ಭೂ ರಹಿತರಿಗೆ ಸರ್ಕಾರ ಭೂಮಿ ನೀಡಲಿ
Team Udayavani, Jul 12, 2017, 11:28 AM IST
ಬೆಂಗಳೂರು: ಭೂ ರಹಿತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಕೂಡಲೇ ಎಲ್ಲಾ ಕುಟುಂಬಕ್ಕೂ ಎರಡು ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದರು.
ಎಂ.ಪಿ.ಪ್ರಕಾಶ್ ಪ್ರತಿಷ್ಠಾನ, ರಂಗಭಾರತಿ ಸಂಸ್ಥೆಯಿಂದ ಮಂಗಳವಾರ ಆಯೋಜಿಸಿದ್ದ ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ 77ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ “ಎಂ.ಪಿ.ಪ್ರಕಾಶ್ ರಾಷ್ಟ್ರೀಯ ಸೇವಾಸಿರಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.
“ದೇಶ ಸ್ವಾತಂತ್ರ್ಯ ಪಡೆದು ಏಳು ದಶಕ ಕಳೆದರೂ ಬಡತನ ನಿರ್ಮೂಲನೆ ಆಗಿಲ್ಲ. ಭೂರಹಿತರಿಗೆ ಭೂಮಿ ನೀಡಿ ಮುಖ್ಯ ವಾಹಿನಿಗೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ರಾಜ್ಯದಲ್ಲಿ ಭೂ ರಹಿತರಿಗೆ ಎರಡು ಎಕರೆ ಭೂಮಿ ನೀಡಲು ಶಾಸಕರು ಒಪ್ಪಿಗೆ ನೀಡಿದ್ದರೂ, ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ,’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, “ನಾನು ಚಿಕ್ಕಂದಿನಲ್ಲಿ ಎಂ.ಪಿ.ಪ್ರಕಾಶ್ ಅವರು ಅಭಿಮಾನಿ, ಅನುಯಾಯಿಯಾಗಿ ಅವರ ಗರಡಿಯಲ್ಲೇ ಪಳಗಿ ರಾಜಕೀಯದಲ್ಲಿ ಬೆಳೆದಿದ್ದೇನೆ. ಇಂದಿನ ಯುವ ರಾಜಕಾರಣಿಗಳು ಎಂಪಿ.ಪ್ರಕಾಶ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಸಾಗುವ ಅನಿವಾರ್ಯತೆ ಇದೆ,’ ಎಂದು ಹೇಳಿದರು.
ಚಿಂತಕ ಗೊ.ರು.ಚನ್ನಬಸಪ್ಪ ಅವರಿಗೆ “ಎಂ.ಪಿ.ಪ್ರಕಾಶ್ ಸಾಹಿತ್ಯ ಸೇವಾ ಸಿರಿ ಪ್ರಶಸ್ತಿ’, ಸಾಮರ್ಥ್ಯ ವಿಕಲಚೇತನ ಪುನಶ್ಚೇತನ ಸೇವಾ ಸಂಸ್ಥೆಗೆ “ಮ.ಮ. ಪಾಟೀಲ ಜನಸೇವಕ ಪ್ರಶಸ್ತಿ’, “ಎಂ.ಪಿ.ಕೊಟ್ರಗೌಡ ಕಲಾರಾಧಕ ಪ್ರಶಸ್ತಿ’ಯನ್ನು ನಟಿ ಗಿರಿಜಾ ಲೋಕೇಶ್ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ತಲಾ ಒಂದು ಲಕ್ಷ ರೂ. ನಗದು ಹಾಗೂ ಶಾಶ್ವತ ಫಲಕ ಒಳಗೊಂಡಿವೆ.
ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಮಾಜಿ ಸಚಿವ ಅಮರೇಗೌಡ ಬೈಯಾಪುರ, ಶಿವರಾತ್ರೀಶ್ವರ ದೇಶೀಕೇಂದ್ರ ಮಹಾಸ್ವಾಮಿ, ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.