Bengaluru: ಸ್ಮಶಾನಕ್ಕೆ ಕರೆದೊಯ್ದು ಪತ್ನಿಯ ಕೊಲೆಗೈದ ಪತಿ!
Team Udayavani, Aug 15, 2024, 1:39 PM IST
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಪತಿಯೇ ಚಾಕುವಿನಿಂದ ಪತ್ನಿಯನ್ನು ಕೊಲೆಗೈದಿರುವ ಘಟನೆ ಕೆಂಗೇರಿ ಠಾಣೆ ವ್ಯಾಪ್ತಿಯ ಜಟ್ಟಿಗನಹಳ್ಳಿ ಸ್ಮಶಾನದ ಖಾಲಿ ಜಾಗದಲ್ಲಿ ನಡೆದಿದೆ.
ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ಮಹಿಳೆ. ಕೃತ್ಯ ಎಸಗಿದ ನಾಗೇಶ್ (35) ಎಂಬಾತನನ್ನು ಬಂಧಿಸಲಾಗಿದೆ.
ಮದ್ಯದ ಅಮಲಿನಲ್ಲಿ ದಂಪತಿ ಗಲಾಟೆ ಮಾಡಿಕೊಂಡಿದ್ದು, ಅದು ವಿಕೋಪಕ್ಕೆ ಹೋದಾಗ, ದುರ್ಘಟನೆ ನಡೆದಿದೆ. ಬೆಂಜಮೀನ್ ಎಂಬು ವರು ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ದೂರುದಾರ ಬೆಂಜಮೀನ್ ಬುಧವಾರ ಬೆಳಗ್ಗೆ 10.30ರ ವೇಳೆ ಬನಶಂಕರಿ 6 ನೇ ಹಂತದ 10 ನೇ ಬ್ಲಾಕ್, ಜಟ್ಟಿಗನಹಳ್ಳಿ ಸ್ಮಶಾನದ ಖಾಲಿ ಜಾಗದ ಬಳಿ ಬಹಿರ್ದೆಸೆಗೆ ಹೋಗಿದ್ದಾಗ ಮಹಿಳೆಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದರು. ಕುತ್ತಿಗೆಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ನಂತರ ಅವರು ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮೃತ ಮಹಿಳೆ ಹೆಸರು ಗೌರಿ ಮತ್ತು ಈಕೆಯ ಪತಿ ನಾಗೇಶ್ ಎಂಬುದು ಗೊತ್ತಾಗಿದೆ.
7-8 ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದು, ಇಬ್ಬರ ನಡುವೆ ಕೌಟುಂಬಿಕ ಕಲಹವಿತ್ತು. ಆಗಾಗ ಜಗಳ ಮಾಡುತ್ತಿದ್ದರು. ನಾಗೇಶ್ ಗೌರಿಯನ್ನು ಸುಮಾರು ಐದಾರು ವರ್ಷಗಳ ಕಾಲ ಬೇರೆ ಊರಿನಲ್ಲಿ ಬಿಟ್ಟಿದ್ದ. ಕಳೆದ 3 ದಿನಗಳ ಹಿಂದಷ್ಟೇ ಗೌರಿಯನ್ನು ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ಮತ್ತೆ ಅವರಿಬ್ಬರು ಮಂಗಳವಾರ ಸಂಜೆ ಜಗಳ ಮಾಡಿಕೊಂಡಿದ್ದಾರೆ. ಸಂಜೆ 7 ಗಂಟೆ ಸುಮಾರಿಗೆ ನಾಗೇಶ್, ಪತ್ನಿ ಗೌರಿಯನ್ನು ಸಶ್ಮಾನದ ರಸ್ತೆಗೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.