![Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ](https://www.udayavani.com/wp-content/uploads/2024/12/aa-7-415x246.jpg)
ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ದರ ಶೇ.4 ಹೆಚ್ಚಳ
Team Udayavani, Jul 4, 2017, 3:45 AM IST
![GAS-032017.jpg](https://www.udayavani.com/wp-content/uploads/2017/07/3/GAS-032017.jpg)
ಬೆಂಗಳೂರು: ರಾಜ್ಯದಲ್ಲಿ ಜಿಎಸ್ಟಿ ಜಾರಿ ಬಳಿಕ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಶೇ.4ರಷ್ಟು ತೆರಿಗೆ ಹೆಚ್ಚಳವಾಗಲಿದೆ. ಆದರೆ ಗೃಹೇತರ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ. ಈ ಹಿಂದೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಮೇಲೆ ಶೇ.5ರವರೆಗೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಕ್ಕೆ ಅವಕಾಶವಿತ್ತು. ಅದರಂತೆ ಒಂದೊಂದು ರಾಜ್ಯ ಒಂದೊಂದು ಪ್ರಮಾಣದಲ್ಲಿ ತೆರಿಗೆ ವಿಧಿಸಿತ್ತು. ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಮೇಲೆ ಶೇ.1ರಷ್ಟು ತೆರಿಗೆ ವಿಧಿಸಲಾಗಿತ್ತು. ಇದೀಗ ಜಿಎಸ್ ಟಿಯಡಿ ಗೃಹ ಬಳಕೆ ಸಿಲಿಂಡರ್ ಮೇಲೆ
ಶೇ.5ರಷ್ಟು ತೆರಿಗೆ ವಿಧಿಸಿರುವುದರಿಂದ ಗ್ರಾಹಕರು ಶೇ.4ರಷ್ಟು ಹೆಚ್ಚುವರಿ ತೆರಿಗೆ ಭರಿಸಬೇಕಾಗುತ್ತದೆ ಎಂದು
ಮೂಲಗಳು ತಿಳಿಸಿವೆ.
ಗೃಹೇತರ ಬಳಕೆ ಅಡುಗೆ ಅನಿಲ ಸಿಲಿಂಡರ್ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ತೆರಿಗೆ ಸೇರಿ ಸುಮಾರು ಶೇ.18ರಷ್ಟು ತೆರಿಗೆ ವಿಧಿಸಲಾಗಿತ್ತು. ಜಿಎಸ್ಟಿಯಡಿ ಗೃಹೇತರ ಬಳಕೆ ಅಡುಗೆ ಅನಿಲ ಸಿಲಿಂಡರ್ಗೆ ಶೇ.18ರಷ್ಟು ತೆರಿಗೆ ವಿಧಿಸಿರುವುದರಿಂದ ಹೆಚ್ಚಿನ ಹೊರೆಯಾಗದು ಎಂದು ಹೇಳಿವೆ. ಜಿಎಸ್ಟಿ ಜಾರಿ ಬಳಿಕ ಗೃಹ ಬಳಕೆ ಹಾಗೂ ಗೃಹೇತರ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳವಾಗಿದ್ದರೂ ತೆರಿಗೆ ಪ್ರಮಾಣದ ಬಗ್ಗೆ ಸ್ಪಷ್ಟತೆ ಇಲ್ಲ.
ಜಿಎಸ್ಟಿ ಜಾರಿ ಕುರಿತು ಒಂದೆರಡು ಸಭೆ ನಡೆಸಿದ್ದರೂ ಹೆಚ್ಚುವರಿ ತೆರಿಗೆ ಬಗ್ಗೆ ಗೊಂದಲವಿದೆ. ಸದ್ಯ ಹಳೆಯ
ದರದಲ್ಲೇ ಸಿಲಿಂಡರ್ ವಿತರಿಸಲಾಗುತ್ತಿದೆ ಎಂದು ಬೆಂಗಳೂರಿನ ಅಡುಗೆ ಅನಿಲ ಸಿಲಿಂಡರ್ ವಿತರಕ
ಜಗದೀಶ್ಬಾಬು ತಿಳಿಸಿದರು.
ಟಾಪ್ ನ್ಯೂಸ್
![Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ](https://www.udayavani.com/wp-content/uploads/2024/12/aa-7-415x246.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್](https://www.udayavani.com/wp-content/uploads/2024/12/hari-150x87.jpg)
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
![Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ](https://www.udayavani.com/wp-content/uploads/2024/12/SAMMELANA-SAMMANA-2-150x82.jpg)
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
![Yathanal](https://www.udayavani.com/wp-content/uploads/2024/12/Yathanal-150x90.jpg)
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
![BY-Vijayendra](https://www.udayavani.com/wp-content/uploads/2024/12/BY-Vijayendra-1-150x90.jpg)
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
![Baduta-Mandya](https://www.udayavani.com/wp-content/uploads/2024/12/Baduta-Mandya-150x90.jpg)
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.