ಮರಳು ಸಮಸ್ಯೆ ನಿವಾರಿಸುವ ಉದ್ದೇಶ


Team Udayavani, Jun 8, 2019, 3:04 AM IST

mangaloora

ಬೆಂಗಳೂರು: ಮರಳು ಅಭಾವ ಹಾಗೂ ಕೃತಕ ಬೇಡಿಕೆ ಸಮಸ್ಯೆ ತಪ್ಪಿಸಲು ಮಂಗಳೂರು ನಗರದಲ್ಲಿ “ಸ್ಯಾಂಡ್‌ ಬಜಾರ್‌’ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸುವ ಚಿಂತನೆಯಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಹದಿನೈದು ದಿನಗಳ ಹಿಂದೆ ಮಂಗಳೂರು ನಗರದಲ್ಲಿ ಆರಂಭಿಸಿರುವ ಸ್ಯಾಂಡ್‌ ಬಜಾರ್‌ ಆ್ಯಪ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಅಗತ್ಯ ಇರುವವರಿಗೆ ಬೇಕಾದಷ್ಟು ಮರಳು ನ್ಯಾಯಯುತ ಬೆಲೆಯಲ್ಲಿ ಸಿಗುತ್ತಿದೆ ಎಂದು ಹೇಳಿದರು.

ಮರಳಿನ ಅಗತ್ಯ ಇರುವವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಬಳಿ ನೋಂದಾಯಿಸಬೇಕು. ಆ ನಂತರ ಲಾರಿ ಹಾಗೂ ಮರಳು ಎಲ್ಲಿ ಸಿಗುತ್ತದೆ ಎಂಬುದರ ಮಾಹಿತಿ ಅವರ ಮೊಬೈಲ್‌ಗೆ ರವಾನೆಯಾಗಲಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯೇ ಮರಳಿಗೆ ದರ ನಿಗದಿಪಡಿಸಲಿದೆ. ಮರಳು ಸಾಗಣೆ ಲಾರಿ ಹೊಂದಿರುವವರು ನೋಂದಣಿ ಮಾಡಿಸಿಕೊಂಡಿರಬೇಕು. ಹೀಗಾಗಿ, ಜಿಲ್ಲಾಡಳಿತ ವತಿಯಿಂದಲೇ ಮರಳು ಅಗತ್ಯ ಇದ್ದವರಿಗೆ ಪೂರೈಕೆಯಾಗುತ್ತಿದೆ ಎಂದು ತಿಳಿಸಿದರು.

ಲಾರಿಗೆ ಪ್ರತಿ ಕಿ.ಮೀ.ಗೆ ಇಂತಿಷ್ಟು ಹಣ ನಿಗದಿಪಡಿಸಲಾಗುತ್ತದೆ. ಮರಳಿಗೂ ದರ ನಿಗದಿಪಡಿಸಲಾಗುತ್ತದೆ. ಗ್ರಾಹಕರು ಜಿಲ್ಲಾಡಳಿತಕ್ಕೆ ನೇರವಾಗಿ ಹಣ ಪಾವತಿಸಿ ಅನುಮತಿ ಪಡೆಯಬಹುದು. ಜಿಲ್ಲಾಡಳಿತ ಮರಳು ಬ್ಲಾಕ್‌ ಗುತ್ತಿಗೆದಾರರಿಗೆ ಹಾಗೂ ಲಾರಿ ಮಾಲೀಕರಿಗೆ ಹಣ ಪಾವತಿಸಲಿದೆ. ಈ ವ್ಯವಸ್ಥೆಯಿಂದ ಕೃತಕ ಮರಳು ಅಭಾವ, ಮನಸೋಯಿಚ್ಛೆ ದರ ಹೆಚ್ಚಳ, ಅಕ್ರಮ ಸಾಗಣೆಗೆ ಕಡಿವಾಣ ಬಿದ್ದಿದೆ. ಈ ಪದ್ಧತಿ ಯಶಸ್ವಿಯಾದರೆ ರಾಜ್ಯಾದ್ಯಂತ ವಿಸ್ತರಣೆ ಮಾಡಬಹುದು. ಇದರಿಂದ ಮರಳು ಸಮಸ್ಯೆ ತಲೆದೋರುವುದು ತಪ್ಪಲಿದೆ. ಅಗತ್ಯ ಇದ್ದವರಿಗೆ ಮರಳು ಸಿಗಲಿದೆ ಎಂದರು.

ಸಿಸಿ ಟಿವಿ: ಕೇರಳ ಗಡಿ ಭಾಗಕ್ಕೆ ಮರಳು ಅಕ್ರಮ ಸಾಗಾಟ ಜತೆಗೆ ಡ್ರಗ್ಸ್‌ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಜಾಗೃತ ದಳ ನಿಯೋಜಿಸಲಾಗುವುದು ಎಂದು ತಿಳಿಸಿದರು.

ಅಕ್ರಮ ಮರಳು ಸಾಗಾಟದಾರರು ಮಾಹಿತಿ ರವಾನೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಅಕ್ರಮ ತಡೆಗಟ್ಟುವ ಅಧಿಕಾರಿಗಳು ಎಲ್ಲಿ ಯಾವ ಹೊತ್ತಿಗೆ ಬರುತ್ತಾರೆ, ಎಲ್ಲಿಂದ ಬಿಟ್ಟರು, ಎಲ್ಲಿಗೆ ತಲುಪಿದರು, ಯಾವ ಮಾರ್ಗದಲ್ಲಿ ಬರುತ್ತಿದ್ದಾರೆ ಎಂಬೆಲ್ಲಾ ಮಾಹಿತಿ ಒಬ್ಬರಿಂದ ಒಬ್ಬರಿಗೆ ರವಾನೆ ಮಾಡುತ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.