ಕುಷ್ಠ ರೋಗ ಪತ್ತೆಗೆ ಆಂದೋಲನ
Team Udayavani, Oct 27, 2018, 11:14 AM IST
ಯಲಹಂಕ: ಕುಷ್ಠ ರೋಗ ಪತ್ತೆ ಹಚ್ಚಲು ಆಂದೋಲನ ಆರಂಭಿಸಿದ್ದು, ಬೆಂಗಳೂರು ಉತ್ತರ ತಾಲೂಕಿನ 1,12,590 ಮನೆಗಳಿಗೆ ಭೇಟಿ ನೀಡಿ, 354 ಸಂಶಯಾಸ್ಪದ ಪ್ರಕರಣಗಳನ್ನು ಪತ್ತೆ ಹಚ್ಚಿ ಇಬ್ಬರು ಕುಷ್ಠ ರೋಗಿಗಳಿಗೆ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಮನೋಹರ್ ತಿಳಿಸಿದರು.
ಕುಷ್ಠ ರೋಗ ಪತ್ತೆಗೆ ಆರಂಭಿಸಿರುವ “ಸ್ಪರ್ಶ’ ಆಂದೋಲನದಡಿ ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಿ ಮಾತನಾಡಿದ ಅವರು, ಅ.22ರಿಂದ ನ.4ರವರೆಗೆ 14 ದಿನಗಳ ಕಾಲ ಬೆಂಗಳೂರು ಉತ್ತರ ತಾಲೂಕಿನಲ್ಲಿ 5,29,299 ಮನೆಗಳಿಗೆ ಭೇಟಿ ನೀಡಿ, ಸಂಶಯಾಸ್ಪದ ಚರ್ಮದ ಮಚ್ಚೆ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಲು ಸಲಹೆ ನೀಡಲಾಗುವುದು ಎಂದರು.
ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆ ಪ್ರತಿನಿಧಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಒಳಗೊಂಡಂತೆ ಒಂದು ತಂಡದಲ್ಲಿ ಇಬ್ಬರು ಪ್ರತಿನಿಧಿಗಳಂತೆ ಒಟ್ಟು 1512 ತಂಡದಲ್ಲಿ 3029 ಸದಸ್ಯರನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇವರಲ್ಲಿ ಒಂದು ತಂಡ ದಿನ ಒಂದಕ್ಕೆ 25 ಮನೆಗಳಿಗೆ ತೆರಳಿ 14 ದಿನದೊಳಗೆ ಎಲ್ಲಾ ಮನೆಗಳಲ್ಲಿ ಪರಿಶೀಲನೆ ನಡೆಸಲಿದೆ.
ಮನೆಯಲ್ಲಿ ಯಾರೂ ಇಲ್ಲದಿದರೆ 7ನೇ ದಿನದ ನಂತರ ಮತ್ತೂಮ್ಮೆ ಭೇಟಿ ನೀಡಿ ಪರಿಶೀಲಿಸಿ ರೋಗ ಪತ್ತೆಹಚ್ಚಲಾಗುವುದು. ಆರೋಗ್ಯ ಇಲಾಖೆ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದಾಗ ಅವರು ಕೇಳುವ ಮಾಹಿತಿ ನೀಡುವ ಮೂಲಕ ಸಾರ್ವಜನಿಕರು ಸಹಕರಿಸಬೇಕು. ಈ ಮೂಲಕ ಭಾರತವನ್ನು ಕುಷ್ಠ ರೋಗಮುಕ್ತ ದೇಶವಾಗಿಸಲು ನೆರವಾಗಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.