್ಧೆಗೆ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 

ವೋಲ್ವೊ ಬಸ್‌ಗಳಲ್ಲಿ ವೈ-ಫೈ  ಸೇವೆ ನೀಡುವ ಸಂಬಂಧ ಈಗಾಗಲೇ ಟೆಂಡರ್‌ ಪೂರ್ಣಗೊಂಡಿದೆ. ಮಿಡಿ ಬಸ್‌ಗಳು ಸೇರಿದಂತೆ ಹೊಸದಾಗಿ ಬಿಎಂಟಿಸಿಗೆ ಸೇರ್ಪಡೆಗೊಳ್ಳಲಿರುವ ಸಾವಿರ ಸಾಮಾನ್ಯ ಬಸ್‌ಗಳಲ್ಲೂ ಉಚಿತ ವೈ-ಫೈ ನೀಡಲಾಗುವುದು. ಇದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಆಗಲಿದೆ. ಜತೆಗೆ ನಿಗಮಕ್ಕೆ ಆದಾಯವೂ ಬರಲಿದೆ.
-ಡಾ.ಏಕರೂಪ್‌ ಕೌರ್‌, ವ್ಯವಸ್ಥಾಪಕ ನಿರ್ದೇಶಕರು, ಬಿಎಂಟಿಸಿ

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.