ಇಂದು ಲಾರಿ ಮಾಲೀಕರ ಮುಷ್ಕರ
Team Udayavani, Oct 10, 2017, 11:22 AM IST
ಬೆಂಗಳೂರು: ಡೀಸೆಲ್ ಉತ್ಪನ್ನವನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಹಾಗೂ 347 ಟೋಲ್ಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಲಾರಿ ಮಾಲೀಕರು ದೇಶಾದ್ಯಂತ ಎರಡು ದಿನಗಳ ಮುಷ್ಕರ ಹಮ್ಮಿಕೊಂಡಿದ್ದು, ಮಂಗಳವಾರವೂ ಲಾರಿ ಸಂಚಾರ ಇರುವುದಿಲ್ಲ.
ಸೋಮವಾರ ಬೆಳಗ್ಗೆಯಿಂದಲೇ ಮುಷ್ಕರ ಆರಂಭವಾಗಿದ್ದು, ಸರಕು ಸಾಗಾಣಿಕೆ ಮಾಡುವ ಲಾರಿಗಳ ಸಂಚಾರ ವಿರಳವಾಗಿದೆ. ಬಹುತೇಕ ಲಾರಿಗಳನ್ನು ರಾಜ್ಯದ ವಿವಿಧ ಗಡಿ ಪ್ರದೇಶದಲ್ಲೇ ನಿಲ್ಲಿಸಲಾಗಿದೆ. ಲಾರಿ ಮುಷ್ಕರದಿಂದ ಒಂದು ದಿನಕ್ಕೆ ದೇಶದಲ್ಲಿ ಸುಮಾರು 5 ಸಾವಿರ ಕೋಟಿ ರೂ.ಗಳಷ್ಟು ವಹಿವಾಟು ನಷ್ಟವಾಗಲಿದೆ.
ಕರ್ನಾಟಕದಲ್ಲಿ 120 ಕೋಟಿ ರೂ.ಗಳಷ್ಟು ವಹಿವಾಟು ನಷ್ಟ ಉಂಟಾಗಲಿದೆ. ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದೇ ಇದ್ದರೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಎಚ್ಚರಿಕೆ ನೀಡಿದರು.
ಎಲ್ಲಾ ಟೋಲ್ಗಳನ್ನು ರದ್ದು ಮಾಡಬೇಕು. ಮುಂಗಡವಾಗಿ ಒಂದು ಲಾರಿಗೆ ವರ್ಷಕ್ಕೆ 50 ಸಾವಿರ ರೂ. ಪಾವತಿಸಲು ನಾವು ಸಿದ್ಧರಿದ್ದೇವೆ. ಟೋಲ್ಗಳಿಂದಾಗಿ ಸಮಯದ ಅಪವ್ಯಯ ಆಗುತ್ತಿದೆ. ವಾರ್ಷಿಕವಾಗಿ ಟೋಲ್ ಪಾವತಿಸಲು ಅವಕಾಶ ನೀಡಿದರೆ, ಸರ್ಕಾರಕ್ಕೂ ಲಾಭ ಹೆಚ್ಚಲಿದೆ. ಲಾರಿ ಮಾಲೀಕರಿಗೂ ಅನುಕೂಲ ಆಗುತ್ತದೆ ಮತ್ತು ಡೀಸೆಲ್ ಕೂಡ ಉಳಿಕೆಯಾಗಲಿದೆ ಎಂದರು.
ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕದ 5 ಲಕ್ಷ ಲಾರಿ ಸೇರಿದಂತೆ ದೇಶಾದ್ಯಂತ 40 ಲಕ್ಷ ಲಾರಿ ಸರಕು ಸಾಗಾಟ ಸ್ಥಗಿತಗೊಳಿಸಿದೆ. ದೇಶಾದ್ಯಂತ ಈಗಾಗಲೇ 1627 ಚೆಕ್ಪೋಸ್ಟ್ಗಳನ್ನು ಹಿಂಪಡೆಯಲಾಗಿದೆ. ಇದೇ ಮಾದರಿಯಲ್ಲಿ ಹೆದ್ದಾರಿಯಲ್ಲಿರುವ 347 ಟೋಲ್ಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.
ಜಿಎಸ್ಟಿ ಅವೈಜ್ಞಾನಿಕವಾಗಿದ್ದು, ತೆರಿಗೆ ಭಾರದಿಂದ ಲಾರಿ ಮಾಲೀಕರು ಕಂಗೆಟ್ಟಿದ್ದಾರೆ. ಡೀಸೆಲ್ ದರವನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು. ಇಲ್ಲವೇ ದರ ಕಡಿಮೆ ಮಾಡಬೇಕು. ಹಳೇ ಲಾರಿ ಮಾರಾಟಕ್ಕೆ ಜಿಎಸ್ಟಿ ವಿಧಿಸುವುದನ್ನು ವಿನಾಯ್ತಿ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.