Crime: ಪತ್ನಿಗೆ 22 ಕಡೆ ತಿವಿದು, ಕತ್ತು ಕೊಯ್ದು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
Team Udayavani, Oct 2, 2024, 11:26 AM IST
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 2016ರಲ್ಲಿ ಪತ್ನಿಯ ಕುತ್ತಿಗೆ ಸುತ್ತ ಮುತ್ತ 22 ಕಡೆ ತಿವಿದು, ನಂತರ ಕತ್ತು ಕೊಯ್ದು ಕೊಲೆ ಮಾಡಿದ್ದ ಪತಿಗೆ 46ನೇ ಸಿಸಿಎಚ್ ನ್ಯಾಯಾಲ ಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.
ಹಲಸೂರು ಠಾಣಾ ವ್ಯಾಪ್ತಿಯ ರವಿರಾಜ್ ಶೆಟ್ಟಿ ಆಪಾದಿತ. 2010ರ ಮೇ 16ರಂದು ಉಡುಪಿ ಜಿಲ್ಲೆಯ ಯಶೋದಾ ಎಂಬುವರ ಪುತ್ರಿ ಸುಪ್ರಿತಾ ಎಂಬುವರನ್ನು ರವಿರಾಜ್ ಶೆಟ್ಟಿ ವಿವಾಹವಾಗಿದ್ದನು. ದಂಪತಿಗೆ ಓರ್ವ ಪುತ್ರಿಯಿದ್ದು ಹಲಸೂರು ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದರು. ರವಿರಾಜ್ ಶೆಟ್ಟಿ ಸಣ್ಣಪುಟ್ಟ ವಿಷಯಗಳಿಗೆ ಪತ್ನಿಯೊಂದಿಗೆ ಗಲಾಟೆ ಮಾಡಿಕೊಳ್ಳುತ್ತ ಮನಸ್ತಾಪ ಹೊಂದಿದ್ದರು. ಅದೇ ದ್ವೇಷದಿಂದ ಸೆ.14ರಂದು ರಾತ್ರಿ ಸುಮಾರು 8.30ರಲ್ಲಿ ಸುಪ್ರಿತಾ ಜತೆಗೆ ಜಗಳ ತೆಗೆದು ಚಾಕುವಿನಿಂದ ಆಕೆಯ ಕುತ್ತಿಗೆ ಸುತ್ತ ಮುತ್ತ 22 ಕಡೆ ತಿವಿದು, ನಂತರ ಕತ್ತು ಕೊಯ್ದು ಕೊಲೆ ಮಾಡಿದ್ದನು.
ಈ ಬಗ್ಗೆ ಹಲಸೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲಸೂರು ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ ಸ್ಪೆಕ್ಟರ್ ಸುಬ್ರಹ್ಮಣ್ಯ ತನಿಖೆ ಪೂರ್ಣಗೊಳಿಸಿ ರವಿರಾಜ್ ಶೆಟ್ಟಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಸಿಸಿಎಚ್-46ನೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಸರ್ಕಾರಿ ಅಭಿಯೋಜಕಿ ಕೆ.ಎಸ್.ಲತಾ ವಾದ ಮಂಡಿಸಿದ್ದರು. ಕೃತ್ಯ ಎಸಗಿರುವುದು ಸಾಬೇತಾದ ಹಿನ್ನೆಲೆಯಲ್ಲಿ ಸಿಸಿಎಚ್ -46ನೇ ನ್ಯಾಯಾಲಯವು ರವಿರಾಜ್ ಶೆಟ್ಟಿಗೆ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shirva: ಅಂದು ಕಸತ್ಯಾಜ್ಯದ ಕೊಂಪೆ; ಇಂದು ಸೆಲ್ಪಿ ಕಾರ್ನರ್..!
ICC Test rankings; ಬುಮ್ರಾಗೆ ಮತ್ತೆ ಅಗ್ರಸ್ಥಾನ:ನಂ.3ಕ್ಕೆ ಜಿಗಿದ ಜೈಸ್ವಾಲ್
Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!
Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್
ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.