ರಾಜ್ಯ ಸರ್ಕಾರದ ವಜಾ ತಕ್ಷಣದ ಆಯ್ಕೆ


Team Udayavani, Jul 20, 2019, 3:06 AM IST

rajya-asr

ಬೆಂಗಳೂರು: ಶುಕ್ರವಾರವೇ ವಿಶ್ವಾಸಮತಯಾಚನೆಯನ್ನು ಪೂರ್ಣಗೊಳಿಸಿ ಎಂದು ನೀಡಲಾಗಿದ್ದ ಎರಡೂ ಸೂಚನೆಗಳನ್ನು ಸಿಎಂ ಕುಮಾರಸ್ವಾಮಿ ಅವರು ಪಾಲಿಸುವಲ್ಲಿ ವಿಫ‌ಲರಾಗಿರುವ ಹಿನ್ನೆಲೆಯಲ್ಲಿ, ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದಾಗಿದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬಹುಮತದ ಸರ್ಕಾರ ಆಡಳಿತದಲ್ಲಿ ಇರುವಂತೆ ನೋಡಿಕೊಳ್ಳುವ ಸಾಂವಿಧಾನಿಕ ಜವಾಬ್ದಾರಿ ರಾಜ್ಯಪಾಲರ ಮೇಲಿದೆ. ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ ಅಥವಾ ಬಹುಮತ ಕಳೆದುಕೊಂಡಿದೆ ಎಂದು ರಾಜ್ಯಪಾಲರಿಗೆ ಮನನವಾದರೆ ತಕ್ಷಣ ಸರ್ಕಾರವನ್ನು ಬಹುಮತಕ್ಕೆ ತರಬೇಕಾಗಿರುವುದು ರಾಜ್ಯಪಾಲರ ಹೊಣೆಗಾರಿಕೆ.

ಆ ಹಿನ್ನೆಲೆಯಲ್ಲಿ ಬಹುಮತ ಸಾಬೀತಿಗೆ ಮುಖ್ಯಮಂತ್ರಿಯವರಿಗೆ ಸೂಚನೆ ನೀಡಿದ್ದಾರೆ. ಆ ಸೂಚನೆ ಪಾಲನೆ ಆಗದಿದ್ದರೆ ತಕ್ಷಣ ನೇರವಾಗಿ ಸರ್ಕಾರ ವಜಾ ಮಾಡುವ ಪರಮ ಅಧಿಕಾರ ರಾಜ್ಯಪಾಲರಿಗಿದೆ ಎಂದು ಸುಪ್ರೀಂಕೋರ್ಟ್‌ ವಕೀಲ ಕೆ.ವಿ ಧನಂಜಯ ಹೇಳುತ್ತಾರೆ.

ಒಂದೊಮ್ಮೆ ಬಹುಮತ ಸಾಬೀತುಪಡಿಸಲು ಒಂದಷ್ಟು ಕಾಲಾವಕಾಶ ಬೇಕು ಎಂದಾದಲ್ಲಿ ಮುಖ್ಯಮಂತ್ರಿಯವರು ರಾಜ್ಯಪಾಲರನ್ನು ಭೇಟಿ ಮಾಡಿ ಕಾಲಾವಕಾಶಕ್ಕೆ ಸಮರ್ಥ ಕಾರಣಗಳನ್ನು ಕೊಟ್ಟು ಮನದಟ್ಟು ಮಾಡಬೇಕು. ಆ ಕಾರಣ ಸಮರ್ಥನೀಯ ಎಂದು ಮನವರಿಕೆ ಆದಲ್ಲಿ ರಾಜ್ಯಪಾಲರು ಕಾಲಾವಕಾಶ ನೀಡಬಹುದು. ನೀಡದಿದ್ದರೆ ಆ ಬಗ್ಗೆ ಚಕಾರ ಎತ್ತುವ ಅಥವಾ ಆಕ್ಷೇಪ ವ್ಯಕ್ತಪಡಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ಧನಂಜಯ ಹೇಳುತ್ತಾರೆ.

ನಿರ್ದೇಶನ ಉಲ್ಲಂಘನೆ ಗಂಭೀರ ವಿಚಾರ: “ರಾಜ್ಯಪಾಲರ ನಿರ್ದೇಶನ ಉಲ್ಲಂ ಸುವುದು ಗಂಭೀರ ವಿಚಾರ,’ ಎಂದು ಹಿರಿಯ ವಕೀಲರು ಹಾಗೂ ಮಾಜಿ ಅಡ್ವೋಕೆಟ್‌ ಜನರಲ್‌ ಅಶೋಕ್‌ ಹಾರನಹಳ್ಳಿ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರಕ್ಕೆ ಬಹುಮತ ಇಲ್ಲ ಎಂದು ರಾಜ್ಯಪಾಲರಿಗೆ ಮೆಲ್ನೋಟಕ್ಕೆ ಕಂಡು ಬಂದರೆ ಬಹುಮತ ಸಾಬೀತಿಗೆ ಸೂಚಿಸಲು ಹಕ್ಕಿದೆ.

ಈಗಾಗಲೇ ರಾಜ್ಯಪಾಲರು ನೀಡಿರುವ ನಿರ್ದೇಶನಗಳನ್ನು ಸಿಎಂ ಉಲ್ಲಂಘಿಸಿದ್ದಾರೆ. ಈ ಅಂಶಗಳನ್ನು ಆಧರಿಸಿ ರಾಜ್ಯಪಾಲರು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಬಹುದು. ರಾಜ್ಯಪಾಲರ ಸೂಚನೆ ಹೊರತಾಗಿಯೂ ಬಹುಮತ ಸಾಬೀತು ವಿಳಂಬವಾಗುತ್ತಿರುವುದು ಗಂಭೀರ ವಿಚಾರವಾಗಿದೆ ಎಂದು “ಉದಯವಾಣಿ’ಗೆ ಅವರು ತಿಳಿಸಿದರು.

ರಾಜ್ಯಪಾಲರಿಗೆ ಅಧಿಕಾರವುಂಟು: ಈ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಹೈಕೋರ್ಟ್‌ ವಕೀಲರಾಗಿರುವ ಎ.ಅರುಣ್‌ ಶ್ಯಾಮ್‌, “ರಾಜ್ಯದಲ್ಲಿ ಸಂವಿಧಾನದ ಚೌಕಟ್ಟಿನಲ್ಲಿ ರಾಜ್ಯದ ಆಡಳಿತ ವ್ಯವಸ್ಥೆಯ ರಾಜ್ಯಪಾಲರು ಮುಖ್ಯಸ್ಥರಾಗಿರುತ್ತಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ, ಸ್ಪೀಕರ್‌ ಹಾಗೂ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡುವ ಸಂವಿಧಾನಬದ್ಧ ಅಧಿಕಾರ ಅವರಿಗಿದೆ ಎಂದಿದ್ದಾರೆ.

ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಘೋಷಿಸಲಾಗಿದೆ. ಒಂದು ಕಡೆ ಸರ್ಕಾರಕ್ಕೆ ಬಹುಮತ ಇಲ್ಲ. ಮತ್ತೂಂದು ಕಡೆ ಸಚಿವರು ಇಲ್ಲದಿದ್ದರೂ ದೈನಂದಿನ ಆಡಳಿತ ಯಥಾಪ್ರಕಾರ ನಡೆಯುತ್ತಿದೆ. “ರಾಜ್ಯಪಾಲರು ತಮಗಿರುವ ಅಧಿಕಾರ ಚಲಾಯಿಸಿ ವಿಶ್ವಾಸ ಮತ ಯಾಚನೆ ಮಾಡಲು ನೀಡಿರುವ ಸೂಚನೆಯನ್ನು ಸ್ಪೀಕರ್‌ ಹಾಗೂ ಮುಖ್ಯಮಂತ್ರಿಗಳು ಉಲ್ಲಂಘಿಸಿದ್ದಾರೆ.

ವಿಶ್ವಾಸಮತ ಯಾಚನೆಯಲ್ಲೂ ವಿಳಂಬ ಮಾಡಲಾಗುತ್ತಿದೆ. ಈ ಅಂಶಗಳನ್ನು ಗಮನಿಸಿ ರಾಜ್ಯದಲ್ಲಿ ಸಂವಿಧಾನ ಬಿಕ್ಕಟ್ಟು ಹಾಗೂ ಅರಾಜಕತೆ ಸೃಷ್ಟಿಯಾಗಿದೆ ಎಂಬ ವಿಸ್ತ್ರತ ವರದಿಯನ್ನು ರಾಷ್ಟ್ರಪತಿಗಳಿಗೆ ಕೊಡಬಹುದು. ಈ ವರದಿ ಪರಿಶೀಲಿಸಿ ರಾಷ್ಟ್ರಪತಿಗಳು, ರಾಷ್ಟ್ರಪತಿ ಆಳ್ವಿಕೆ, ಇನ್ನಿತರೆ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ,’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.