ಕದ್ದು ಗುಡಿ ಸೇರುತ್ತಿದ್ದ ಕುಖ್ಯಾತನ ಸೆರೆ


Team Udayavani, Nov 17, 2017, 11:31 AM IST

kaddu-gudi.jpg

ಬೆಂಗಳೂರು: ದಶಕಗಳ ಕಾಲ ಕಳವನ್ನೇ ವೃತ್ತಿಯನ್ನಾಗಿಸಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದ ಆರೋಪಿಯನ್ನು ಭಾರತೀನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ನಿವಾಸಿ ಮಂಜುನಾಥ್‌ ಅಲಿಯಾಸ್‌ ಕಲ್ಕೇರೆ ಮಂಜ (32) ಬಂಧಿತ ಆರೋಪಿ.

ಈತನ ಬಂಧನದಿಂದ 6  ಕಳವು ಪ್ರಕರಣಗಳು ಪತ್ತೆಯಾಗಿದ್ದು, 30 ಲಕ್ಷ ರೂ. ಮೌಲ್ಯದ 850 ಗ್ರಾಂ ಚಿನ್ನಾಭರಣ, 850 ಗ್ರಾಂ ಬೆಳ್ಳಿ ವಸ್ತುಗಳು, ಒಂದು ಸ್ವಿಫ್ಟ್ ಕಾರು, 50 ಇಂಚಿನ ಎರಡು ಟಿವಿ ಮತ್ತು ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ.

ಯಾವುದೇ ಕೆಲಸಕ್ಕೆ ಹೋಗದೆ ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಸತತ 15 ವರ್ಷಗಳ ಕಾಲ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ ಈತ, ಬೀಗ ಹಾಕಿರುವ ಮನೆಗಳನ್ನು ಕಬ್ಬಿಣದ ರಾಡ್‌ಗಳಿಂದ ಮೀಟಿ ಕಳವು ಮಾಡುತ್ತಿದ್ದ. ಮೂಲತಃ ರಾಣಿಪೇಟ್‌ನವನಾದ ಈತ ನಗರದ ಉತ್ತರಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.

ಬೆಂಗಳೂರಿನ ಭಾರತೀನಗರ, ಪುಲಕೇಶಿ ನಗರ, ಸೋಲದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಮತ್ತು ಹಾಸನ ಜಿಲ್ಲೆಗಳ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿದೆ. ಇದೇ ವರ್ಷ ಆ.26ರಂದು ಜೈಲಿನಿಂದ ಬಿಡುಗಡೆಯಾಗಿದ್ದ ಈತ, ಆ.31ರಂದು ಕಳ್ಳತನ ಕೃತದ್ಯದಲ್ಲಿ ತೊಡಗಿದ್ದ ಎಂದು ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೇವಲ ಎರಡೇ ದಿನಗಳಲ್ಲಿ ಭಾರತೀನಗರ ಮತ್ತು ಪುಲಕೇಶಿನಗರ ವ್ಯಾಪ್ತಿಯಲ್ಲಿ ಇಬ್ಬರು ಉದ್ಯಮಿಗಳ ಮನೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ. ತನಿಖೆ ಆರಂಭಿಸಿದ ಪೊಲೀಸರಿಗೆ ಈತನ ಮೇಲೆ ಅನುಮಾನ ಬಂದಿತ್ತು. ಈತನನನ್ನು ಹುಡುಕಾಡುತ್ತಿದ್ದ ಪೊಲೀಸರಿಗೆ ಆರೋಪಿ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ. ಈತನಿಂದ ಚಿನ್ನಾಭರಣಗಳನ್ನು ಅಡವಿಟ್ಟುಕೊಳ್ಳುವವರ ವಿರುದ್ಧ ತನಿಖೆ ನಡೆಯುತ್ತಿದೆ. ಹಾಗೆಯೇ ಈತನನ್ನು ಜೈಲಿನಿಂದ ಬಿಡಿಸಲು ಜಾಮೀನು ನೀಡುವ ವ್ಯಕ್ತಿಗಳ ಬಗ್ಗೆಯೂ ನಿಗಾವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇವರೇ ಶ್ರೀರಕ್ಷೆ: ಆರೋಪಿ ಮಂಜ, 10ನೇ ತರಗತಿ ಮುಗಿಯುತ್ತಿದ್ದಂತೆ ಕಳ್ಳತನಕ್ಕೆ ಇಳಿದಿದ್ದ. ಯಾರೊಟ್ಟಿಗೂ ಸೇರದ ಈತ ಕೃತ್ಯವೆಸಗುತ್ತಿದ್ದ. ರಾಮಮೂರ್ತಿನಗರದ ಕಲ್ಕೇರೆಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಂಜ, ಪರಿಚಿತ ಪ್ರದೇಶಗಳಲ್ಲಿ ಮಾತ್ರ ಕಳವು ಮಾಡುತ್ತಿದ್ದ.

ಕಳವು ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಇಲ್ಲಿನ ದೇವಾಲಯಗಳಲ್ಲಿ ಮಲಗುತ್ತಿದ್ದ. ವಿಶೇಷವೆಂದರೆ ಯಾವುದೇ ಸಂದರ್ಭದಲ್ಲಿಯೂ ಪೊಲೀಸರು ದೇವಾಲಯದ ಮೇಲೆ ಪೊಲೀಸರು ಬಂದು ಪರಿಶೀಲನೆ ನಡೆಸುವುದಿಲ್ಲ ಎಂಬ ನಂಬಿಕೆ ಮೇಲೆ ಈ ರೀತಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

44 ಕೇಸ್‌, 20 ಕ್ಲೀನ್‌ಚೀಟ್‌: 15 ವರ್ಷದ ಕಳ್ಳತನ ಜೀವನದಲ್ಲಿ ಈತನ ವಿರುದ್ಧ 44 ಪ್ರಕರಣಗಳು ದಾಖಲಾಗಿದ್ದು, 20 ಪ್ರಕರಣಗಳು ಖುಲಾಸೆಯಾಗಿವೆ. ಇನ್ನುಳಿದ 24 ಪ್ರಕರಣಗಳ ವಿಚಾರಣೆ ಬಾಕಿಯಿದೆ. ಎರಡು ವರ್ಷಗಳ ಹಿಂದೆ ಜೈಲು ಸೇರಿದ್ದ ಮಂಜುನಾಥ್‌, ಬಿಡುಗಡೆಯಾದ ಐದೇ ದಿನಗಳಲ್ಲಿ ಹಾಸನದಲ್ಲಿ ಮನೆಯೊಂದರ ಕಳ್ಳತನ ಮಾಡಿದ್ದ. ಇಲ್ಲಿ 550 ಗ್ರಾಂ ಚಿನ್ನ ಕದ್ದು ಐಷಾರಾಮಿ ಜೀವನ ನಡೆಸುತ್ತಿದ್ದ ಎಂದು ಪೊಲೀಸರು ಹೇಳಿದರು.

ಕಾರು ಖರೀದಿ: ಹಾಸನದಲ್ಲಿ ಕಳವು ಮಾಡಿದ್ದ ಚಿನ್ನಾಭರಣ ಮಾರಾಟ ಮಾಡಿ ಸ್ವಿಫ್ಟ್ ಕಾರು ಖರೀದಿಸಿದ್ದ. ಇದೇ ಕಾರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೋಗಿ ಒಂಟಿ ಮನೆಗಳು, ಬೀಗ ಹಾಕಿದ ಮನೆಗಳನ್ನು ಪತ್ತೆ ಹಚ್ಚಿ ಕಳವು ಮಾಡುತ್ತಿದ್ದ. ಅದಕ್ಕಾಗಿ ಕಾರಿನಲ್ಲಿ ಆಯುಧಗಳನ್ನು ಕೂಡ ಇಟ್ಟಿದ್ದ. ಮನೆ ಬೀಗವನ್ನು ಸುಲಭವಾಗಿ ಮುರಿಯುವ ಸಲುವಾಗಿ ಎರಡು ಚೂಪೂಗೊಳಿಸಿದ ಕಬ್ಬಿಣದ ರಾಡ್‌ ಯಾವಾಗಲೂ ಕಾರಿನಲ್ಲಿರುತ್ತಿತ್ತು.

ಟಿವಿ ಕೊಟ್ಟ ಮಾಹಿತಿ!: ಕಳ್ಳತನಕ್ಕೆ ಹೋದಾಗ 50 ಇಂಚಿನ ಎರಡು ಟಿವಿಗಳನ್ನು ಕಳ್ಳತನ ಮಾಡಿದ್ದ ಮಂಜುನಾಥ್‌, ಈ ಪೈಕಿ ಒಂದನ್ನು ಅಡವಿಟ್ಟು ಹಣ ಪಡೆದುಕೊಳ್ಳುವ ಸಲುವಾಗಿ ಶಿವಾಜಿನಗರಕ್ಕೆ ಬಂದಿದ್ದ. ಟಿವಿ ಅಡವಿಡಲು ಬಂದವನ ಮೇಲೆ ಸಾಕಷ್ಟು ಅನುಮಾನ ಬಂದ ಹಿನ್ನೆಲೆಯಲ್ಲಿ ಬಾತ್ಮೀದಾರರೊಬ್ಬರು ಭಾರತೀನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ‌ ನಡೆಸಿದಾಗ  ಆರೋಪಿಯ ಕಳ್ಳ ಚರಿತ್ರೆ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.